<p><strong>ತುಮಕೂರು:</strong> ಸಾಕಷ್ಟು ಸಮಸ್ಯೆಗಳಿಗೆ ಸಿಲುಕಿದ್ದ ಅಮಾನಿಕೆರೆಯಲ್ಲಿರುವ ಗಾಜಿನ ಮನೆ ನವೀಕರಣಕ್ಕೆ ₹3 ಕೋಟಿ, ಅಮಾನಿಕೆರೆಯಲ್ಲಿ ಜಲಕ್ರೀಡೆ ಅಕಾಡೆಮಿ ಸ್ಥಾಪನೆ, ಊರ್ಡಿಗೆರೆ ಹೋಬಳಿ ಮಾಚನಹಳ್ಳಿಯಲ್ಲಿ ಸುಸಜ್ಜಿತ ಬಡಾವಣೆ ನಿರ್ಮಾಣ ಮಾಡಲು ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ) ನಿರ್ಧರಿಸಿದೆ.</p>.<p>2026-27ನೇ ಸಾಲಿನ ಟೂಡಾ ಬಜೆಟ್ನಲ್ಲಿ ಈ ಯೋಜನೆಗಳನ್ನು ಪ್ರಸ್ತಾಪಿಸಲಾಗಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಬಜೆಟ್ಗೆ ಒಪ್ಪಿಗೆ ನೀಡಲಾಗಿದೆ.</p>.<p>ಅಮಾನಿಕೆರೆಯಲ್ಲಿರುವ ಗಾಜಿನ ಮನೆಯಲ್ಲಿ ವರ್ಷವಿಡೀ ಒಂದಿಲ್ಲೊಂದು ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಮಳೆಗಾಲದಲ್ಲಿ ಗಾಳಿ- ಮಳೆಗೆ ಗಾಜುಗಳು ಒಡೆದು ಅಸ್ತವ್ಯಸ್ತವಾಗುತ್ತಿರುತ್ತವೆ. ಪ್ರತಿಧ್ವನಿ ನಿಯಂತ್ರಣ ವ್ಯವಸ್ಥೆ ಇಲ್ಲವಾಗಿದ್ದು, ಪ್ರಸ್ತುತ ಮೀಸಲಿಟ್ಟಿರುವ ₹1.50 ಕೋಟಿ ಹಣ ಸಾಲುವುದಿಲ್ಲ. ಅನುದಾನದ ಮೊತ್ತ ಹೆಚ್ಚಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಭೆಯಲ್ಲಿ ಸಲಹೆ ಮಾಡಿದರು. ಇದನ್ನು ಪರಿಗಣಿಸಿ ₹3 ಕೋಟಿಗೆ ಹೆಚ್ಚಳ ಮಾಡಿ ಅನುಮೋದನೆ ನೀಡಲಾಯಿತು.</p>.<p>ತುಮಕೂರು ಅಮಾನಿಕೆರೆಯಲ್ಲಿ ಕಯಾಕಿಂಗ್ ಹಾಗೂ ಕೆನೋಯಿಂಗ್ ಜಲಕ್ರೀಡಾ ಅಕಾಡೆಮಿ ಸ್ಥಾಪಿಸಲು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ನಗರ ರಿಂಗ್ ರಸ್ತೆಯಲ್ಲಿರುವ ದಿಬ್ಬೂರು ವೃತ್ತದಲ್ಲಿ ಅಪಘಾತ ಹೆಚ್ಚಳವಾಗಿದ್ದು, ಪೊಲೀಸರ ಸಲಹೆಯಂತೆ ಅಭಿವೃದ್ಧಿಪಡಿಸುವುದು. ಗೆದ್ದಲಹಳ್ಳಿ ಗ್ರಾಮದಲ್ಲಿ ಅಂಕಿತ ಎಜುಕೇಷನ್ ಟ್ರಸ್ಟ್ಗೆ ಹಂಚಿಕೆಯಾಗಿರುವ ನಾಗರಿಕ ಸೌಕರ್ಯ ನಿವೇಶನದ ಉದ್ದೇಶ ಬದಲಾವಣೆಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲು ನಿರ್ಧರಿಸಲಾಯಿತು.</p>.<p>ಟೂಡಾ ಆಯುಕ್ತ ಉಮೇಶ್ಚಂದ್ರ ಬಜೆಟ್ ಮಂಡಿಸಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಹಾನಗರ ಪಾಲಿಕೆ ಆಯುಕ್ತರಾದ ಶುಭ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ್ ಉಪಸ್ಥಿತರಿದ್ದರು.</p>.<p><strong>ಮಾಚನಹಳ್ಳಿ ಬಳಿ ಟೂಡಾ ಬಡಾವಣೆ</strong> </p><p>ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ಮಾಚನಹಳ್ಳಿ ಗ್ರಾಮದ ಬಳಿ 56 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಬಡಾವಣೆ ನಿರ್ಮಿಸಲು ಉದ್ದೇಶಿಸಲಾಗಿದೆ. ರೈತರಿಂದ ವಶಪಡಿಸಿಕೊಳ್ಳುವ ಜಮೀನಿಗೆ ಪರಿಹಾರ ಅಥವಾ 50:50 ಅನುಪಾತದ ಪಾಲುದಾರಿಕೆಯಲ್ಲಿ ಬಡಾವಣೆ ನಿರ್ಮಿಸಲಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸಾಕಷ್ಟು ಸಮಸ್ಯೆಗಳಿಗೆ ಸಿಲುಕಿದ್ದ ಅಮಾನಿಕೆರೆಯಲ್ಲಿರುವ ಗಾಜಿನ ಮನೆ ನವೀಕರಣಕ್ಕೆ ₹3 ಕೋಟಿ, ಅಮಾನಿಕೆರೆಯಲ್ಲಿ ಜಲಕ್ರೀಡೆ ಅಕಾಡೆಮಿ ಸ್ಥಾಪನೆ, ಊರ್ಡಿಗೆರೆ ಹೋಬಳಿ ಮಾಚನಹಳ್ಳಿಯಲ್ಲಿ ಸುಸಜ್ಜಿತ ಬಡಾವಣೆ ನಿರ್ಮಾಣ ಮಾಡಲು ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ) ನಿರ್ಧರಿಸಿದೆ.