<p>ತಿಪಟೂರು: ತಾಲ್ಲೂಕಿನ ಕೆರೆಗೋಡಿ ರಂಗಾಪುರ ಕ್ಷೇತ್ರದ ಅಧ್ಯಕ್ಷರಾದ ಗುರುಪರದೇಶಿಕೇಂದ್ರ ಸ್ವಾಮೀಜಿ ಅವರ 74ನೇ ಜನ್ಮವರ್ಧಂತಿಯನ್ನು ಮಠದ ಹಿರಿಯ ವಿದ್ಯಾರ್ಥಿಗಳು ಹಾಗೂ ಕ್ಷೇತ್ರಾಭಿಮಾನಿಗಳ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿತ್ತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ ದೇಶ, ಧರ್ಮ, ದೇವರ ಬಗ್ಗೆ ಅಪಾರ ಭಕ್ತಿ ಮತ್ತು ಶ್ರದ್ಧೆ ಇರಿಸಿಕೊಂಡು ಸಾಮರಸ್ಯದಿಂದ ಬದುಕಿದರೆ ಸುಖ, ಶಾಂತಿ, ನೆಮ್ಮದಿ ಲಭಿಸುತ್ತದೆ ಎಂದು ಹೇಳಿದರು.</p>.<p>ನಮ್ಮ ಪೂರ್ವಿಕರು ಧರ್ಮ ಮತ್ತು ಬದುಕಿನ ಮೌಲ್ಯಗಳ ಬಗ್ಗೆ ಅಪಾರ ಬಾಂಧವ್ಯ ಹೊಂದಿದ್ದರು. ಅವರು ಸಂಸ್ಕೃತಿ, ಆಚಾರ-ವಿಚಾರ, ಸಂಪ್ರದಾಯ ಮತ್ತು ಸಂಸ್ಕಾರವನ್ನು ಮಕ್ಕಳಿಗೆ ಭಯ-ಭಕ್ತಿಯಿಂದ ತಿಳಿಸಿಕೊಡುತ್ತಿದ್ದರು. ಎಲ್ಲ ಸಂದರ್ಭಗಳಲ್ಲೂ ಬಂಧು-ಬಾಂಧವರು ಒಂದೆಡೆ ಸೇರಿ ಸಂಭ್ರಮಿಸುತ್ತಿದ್ದರು.</p>.<p>ಕಾಲ ಬದಲಾದಂತೆ ನಾಗರಿಕತೆ ಬೆಳೆದು, ಆಚಾರ-ವಿಚಾರ ಬದಲಾಗುತ್ತಿವೆ. ನಂಬಿಕೆಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಆಡಂಬರದ ಆಚರಣೆ ಬಿಟ್ಟು ಪ್ರಕೃತಿದತ್ತ ನಿಯಮಗಳಿಗೆ ವಿಧೇಯರಾಗಿ, ದಾನ-ಧರ್ಮ ಮಾಡುತ್ತಾ, ಕಷ್ಟ-ಸುಖಗಳಿಗೆ ಸ್ಪಂದಿಸಬೇಕು. ಪ್ರೀತಿ-ವಿಶ್ವಾಸದಿಂದ ಬದುಕು ನಡೆಸುವುದನ್ನು ಕಲಿಯಬೇಕು ಎಂದರು.</p>.<p>ಭಕ್ತರೇ ಶ್ರೀಮಠದ ಆಸ್ತಿ. ಮಠದಿಂದ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿ ಸಮಾಜೋದ್ಧಾರದ ಗುಣ ಬೆಳೆಸಿಕೊಳ್ಳಬೇಕು. ದ್ವೇಷ, ಅಸೂಯೆ ಬಿಟ್ಟು ಪರಸ್ಪರ ಒಂದಾಗಿ ಹಬ್ಬ, ಹರಿದಿನ, ಜಾತ್ರೆ, ಉತ್ಸವಗಳಲ್ಲಿ ಪಾಲ್ಗೊಂಡು ನಾವೆಲ್ಲರೂ ಒಂದೇ ಎಂಬುದನ್ನು ಸಾಧಿಸಿ ತೋರಿಸಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.</p>.