<p>ತುರುವೇಕೆರೆ: ನೋಂದಣಾಧಿಕಾರಿ ಕಚೇರಿಯಲ್ಲಿ ಆಸ್ತಿಗಳ ಮಾರಾಟ ಸೇರಿದಂತೆ ವಿವಿಧ ವಹಿವಾಟುಗಳನ್ನು ಪೇಪರ್ಲೆಸ್ ಮಾಡಲಾಗುತ್ತಿದೆ. ಕಾವೇರಿ ತಂತ್ರಾಂಶದ ಮೂಲಕ ಪೇಪರ್ಲೆಸ್ ಮಾಡಿ ಕೇವಲ ತಂತ್ರಾಂಶದ ಮೂಲಕ ನೋಂದಣಿ ಮಾಡಿಸುವ ಸರ್ಕಾರದ ಕ್ರಮ ಖಂಡನೀಯ ಎಂದು ತಾಲ್ಲೂಕು ಪತ್ರ ಬರಹಾಗಾರ ಸಂಘ ಖಂಡಿಸಿದೆ.</p>.<p>ಪತ್ರ ಬರಹಗಾರರ ಸಂಘದ ಜಿಲ್ಲಾ ಸಂಘಟನಕಾರ ಬಿ.ಎನ್.ಮಂಜುನಾಥ್ (ಪಾಪು) ಮಾತನಾಡಿ, ಭೂ ಮಾಫಿಯಾದವರು ಮತ್ತು ಹ್ಯಾಕರ್ಸ್ಗಳಿಗೆ ಸರ್ಕಾರದ ಈ ಯೋಜನೆ ರತ್ನಗಂಬಳಿ ಹಾಕಿಕೊಟ್ಟಂತಾಗುತ್ತದೆ. ಕಾಗದ ರಹಿತ ಡಿಜಿಟಲ್ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಚಾಮರಾಜ ನಗರದಲ್ಲಿ ಜಾರಿಗೆ ತಂದಿದೆ. ಇದು ನಂತರ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ಈ ಕಾನೂನು ಜಾರಿಯಾದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಈಗಿರುವ ವ್ಯವಸ್ಥೆಯಲ್ಲೇ ನೂರಾರು ತೊಂದರೆಗಳಿವೆ. ಇವುಗಳನ್ನು ಬಗೆಹರಿಸಲೇ ಹರಸಾಹಸ ಮಾಡಲಾಗುತ್ತಿದೆ. ಈಗ ಪೇಪರ್ಲೆಸ್ ವ್ಯವಸ್ಥೆ ಜಾರಿಗೆ ಬಂದರೆ ಸಾರ್ವಜನಿಕರ ಆತಂಕ ಮತ್ತಷ್ಟೂ ಹೆಚ್ಚುತ್ತದೆ ಎಂದು ಹೇಳಿದರು.</p>.<p>ಆಸ್ತಿ ಮಾರಾಟಗೊಂಡ ಬಗ್ಗೆಯಾಗಲಿ, ಖರೀದಿ ಮಾಡಿಕೊಂಡಿರುವ ಬಗ್ಗೆಯಾಗಲೀ ಭೌತಿಕ ಪತ್ರ ನೀಡುವುದಿಲ್ಲ. ಸಹಿಯನ್ನು ಭೌತಿಕವಾಗಿ ಮಾಡದೆ ಈ - ಸಹಿ ಮಾಡಿಸುವುದರಿಂದ ಅಮಾಯಕರನ್ನು ವಂಚಿಸಲು ರಹದಾರಿಯಾಗಲಿದೆ. ವಂಚಕರಿಗೆ ಸಲೀಸು ಮಾಡಿಕೊಟ್ಟಂತೆ ಆಗುತ್ತದೆ. ಇದರಿಂದ ಸರ್ಕಾರಕ್ಕೆ ಲಾಭವೇನೂ ಇಲ್ಲ. ಆದರೆ ಜನರಿಗೆ ತೊಂದರೆಯಾಗಲಿದೆ ಎಂದರು.</p>.<p>ತಾಲ್ಲೂಕು ಪತ್ರ ಬರಹಗಾರರ ಸಂಘದ ಗೌರವಾಧ್ಯಕ್ಷ ಕೆ.ಎಲ್.ಶಿವಕುಮಾರ್, ಅಧ್ಯಕ್ಷ ಕೆ.ಆರ್.ರಮೇಶ್, ಉಪಾಧ್ಯಕ್ಷ ಬಿ.ಜಿ.ಶಿವಕುಮಾರ್, ಪರಮೇಶ್, ಕಾರ್ಯದರ್ಶಿ ಕೆ.ಟಿ.ಪುಟ್ಟಸ್ವಾಮಿಗೌಡ, ಖಜಾಂಚಿ ಟಿ.ಜಿ.ಶಿವಕುಮಾರಸ್ವಾಮಿ. ಸಂಘಟನಾ ಕಾರ್ಯದರ್ಶಿ ಕೆ.ಎ.ಹರೀಶ್, ನಿರ್ದೇಶಕರಾದ ಕೆ.ಗೋಪಿನಾಥ್, ಬಿ.ಎನ್.ಶಶಿಕುಮಾರ್, ಕೆ.ಎಲ್.ಕಲ್ಲೇಶ್, ಬಿ.ಕಂಚೀರಾಯ, ಬಸವರಾಜು, ಬಲರಾಮಯ್ಯ, ಶಿವಕುಮಾರ್, ಡಿ.ಎಸ್.