<p>ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಜಾನಕಲ್ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ರೈತರ ಬೆಳೆಗಳಿಗೆ ಅನುಕೂಲವಾಗುವಂತೆ ಶಾಶ್ವತ ನೀರಾವರಿ ಯೋಜನೆ ರೂಪಿಸುವುದಾಗಿ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ಭರವಸೆ ನೀಡಿದರು.</p>.<p>ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ರಾಮಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆದ ಮನೆ ಬಾಗಿಲಿಗೆ ಮನೆ ಮಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ರೈತರು ವಾಣಿಜ್ಯ ಬೆಳೆಗಳತ್ತ ಹೆಚ್ಚು ವಾಲುತ್ತಿದ್ದು ಅದರಲ್ಲಿಯೂ ಅಡಿಕೆ ಬೆಳೆಗೆ ಆಕರ್ಷಣೀಯವಾಗಿದ್ದಾರೆ. ಬೇಸಿಗೆ ಸಮಯದಲ್ಲಿ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗುವುದರಿಂದ ಹೆಚ್ಚು ಸಂಕಷ್ಟ ಪಡುತ್ತಾರೆ. ಇದಕ್ಕೆ ಶಾಶ್ವತ ಪರಿಹಾರ ರೂಪಿಸಲಾಗುವುದು ಎಂದರು.</p>.<p>ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬುಕ್ಕಾಪಟ್ಟಣ ಹೋಬಳಿಗೆ ಅನುದಾನದಲ್ಲಿ ಸಿಂಹ ಪಾಲು ನೀಡಲಾಗಿದೆ ಎಂದರು.</p>.<p>ತಾ.ಪಂ ಇಒ ಆರ್.ಹರೀಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜು, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಎಇಇಮಂಜು ಪ್ರಸಾದ್, ಪಿಡಿಒ ಮಾರಣ್ಣ, ಕಂದಾಯ ಅಧಿಕಾರಿ ಪವನ್, ಮುದ್ದು ಗಣೇಶ್, ಶಾಂತಕುಮಾರ್, ಸತ್ಯನಾರಾಯಣ, ನಾಗರಾಜು, ಜಗದೀಶ್ ಗೌಡ, ಗೋವಿಂದರಾಜು, ಲೋಕೇಶ್, ರಾಮಲಿಂಗಪುರ ಚಂದ್ರಶೇಖರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-17-546601170</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಜಾನಕಲ್ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ರೈತರ ಬೆಳೆಗಳಿಗೆ ಅನುಕೂಲವಾಗುವಂತೆ ಶಾಶ್ವತ ನೀರಾವರಿ ಯೋಜನೆ ರೂಪಿಸುವುದಾಗಿ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ಭರವಸೆ ನೀಡಿದರು.</p>.<p>ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ರಾಮಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆದ ಮನೆ ಬಾಗಿಲಿಗೆ ಮನೆ ಮಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ರೈತರು ವಾಣಿಜ್ಯ ಬೆಳೆಗಳತ್ತ ಹೆಚ್ಚು ವಾಲುತ್ತಿದ್ದು ಅದರಲ್ಲಿಯೂ ಅಡಿಕೆ ಬೆಳೆಗೆ ಆಕರ್ಷಣೀಯವಾಗಿದ್ದಾರೆ. ಬೇಸಿಗೆ ಸಮಯದಲ್ಲಿ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗುವುದರಿಂದ ಹೆಚ್ಚು ಸಂಕಷ್ಟ ಪಡುತ್ತಾರೆ. ಇದಕ್ಕೆ ಶಾಶ್ವತ ಪರಿಹಾರ ರೂಪಿಸಲಾಗುವುದು ಎಂದರು.</p>.<p>ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬುಕ್ಕಾಪಟ್ಟಣ ಹೋಬಳಿಗೆ ಅನುದಾನದಲ್ಲಿ ಸಿಂಹ ಪಾಲು ನೀಡಲಾಗಿದೆ ಎಂದರು.</p>.<p>ತಾ.ಪಂ ಇಒ ಆರ್.ಹರೀಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜು, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಎಇಇಮಂಜು ಪ್ರಸಾದ್, ಪಿಡಿಒ ಮಾರಣ್ಣ, ಕಂದಾಯ ಅಧಿಕಾರಿ ಪವನ್, ಮುದ್ದು ಗಣೇಶ್, ಶಾಂತಕುಮಾರ್, ಸತ್ಯನಾರಾಯಣ, ನಾಗರಾಜು, ಜಗದೀಶ್ ಗೌಡ, ಗೋವಿಂದರಾಜು, ಲೋಕೇಶ್, ರಾಮಲಿಂಗಪುರ ಚಂದ್ರಶೇಖರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-17-546601170</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>