<p>ಜಗತ್ತಿನಾದ್ಯಂತ ನಡೆಯುತ್ತಿರುವ ಯುದ್ಧಗಳ ಕಠೋರತೆ ಕೈಬಿಟ್ಟು, ಮನುಷ್ಯರ ನಡುವಿನ ಸಂಬಂಧಗಳನ್ನು ಬೆಸೆದು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು ಪ್ರೀತಿಯಿಂದ ಬದುಕುವುದನ್ನು ಕಲಿಯದೇ ಹೋದರೆ ಜಗತ್ತು ವಿಷವರ್ತುಲದಿಂದ ಸರ್ವನಾಶವಾಗುತ್ತದೆ. ಇದನ್ನು ತಪ್ಪಿಸಲು ಬುದ್ಧ, ಬಸವ, ಗಾಂಧಿ, ಪರಮಹಂಸ, ವಿವೇಕಾನಂದರ ತತ್ವಾದರ್ಶ ಪಾಲಿಸಬೇಕು ಎಂದರು.</p>.<p>ಕ್ಷೇತ್ರದ ಆರಾಧ್ಯ ದೈವಗಳಾದ ಶಂಕರೇಶ್ವರ ಸ್ವಾಮಿಗೆ ರಾಜೋಪಚಾರ, ರಂಗನಾಥಸ್ವಾಮಿಗೆ ವಿಶೇಷ ಪೂಜಾದಿ ಮಂಗಳಕಾರ್ಯಗಳು ನೆರವೇರಿದವು. ಎಲ್ಲ ಹಿರಿಯ ಗುರುಗಳ ಗದ್ದುಗೆಗಳು ಮತ್ತು ದೇವಾಲಯಗಳಲ್ಲಿ ಅಲಂಕಾರ, ರುದ್ರಾಭಿಷೇಕ, ಶ್ರೀಗಳ ಪಾದಪೂಜೆ ನಡೆಯಿತು. ನಂತರ ಸಾವಿರಾರು ಭಕ್ತರು ಶ್ರೀಗಳಿಗೆ ಭಕ್ತಿ ಸಮರ್ಪಣೆ ಸಲ್ಲಿಸಿದರು.</p>.<p>ಕಾರ್ಯಕ್ರಮದಲ್ಲಿ ಗೊಲ್ಲಹಳ್ಳಿಯ ಸಿದ್ದಲಿಂಗೇಶ್ವರ ಮಠದ ವಿಭವ ವಿದ್ಯಾಶಂಕರದೇಶಿ ಕೇಂದ್ರ ಸ್ವಾಮೀಜಿ, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ಪ ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-17-2065313507</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ತಾಲ್ಲೂಕಿನ ಕೆರೆಗೋಡಿ ರಂಗಾಪುರ ಕ್ಷೇತ್ರದ ಅಧ್ಯಕ್ಷರಾದ ಗುರುಪರದೇಶಿಕೇಂದ್ರ ಸ್ವಾಮೀಜಿ ಅವರ 74ನೇ ಜನ್ಮವರ್ಧಂತಿಯನ್ನು ಮಠದ ಹಿರಿಯ ವಿದ್ಯಾರ್ಥಿಗಳು ಹಾಗೂ ಕ್ಷೇತ್ರಾಭಿಮಾನಿಗಳ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿತ್ತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ ದೇಶ, ಧರ್ಮ, ದೇವರ ಬಗ್ಗೆ ಅಪಾರ ಭಕ್ತಿ ಮತ್ತು ಶ್ರದ್ಧೆ ಇರಿಸಿಕೊಂಡು ಸಾಮರಸ್ಯದಿಂದ ಬದುಕಿದರೆ ಸುಖ, ಶಾಂತಿ, ನೆಮ್ಮದಿ ಲಭಿಸುತ್ತದೆ ಎಂದು ಹೇಳಿದರು.</p>.<p>ನಮ್ಮ ಪೂರ್ವಿಕರು ಧರ್ಮ ಮತ್ತು ಬದುಕಿನ ಮೌಲ್ಯಗಳ ಬಗ್ಗೆ ಅಪಾರ ಬಾಂಧವ್ಯ ಹೊಂದಿದ್ದರು. ಅವರು ಸಂಸ್ಕೃತಿ, ಆಚಾರ-ವಿಚಾರ, ಸಂಪ್ರದಾಯ ಮತ್ತು ಸಂಸ್ಕಾರವನ್ನು ಮಕ್ಕಳಿಗೆ ಭಯ-ಭಕ್ತಿಯಿಂದ ತಿಳಿಸಿಕೊಡುತ್ತಿದ್ದರು. ಎಲ್ಲ ಸಂದರ್ಭಗಳಲ್ಲೂ ಬಂಧು-ಬಾಂಧವರು ಒಂದೆಡೆ ಸೇರಿ ಸಂಭ್ರಮಿಸುತ್ತಿದ್ದರು.</p>.