<p><strong>ತುಮಕೂರು</strong>: ನಗರದಲ್ಲಿ ಮೇ 20ರಂದು ನಡೆಯಲಿರುವ ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನಾ ಸಮಾವೇಶದಲ್ಲಿ ಭಾಗವಹಿಸುವ ಎಲ್ಲ ಫಲಾನುಭವಿಗಳಿಗೂ ಸ್ಥಳದಲ್ಲೇ ಸವಲತ್ತು ವಿತರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರು ಜಿಲ್ಲಾ ಆಡಳಿತಕ್ಕೆ ಸೂಚಿಸಿದ್ದಾರೆ.</p>.<p>ನಗರದಲ್ಲಿ ಸೋಮವಾರ ಸಮಾವೇಶದ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವ ಸಮಾವೇಶದಲ್ಲಿ ಫಲಾನುಭವಿಗಳಿಗೆ ವೇದಿಕೆಯಲ್ಲಿ ಸಾಂಕೇತಿಕವಾಗಿ ಸವಲತ್ತು ವಿತರಣೆ ಮಾಡಲಾಗುತ್ತದೆ. ಇನ್ನಿತರೆ ಫಲಾನುಭವಿಗಳಿಗೆ ಅಂದೇ ಸವಲತ್ತು, ಹಕ್ಕುಪತ್ರ ವಿತರಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಈ ಹಿಂದೆ ವೇದಿಕೆಯಲ್ಲಿ ಸಾಂಕೇತಿಕವಾಗಿ ಹಕ್ಕುಪತ್ರ ನೀಡಿದ ನಂತರ ಇತರೆ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ವಿಳಂಬವಾಗುವ ಸಾಧ್ಯತೆಗಳ ಬಗ್ಗೆ ಕೇಳಿದ್ದೇನೆ. ಹಾಗಾಗಿ ಈ ಬಾರಿ ಅಂತಹ ತಪ್ಪು ಮಾಡಬಾರದು. ಫಲಾನುಭವಿಗಳು ಕುಳಿತುಕೊಳ್ಳುವ ಸ್ಥಳದಲ್ಲೇ ನೀಡಬೇಕು ಎಂದು ನಿರ್ದೇಶಿಸಿದರು.</p>.<p>ನಗರಕ್ಕೆ ವಿವಿಧೆಡೆಗಳಿಂದ ಫಲಾನುಭವಿಗಳನ್ನು ಕರೆತರಲು ಸರ್ಕಾರಿ, ಖಾಸಗಿ ಸೇರಿದಂತೆ ಸುಮಾರು 3 ಸಾವಿರ ಬಸ್ಗಳನ್ನು ಬಳಸಿಕೊಳ್ಳಲಾಗುತ್ತದೆ. ಜನರು ದೂರದಿಂದ ಕಾರ್ಯಕ್ರಮದ ಜಾಗಕ್ಕೆ ನಡೆದುಕೊಂಡು ಬರಲು ಅವಕಾಶ ನೀಡದೆ, ಸ್ಥಳಕ್ಕೆ ಕರೆತಂದು ಬಿಡಬೇಕು. ನಿರ್ದಿಷ್ಟ ತಾಲ್ಲೂಕು ವಾಹನಗಳು ನಿರ್ದಿಷ್ಟ ಪ್ರದೇಶದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಬೇಕು ಎಂದು ಸಲಹೆ ಮಾಡಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ.ಅಶ್ವಿಜ, ಎಸ್ಪಿ ಕೆ.ವಿ.ಅಶೋಕ್ ಇತರರು ಹಾಜರಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-17-2053911143</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ನಗರದಲ್ಲಿ ಮೇ 20ರಂದು ನಡೆಯಲಿರುವ ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನಾ ಸಮಾವೇಶದಲ್ಲಿ ಭಾಗವಹಿಸುವ ಎಲ್ಲ ಫಲಾನುಭವಿಗಳಿಗೂ ಸ್ಥಳದಲ್ಲೇ ಸವಲತ್ತು ವಿತರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರು ಜಿಲ್ಲಾ ಆಡಳಿತಕ್ಕೆ ಸೂಚಿಸಿದ್ದಾರೆ.</p>.<p>ನಗರದಲ್ಲಿ ಸೋಮವಾರ ಸಮಾವೇಶದ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವ ಸಮಾವೇಶದಲ್ಲಿ ಫಲಾನುಭವಿಗಳಿಗೆ ವೇದಿಕೆಯಲ್ಲಿ ಸಾಂಕೇತಿಕವಾಗಿ ಸವಲತ್ತು ವಿತರಣೆ ಮಾಡಲಾಗುತ್ತದೆ. ಇನ್ನಿತರೆ ಫಲಾನುಭವಿಗಳಿಗೆ ಅಂದೇ ಸವಲತ್ತು, ಹಕ್ಕುಪತ್ರ ವಿತರಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಈ ಹಿಂದೆ ವೇದಿಕೆಯಲ್ಲಿ ಸಾಂಕೇತಿಕವಾಗಿ ಹಕ್ಕುಪತ್ರ ನೀಡಿದ ನಂತರ ಇತರೆ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ವಿಳಂಬವಾಗುವ ಸಾಧ್ಯತೆಗಳ ಬಗ್ಗೆ ಕೇಳಿದ್ದೇನೆ. ಹಾಗಾಗಿ ಈ ಬಾರಿ ಅಂತಹ ತಪ್ಪು ಮಾಡಬಾರದು. ಫಲಾನುಭವಿಗಳು ಕುಳಿತುಕೊಳ್ಳುವ ಸ್ಥಳದಲ್ಲೇ ನೀಡಬೇಕು ಎಂದು ನಿರ್ದೇಶಿಸಿದರು.</p>.<p>ನಗರಕ್ಕೆ ವಿವಿಧೆಡೆಗಳಿಂದ ಫಲಾನುಭವಿಗಳನ್ನು ಕರೆತರಲು ಸರ್ಕಾರಿ, ಖಾಸಗಿ ಸೇರಿದಂತೆ ಸುಮಾರು 3 ಸಾವಿರ ಬಸ್ಗಳನ್ನು ಬಳಸಿಕೊಳ್ಳಲಾಗುತ್ತದೆ. ಜನರು ದೂರದಿಂದ ಕಾರ್ಯಕ್ರಮದ ಜಾಗಕ್ಕೆ ನಡೆದುಕೊಂಡು ಬರಲು ಅವಕಾಶ ನೀಡದೆ, ಸ್ಥಳಕ್ಕೆ ಕರೆತಂದು ಬಿಡಬೇಕು. ನಿರ್ದಿಷ್ಟ ತಾಲ್ಲೂಕು ವಾಹನಗಳು ನಿರ್ದಿಷ್ಟ ಪ್ರದೇಶದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಬೇಕು ಎಂದು ಸಲಹೆ ಮಾಡಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ.ಅಶ್ವಿಜ, ಎಸ್ಪಿ ಕೆ.ವಿ.ಅಶೋಕ್ ಇತರರು ಹಾಜರಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-17-2053911143</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>