‘ಹಟ್ಟಿಗಳಲ್ಲಿ ಸಮಸ್ಯೆ ಇರುವುದು ಗಮನಕ್ಕೆ ಬಂದರೂ ಯಾಕೆ ಗಂಭೀರವಾಗಿ ಪರಿಗಣಿಸಲಿಲ್ಲ. ಊರಾಚೆ ಇರುವ ಹೆಣ್ಣು ಮಕ್ಕಳಿಗೆ ಯಾವ ಸೌಲಭ್ಯ ಕಲ್ಪಿಸಲಾಗಿದೆ. ಬಾಣಂತಿ, ಮಗುವನ್ನು ಗುಡಿಸಲಿನಲ್ಲಿ ಇರಲು ಯಾಕೆ ಬಿಟ್ಟಿದ್ದೀರಿ? ಇದಕ್ಕೆ ಪರ್ಯಾಯ ವ್ಯವಸ್ಥೆ ಯಾಕೆ ಮಾಡಲಿಲ್ಲ. ಮೌಢ್ಯಾಚರಣೆ ತಡೆಯುವುದು ನಿಮ್ಮ ಕರ್ತವ್ಯ ಅಲ್ಲವೇ? ಎಂದು ತಾ.ಪಂ ಇಒ ಅಪೂರ್ವ, ತಹಶೀಲ್ದಾರ್ ಮಂಜುನಾಥ್ ಅವರನ್ನು ಪ್ರಶ್ನಿಸಿದರು.