<p>ಕಾಲ ಬದಲಾದಂತೆ ನಾಗರಿಕತೆ ಬೆಳೆದು, ಆಚಾರ-ವಿಚಾರ ಬದಲಾಗುತ್ತಿವೆ. ನಂಬಿಕೆಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಆಡಂಬರದ ಆಚರಣೆ ಬಿಟ್ಟು ಪ್ರಕೃತಿದತ್ತ ನಿಯಮಗಳಿಗೆ ವಿಧೇಯರಾಗಿ, ದಾನ-ಧರ್ಮ ಮಾಡುತ್ತಾ, ಕಷ್ಟ-ಸುಖಗಳಿಗೆ ಸ್ಪಂದಿಸಬೇಕು. ಪ್ರೀತಿ-ವಿಶ್ವಾಸದಿಂದ ಬದುಕು ನಡೆಸುವುದನ್ನು ಕಲಿಯಬೇಕು ಎಂದರು.</p>.<p>ಭಕ್ತರೇ ಶ್ರೀಮಠದ ಆಸ್ತಿ. ಮಠದಿಂದ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿ ಸಮಾಜೋದ್ಧಾರದ ಗುಣ ಬೆಳೆಸಿಕೊಳ್ಳಬೇಕು. ದ್ವೇಷ, ಅಸೂಯೆ ಬಿಟ್ಟು ಪರಸ್ಪರ ಒಂದಾಗಿ ಹಬ್ಬ, ಹರಿದಿನ, ಜಾತ್ರೆ, ಉತ್ಸವಗಳಲ್ಲಿ ಪಾಲ್ಗೊಂಡು ನಾವೆಲ್ಲರೂ ಒಂದೇ ಎಂಬುದನ್ನು ಸಾಧಿಸಿ ತೋರಿಸಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.</p>.<p>ಜಗತ್ತಿನಾದ್ಯಂತ ನಡೆಯುತ್ತಿರುವ ಯುದ್ಧಗಳ ಕಠೋರತೆ ಕೈಬಿಟ್ಟು, ಮನುಷ್ಯರ ನಡುವಿನ ಸಂಬಂಧಗಳನ್ನು ಬೆಸೆದು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು ಪ್ರೀತಿಯಿಂದ ಬದುಕುವುದನ್ನು ಕಲಿಯದೇ ಹೋದರೆ ಜಗತ್ತು ವಿಷವರ್ತುಲದಿಂದ ಸರ್ವನಾಶವಾಗುತ್ತದೆ. ಇದನ್ನು ತಪ್ಪಿಸಲು ಬುದ್ಧ, ಬಸವ, ಗಾಂಧಿ, ಪರಮಹಂಸ, ವಿವೇಕಾನಂದರ ತತ್ವಾದರ್ಶ ಪಾಲಿಸಬೇಕು ಎಂದರು.</p>.<p>ಕ್ಷೇತ್ರದ ಆರಾಧ್ಯ ದೈವಗಳಾದ ಶಂಕರೇಶ್ವರ ಸ್ವಾಮಿಗೆ ರಾಜೋಪಚಾರ, ರಂಗನಾಥಸ್ವಾಮಿಗೆ ವಿಶೇಷ ಪೂಜಾದಿ ಮಂಗಳಕಾರ್ಯಗಳು ನೆರವೇರಿದವು. ಎಲ್ಲ ಹಿರಿಯ ಗುರುಗಳ ಗದ್ದುಗೆಗಳು ಮತ್ತು ದೇವಾಲಯಗಳಲ್ಲಿ ಅಲಂಕಾರ, ರುದ್ರಾಭಿಷೇಕ, ಶ್ರೀಗಳ ಪಾದಪೂಜೆ ನಡೆಯಿತು. ನಂತರ ಸಾವಿರಾರು ಭಕ್ತರು ಶ್ರೀಗಳಿಗೆ ಭಕ್ತಿ ಸಮರ್ಪಣೆ ಸಲ್ಲಿಸಿದರು.</p>.<p>ಕಾರ್ಯಕ್ರಮದಲ್ಲಿ ಗೊಲ್ಲಹಳ್ಳಿಯ ಸಿದ್ದಲಿಂಗೇಶ್ವರ ಮಠದ ವಿಭವ ವಿದ್ಯಾಶಂಕರದೇಶಿ ಕೇಂದ್ರ ಸ್ವಾಮೀಜಿ, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ಪ ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-17-2065313507</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>