ಶಿವಣ್ಣ ಮತ್ತು ಪುಟ್ಟರಾಮಯ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-17-1189456179</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುರುವೇಕೆರೆ: ನೋಂದಣಾಧಿಕಾರಿ ಕಚೇರಿಯಲ್ಲಿ ಆಸ್ತಿಗಳ ಮಾರಾಟ ಸೇರಿದಂತೆ ವಿವಿಧ ವಹಿವಾಟುಗಳನ್ನು ಪೇಪರ್ಲೆಸ್ ಮಾಡಲಾಗುತ್ತಿದೆ. ಕಾವೇರಿ ತಂತ್ರಾಂಶದ ಮೂಲಕ ಪೇಪರ್ಲೆಸ್ ಮಾಡಿ ಕೇವಲ ತಂತ್ರಾಂಶದ ಮೂಲಕ ನೋಂದಣಿ ಮಾಡಿಸುವ ಸರ್ಕಾರದ ಕ್ರಮ ಖಂಡನೀಯ ಎಂದು ತಾಲ್ಲೂಕು ಪತ್ರ ಬರಹಾಗಾರ ಸಂಘ ಖಂಡಿಸಿದೆ.</p>.<p>ಪತ್ರ ಬರಹಗಾರರ ಸಂಘದ ಜಿಲ್ಲಾ ಸಂಘಟನಕಾರ ಬಿ.ಎನ್.ಮಂಜುನಾಥ್ (ಪಾಪು) ಮಾತನಾಡಿ, ಭೂ ಮಾಫಿಯಾದವರು ಮತ್ತು ಹ್ಯಾಕರ್ಸ್ಗಳಿಗೆ ಸರ್ಕಾರದ ಈ ಯೋಜನೆ ರತ್ನಗಂಬಳಿ ಹಾಕಿಕೊಟ್ಟಂತಾಗುತ್ತದೆ. ಕಾಗದ ರಹಿತ ಡಿಜಿಟಲ್ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಚಾಮರಾಜ ನಗರದಲ್ಲಿ ಜಾರಿಗೆ ತಂದಿದೆ. ಇದು ನಂತರ ರಾಜ್ಯದಾದ್ಯಂತ ಜಾರಿಗೆ ಬರಲಿದೆ. ಈ ಕಾನೂನು ಜಾರಿಯಾದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಈಗಿರುವ ವ್ಯವಸ್ಥೆಯಲ್ಲೇ ನೂರಾರು ತೊಂದರೆಗಳಿವೆ. ಇವುಗಳನ್ನು ಬಗೆಹರಿಸಲೇ ಹರಸಾಹಸ ಮಾಡಲಾಗುತ್ತಿದೆ. ಈಗ ಪೇಪರ್ಲೆಸ್ ವ್ಯವಸ್ಥೆ ಜಾರಿಗೆ ಬಂದರೆ ಸಾರ್ವಜನಿಕರ ಆತಂಕ ಮತ್ತಷ್ಟೂ ಹೆಚ್ಚುತ್ತದೆ ಎಂದು ಹೇಳಿದರು.</p>.<p>ಆಸ್ತಿ ಮಾರಾಟಗೊಂಡ ಬಗ್ಗೆಯಾಗಲಿ, ಖರೀದಿ ಮಾಡಿಕೊಂಡಿರುವ ಬಗ್ಗೆಯಾಗಲೀ ಭೌತಿಕ ಪತ್ರ ನೀಡುವುದಿಲ್ಲ. ಸಹಿಯನ್ನು ಭೌತಿಕವಾಗಿ ಮಾಡದೆ ಈ - ಸಹಿ ಮಾಡಿಸುವುದರಿಂದ ಅಮಾಯಕರನ್ನು ವಂಚಿಸಲು ರಹದಾರಿಯಾಗಲಿದೆ. ವಂಚಕರಿಗೆ ಸಲೀಸು ಮಾಡಿಕೊಟ್ಟಂತೆ ಆಗುತ್ತದೆ. ಇದರಿಂದ ಸರ್ಕಾರಕ್ಕೆ ಲಾಭವೇನೂ ಇಲ್ಲ. ಆದರೆ ಜನರಿಗೆ ತೊಂದರೆಯಾಗಲಿದೆ ಎಂದರು.</p>.<p>ತಾಲ್ಲೂಕು ಪತ್ರ ಬರಹಗಾರರ ಸಂಘದ ಗೌರವಾಧ್ಯಕ್ಷ ಕೆ.ಎಲ್.ಶಿವಕುಮಾರ್, ಅಧ್ಯಕ್ಷ ಕೆ.ಆರ್.ರಮೇಶ್, ಉಪಾಧ್ಯಕ್ಷ ಬಿ.ಜಿ.ಶಿವಕುಮಾರ್, ಪರಮೇಶ್, ಕಾರ್ಯದರ್ಶಿ ಕೆ.ಟಿ.ಪುಟ್ಟಸ್ವಾಮಿಗೌಡ, ಖಜಾಂಚಿ ಟಿ.ಜಿ.ಶಿವಕುಮಾರಸ್ವಾಮಿ. ಸಂಘಟನಾ ಕಾರ್ಯದರ್ಶಿ ಕೆ.ಎ.ಹರೀಶ್, ನಿರ್ದೇಶಕರಾದ ಕೆ.ಗೋಪಿನಾಥ್, ಬಿ.ಎನ್.ಶಶಿಕುಮಾರ್, ಕೆ.ಎಲ್.ಕಲ್ಲೇಶ್, ಬಿ.ಕಂಚೀರಾಯ, ಬಸವರಾಜು, ಬಲರಾಮಯ್ಯ, ಶಿವಕುಮಾರ್, ಡಿ.ಎಸ್.ಶಿವಣ್ಣ ಮತ್ತು ಪುಟ್ಟರಾಮಯ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-17-1189456179</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>