<p><strong>ತುಮಕೂರು</strong>: ಸರ್ಕಾರ ಪುಸ್ತಕ ಖರೀದಿಸಿ ನಾಲ್ಕು ವರ್ಷಗಳಾಗಿವೆ. ಯಾವ ಸರ್ಕಾರಗಳೂ ಸಾಹಿತ್ಯವನ್ನು ಪ್ರೋತ್ಸಾಹಿಸುತ್ತಿಲ್ಲ. ಈಗಿನ ರಾಜಕಾರಣಿಗಳಿಗೆ ಸಾಹಿತ್ಯ, ಸಂಸ್ಕೃತಿ ಬೇಕಾಗಿಲ್ಲ ಎಂದು ಸಾಹಿತಿ ಕರೀಗೌಡ ಬೀಚನಹಳ್ಳಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ, ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಹಿಂದೆ ರಾಜಾಶ್ರಯದಲ್ಲಿ ಸಾಹಿತ್ಯ ರಚನೆ ಆಗುತ್ತಿತ್ತು. ರಾಜ, ಮಹಾರಾಜರು ಸಾಹಿತ್ಯ, ಸಾಹಿತಿಗಳನ್ನು ಪ್ರೋತ್ಸಾಹಿಸುತ್ತಿದ್ದರು. ಈಗ ಅಂತಹ ಪ್ರೋತ್ಸಾಹ ಸಿಗುತ್ತಿಲ್ಲ. ಶಾಲಾ– ಕಾಲೇಜು ಮಕ್ಕಳು ಪುಸ್ತಕ ಓದಬೇಕು. ಪುಸ್ತಕದ ಜ್ಞಾನ ಮೊಬೈಲ್ನಲ್ಲಿ ಸಿಗುವುದಿಲ್ಲ ಎಂದರು.</p>.<p>ಸಾಹಿತ್ಯ, ಸಂಸ್ಕೃತಿ ಬೆಳೆಸಲು ಮೈಸೂರು ಮಹಾರಾಜರು 112 ವರ್ಷಗಳ ಹಿಂದೆ ಸಾಹಿತ್ಯ ಪರಿಷತ್ತು ಸ್ಥಾಪಿಸಿದರು. ಇಂದಿನ ತನಕ ಭಾಷೆ, ಸಾಹಿತ್ಯ, ಸಂಸ್ಕೃತಿ ಬೆಳೆಸುವ ಚಟುವಟಿಕೆ ನಡೆಸಿಕೊಂಡು ಬರಲಾಗುತ್ತಿದೆ. ಸರ್ಕಾರ, ದಾನಿಗಳು ಅಗತ್ಯ ಸಹಕಾರ ನೀಡಬೇಕು ಎಂದು ಕೋರಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ‘ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಸರ್ಕಾರ, ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರಿಷತ್ತಿಗೆ ಸಹಾಯ ಮಾಡುತ್ತಿದ್ದಾರೆ. ಬೇಡುವ ಕೈ ಶುದ್ಧವಾಗಿದ್ದರೆ ಕೊಡುವ ಕೈಗಳಿಗೆ ಕೊರತೆಯಿಲ್ಲ’ ಎಂದರು.</p>.<p>ಸುಶೀಲಾ ಸದಾಶಿವಯ್ಯ ಅವರಿಗೆ ಭಾಗೀರಥಮ್ಮ ದತ್ತಿ ಪ್ರಶಸ್ತಿ, ಪ.ನಾ.ಹಳ್ಳಿ ಹರೀಶ್ಗೆ ಶಾಂಪುರ ಭಾಗೀರಥಮ್ಮ ನೆನಪಿನ ಪ್ರಶಸ್ತಿ, ಕೆ.ಮಂಜೇಶ್ ಅವರಿಗೆ ದೇವಪ್ರಕಾಶ್ ಹಾಸ್ಯ ಪ್ರಶಸ್ತಿ, ಪತ್ರಿಕಾ ಛಾಯಾಗ್ರಾಹಕರಾದ ಟಿ.ಆರ್.ರೇಣುಕಾಪ್ರಸಾದ್, ಟಿ.ಎಚ್.ಸುರೇಶ್ ಅವರಿಗೆ ದೇವಪ್ರಕಾಶ್ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಲೇಖಕಿ ಬಾ.ಹ.ರಮಾಕುಮಾರಿ, ಕೈಗಾರಿಕೋದ್ಯಮಿ ಎಚ್.ಜಿ.ಚಂದ್ರಶೇಖರ್, ಸರ್ವೋದಯ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಕೆ.ವಿ.ಸುಬ್ಬರಾವ್, ಇತಿಹಾಸಕಾರ ಡಿ.ಎನ್.ಯೋಗೀಶ್ವರಪ್ಪ, ಕಂಟಲಗೆರೆ ಸಣ್ಣಹೊನ್ನಯ್ಯ, ಎಂ.ಎಚ್.