ತುಮಕೂರು: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ನಿಮಿತ್ತ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದಲ್ಲಿ ಶನಿವಾರ ಅಧಿಕಾರಿಗಳ ತಂಡದ ಜೊತೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಕಂದಾಯ ಸಚಿವ ಆರ್.ಅಶೋಕ್ ರಾತ್ರಿ ಗ್ರಾಮದ ಬಿಜಿಎಸ್ ಆಶ್ರಮ ಶಾಲೆಯ ಕುಟೀರದಲ್ಲಿ ವಾಸ್ತವ್ಯ ಹೂಡಿದರು.
ಸಾಂಸ್ಕೃತಿಕ ಕಾರ್ಯಕ್ರಮ ಮುಗಿದ ನಂತರ ಆಶ್ರಮಕ್ಕೆ ಭೇಟಿ ನೀಡಿದ ಸಚಿವರು ಆಶ್ರಮ ಶಾಲೆಯ ಮಕ್ಕಳ ಜೊತೆಗೆ ಒಂದಷ್ಟು ಸಮಯ ಕಳೆದರು.
ಶಾಸಕರಾದ ಮಸಾಲೆ ಜಯರಾಂ, ಜಿ.ಬಿ.ಜ್ಯೋತಿಗಣೇಶ್, ಸಿ.ಎಂ.ರಾಜೇಶ್ ಗೌಡ ಇದ್ದರು.