</p>.<p>2026-27ನೇ ಸಾಲಿನ ಟೂಡಾ ಬಜೆಟ್ನಲ್ಲಿ ಈ ಯೋಜನೆಗಳನ್ನು ಪ್ರಸ್ತಾಪಿಸಲಾಗಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಬಜೆಟ್ಗೆ ಒಪ್ಪಿಗೆ ನೀಡಲಾಗಿದೆ.</p>.<p>ಅಮಾನಿಕೆರೆಯಲ್ಲಿರುವ ಗಾಜಿನ ಮನೆಯಲ್ಲಿ ವರ್ಷವಿಡೀ ಒಂದಿಲ್ಲೊಂದು ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಮಳೆಗಾಲದಲ್ಲಿ ಗಾಳಿ- ಮಳೆಗೆ ಗಾಜುಗಳು ಒಡೆದು ಅಸ್ತವ್ಯಸ್ತವಾಗುತ್ತಿರುತ್ತವೆ. ಪ್ರತಿಧ್ವನಿ ನಿಯಂತ್ರಣ ವ್ಯವಸ್ಥೆ ಇಲ್ಲವಾಗಿದ್ದು, ಪ್ರಸ್ತುತ ಮೀಸಲಿಟ್ಟಿರುವ ₹1.50 ಕೋಟಿ ಹಣ ಸಾಲುವುದಿಲ್ಲ. ಅನುದಾನದ ಮೊತ್ತ ಹೆಚ್ಚಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಭೆಯಲ್ಲಿ ಸಲಹೆ ಮಾಡಿದರು. ಇದನ್ನು ಪರಿಗಣಿಸಿ ₹3 ಕೋಟಿಗೆ ಹೆಚ್ಚಳ ಮಾಡಿ ಅನುಮೋದನೆ ನೀಡಲಾಯಿತು.</p>.<p>ತುಮಕೂರು ಅಮಾನಿಕೆರೆಯಲ್ಲಿ ಕಯಾಕಿಂಗ್ ಹಾಗೂ ಕೆನೋಯಿಂಗ್ ಜಲಕ್ರೀಡಾ ಅಕಾಡೆಮಿ ಸ್ಥಾಪಿಸಲು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ನಗರ ರಿಂಗ್ ರಸ್ತೆಯಲ್ಲಿರುವ ದಿಬ್ಬೂರು ವೃತ್ತದಲ್ಲಿ ಅಪಘಾತ ಹೆಚ್ಚಳವಾಗಿದ್ದು, ಪೊಲೀಸರ ಸಲಹೆಯಂತೆ ಅಭಿವೃದ್ಧಿಪಡಿಸುವುದು. ಗೆದ್ದಲಹಳ್ಳಿ ಗ್ರಾಮದಲ್ಲಿ ಅಂಕಿತ ಎಜುಕೇಷನ್ ಟ್ರಸ್ಟ್ಗೆ ಹಂಚಿಕೆಯಾಗಿರುವ ನಾಗರಿಕ ಸೌಕರ್ಯ ನಿವೇಶನದ ಉದ್ದೇಶ ಬದಲಾವಣೆಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲು ನಿರ್ಧರಿಸಲಾಯಿತು.</p>.<p>ಟೂಡಾ ಆಯುಕ್ತ ಉಮೇಶ್ಚಂದ್ರ ಬಜೆಟ್ ಮಂಡಿಸಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಹಾನಗರ ಪಾಲಿಕೆ ಆಯುಕ್ತರಾದ ಶುಭ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ್ ಉಪಸ್ಥಿತರಿದ್ದರು.</p>.<p><strong>ಮಾಚನಹಳ್ಳಿ ಬಳಿ ಟೂಡಾ ಬಡಾವಣೆ</strong> </p><p>ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ಮಾಚನಹಳ್ಳಿ ಗ್ರಾಮದ ಬಳಿ 56 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಬಡಾವಣೆ ನಿರ್ಮಿಸಲು ಉದ್ದೇಶಿಸಲಾಗಿದೆ. ರೈತರಿಂದ ವಶಪಡಿಸಿಕೊಳ್ಳುವ ಜಮೀನಿಗೆ ಪರಿಹಾರ ಅಥವಾ 50:50 ಅನುಪಾತದ ಪಾಲುದಾರಿಕೆಯಲ್ಲಿ ಬಡಾವಣೆ ನಿರ್ಮಿಸಲಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>