ನಾಗರಾಜು ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಸರ್ಕಾರ ಪುಸ್ತಕ ಖರೀದಿಸಿ ನಾಲ್ಕು ವರ್ಷಗಳಾಗಿವೆ. ಯಾವ ಸರ್ಕಾರಗಳೂ ಸಾಹಿತ್ಯವನ್ನು ಪ್ರೋತ್ಸಾಹಿಸುತ್ತಿಲ್ಲ. ಈಗಿನ ರಾಜಕಾರಣಿಗಳಿಗೆ ಸಾಹಿತ್ಯ, ಸಂಸ್ಕೃತಿ ಬೇಕಾಗಿಲ್ಲ ಎಂದು ಸಾಹಿತಿ ಕರೀಗೌಡ ಬೀಚನಹಳ್ಳಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ, ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಹಿಂದೆ ರಾಜಾಶ್ರಯದಲ್ಲಿ ಸಾಹಿತ್ಯ ರಚನೆ ಆಗುತ್ತಿತ್ತು. ರಾಜ, ಮಹಾರಾಜರು ಸಾಹಿತ್ಯ, ಸಾಹಿತಿಗಳನ್ನು ಪ್ರೋತ್ಸಾಹಿಸುತ್ತಿದ್ದರು. ಈಗ ಅಂತಹ ಪ್ರೋತ್ಸಾಹ ಸಿಗುತ್ತಿಲ್ಲ. ಶಾಲಾ– ಕಾಲೇಜು ಮಕ್ಕಳು ಪುಸ್ತಕ ಓದಬೇಕು. ಪುಸ್ತಕದ ಜ್ಞಾನ ಮೊಬೈಲ್ನಲ್ಲಿ ಸಿಗುವುದಿಲ್ಲ ಎಂದರು.</p>.<p>ಸಾಹಿತ್ಯ, ಸಂಸ್ಕೃತಿ ಬೆಳೆಸಲು ಮೈಸೂರು ಮಹಾರಾಜರು 112 ವರ್ಷಗಳ ಹಿಂದೆ ಸಾಹಿತ್ಯ ಪರಿಷತ್ತು ಸ್ಥಾಪಿಸಿದರು. ಇಂದಿನ ತನಕ ಭಾಷೆ, ಸಾಹಿತ್ಯ, ಸಂಸ್ಕೃತಿ ಬೆಳೆಸುವ ಚಟುವಟಿಕೆ ನಡೆಸಿಕೊಂಡು ಬರಲಾಗುತ್ತಿದೆ. ಸರ್ಕಾರ, ದಾನಿಗಳು ಅಗತ್ಯ ಸಹಕಾರ ನೀಡಬೇಕು ಎಂದು ಕೋರಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ‘ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಸರ್ಕಾರ, ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರಿಷತ್ತಿಗೆ ಸಹಾಯ ಮಾಡುತ್ತಿದ್ದಾರೆ. ಬೇಡುವ ಕೈ ಶುದ್ಧವಾಗಿದ್ದರೆ ಕೊಡುವ ಕೈಗಳಿಗೆ ಕೊರತೆಯಿಲ್ಲ’ ಎಂದರು.</p>.<p>ಸುಶೀಲಾ ಸದಾಶಿವಯ್ಯ ಅವರಿಗೆ ಭಾಗೀರಥಮ್ಮ ದತ್ತಿ ಪ್ರಶಸ್ತಿ, ಪ.ನಾ.ಹಳ್ಳಿ ಹರೀಶ್ಗೆ ಶಾಂಪುರ ಭಾಗೀರಥಮ್ಮ ನೆನಪಿನ ಪ್ರಶಸ್ತಿ, ಕೆ.ಮಂಜೇಶ್ ಅವರಿಗೆ ದೇವಪ್ರಕಾಶ್ ಹಾಸ್ಯ ಪ್ರಶಸ್ತಿ, ಪತ್ರಿಕಾ ಛಾಯಾಗ್ರಾಹಕರಾದ ಟಿ.ಆರ್.ರೇಣುಕಾಪ್ರಸಾದ್, ಟಿ.ಎಚ್.ಸುರೇಶ್ ಅವರಿಗೆ ದೇವಪ್ರಕಾಶ್ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಲೇಖಕಿ ಬಾ.ಹ.ರಮಾಕುಮಾರಿ, ಕೈಗಾರಿಕೋದ್ಯಮಿ ಎಚ್.ಜಿ.ಚಂದ್ರಶೇಖರ್, ಸರ್ವೋದಯ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಕೆ.ವಿ.ಸುಬ್ಬರಾವ್, ಇತಿಹಾಸಕಾರ ಡಿ.ಎನ್.ಯೋಗೀಶ್ವರಪ್ಪ, ಕಂಟಲಗೆರೆ ಸಣ್ಣಹೊನ್ನಯ್ಯ, ಎಂ.ಎಚ್.ನಾಗರಾಜು ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>