<p>ತುಮಕೂರು: ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಮೇ 19ರಂದು ನಗರದ ಟೌನ್ಹಾಲ್ ಬಳಿ ಪ್ರತಿಭಟನೆ ನಡೆಸಿ, ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯ ಭಾಸ್ಕರ್ ಇಲ್ಲಿ ಶನಿವಾರ ಹೇಳಿದರು.</p>.<p>ಮೇ 20ರಂದು ನಡೆಯಬೇಕಿದ್ದ ಸರ್ಕಾರದ 3 ವರ್ಷದ ಸಾಧನಾ ಸಮಾವೇಶವನ್ನು ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೆದರಿ 19ಕ್ಕೆ ನಿಗದಿಪಡಿಸಲಾಗಿದೆ. ಸರ್ಕಾರದ ಕುತಂತ್ರ ಖಂಡಿಸಿ ಅದೇ ದಿನ ‘ನಿಮ್ಮ ಸಂಭ್ರಮಕ್ಕೆ ನಮ್ಮ ಕಣ್ಣೀರಿನ ಧಿಕ್ಕಾರ’ ಎಂದು ಪ್ರತಿಭಟನೆ ನಡೆಸಲಾಗುವುದು. ಸಾವಿರಾರು ಜನ ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸರ್ಕಾರ ಸಾರಿಗೆ ನೌಕರರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ನಿಲ್ಲಿಸುವುದಿಲ್ಲ. ಕಾರ್ಮಿಕರ ಕಣ್ಣೀರು ಒರೆಸದೆ ಸಾಧನಾ ಸಮಾವೇಶ ಮಾಡಲಾಗುತ್ತಿದೆ. 4 ಸಾವಿರ ಬಸ್ ಕಾಯ್ದಿರಿಸಿದ್ದು, ನಾವು ಸಮಾವೇಶಕ್ಕೆ ಅಡ್ಡಿ ಪಡಿಸುವುದಿಲ್ಲ ಎಂದರು.</p>.<p>ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷೆ ಜ್ಯೋತಿ ಅನಂತಸುಬ್ಬರಾವ್, ‘ವೇತನ ಹೆಚ್ಚಳ ಮಾಡುವುದು ಸರ್ಕಾರದ ಕರ್ತವ್ಯ. ಈ ಕುರಿತು ಕಳೆದ ಎರಡೂವರೆ ವರ್ಷದಿಂದ ಸರ್ಕಾರದ ಜತೆಗೆ ಮಾತುಕತೆ ನಡೆಯುತ್ತಿದೆ. ಮುಖ್ಯಮಂತ್ರಿ, ಸಚಿವರ ಗಮನಕ್ಕೂ ತರಲಾಗಿದೆ. ಕಾರ್ಮಿಕರ ಪರವಾದ ನಿರ್ಧಾರ ತೆಗೆದುಕೊಳ್ಳಲು ಆಗಿಲ್ಲ. ಸರ್ಕಾರದ ನಿಜವಾದ ಸಾಧನೆ ಏನು ಎಂಬುವುದನ್ನು ಜನರಿಗೆ ತಿಳಿಸಲು ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ಮುಷ್ಕರದಿಂದ ಸಾಮಾನ್ಯರಿಗೆ ತೊಂದರೆ ಕೊಡುವ ಉದ್ದೇಶವಿಲ್ಲ. ನಮ್ಮ ಮುಂದೆ ಪರ್ಯಾಯ ಆಯ್ಕೆಗಳಿಲ್ಲ. ಎಸ್ಮಾ ಜಾರಿ ಮಾಡಿದರೂ ಮುಷ್ಕರ ಮುಂದುವರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.</p>.<p>ಮುಖಂಡರಾದ ಎಚ್.ಡಿ.ರೇವಪ್ಪ, ಗಿರೀಶ್, ಎನ್.ಕೆ.ಸುಬ್ರಮಣ್ಯ, ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-17-1593426051</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಮೇ 19ರಂದು ನಗರದ ಟೌನ್ಹಾಲ್ ಬಳಿ ಪ್ರತಿಭಟನೆ ನಡೆಸಿ, ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯ ಭಾಸ್ಕರ್ ಇಲ್ಲಿ ಶನಿವಾರ ಹೇಳಿದರು.</p>.<p>ಮೇ 20ರಂದು ನಡೆಯಬೇಕಿದ್ದ ಸರ್ಕಾರದ 3 ವರ್ಷದ ಸಾಧನಾ ಸಮಾವೇಶವನ್ನು ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೆದರಿ 19ಕ್ಕೆ ನಿಗದಿಪಡಿಸಲಾಗಿದೆ. ಸರ್ಕಾರದ ಕುತಂತ್ರ ಖಂಡಿಸಿ ಅದೇ ದಿನ ‘ನಿಮ್ಮ ಸಂಭ್ರಮಕ್ಕೆ ನಮ್ಮ ಕಣ್ಣೀರಿನ ಧಿಕ್ಕಾರ’ ಎಂದು ಪ್ರತಿಭಟನೆ ನಡೆಸಲಾಗುವುದು. ಸಾವಿರಾರು ಜನ ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸರ್ಕಾರ ಸಾರಿಗೆ ನೌಕರರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ನಿಲ್ಲಿಸುವುದಿಲ್ಲ. ಕಾರ್ಮಿಕರ ಕಣ್ಣೀರು ಒರೆಸದೆ ಸಾಧನಾ ಸಮಾವೇಶ ಮಾಡಲಾಗುತ್ತಿದೆ. 4 ಸಾವಿರ ಬಸ್ ಕಾಯ್ದಿರಿಸಿದ್ದು, ನಾವು ಸಮಾವೇಶಕ್ಕೆ ಅಡ್ಡಿ ಪಡಿಸುವುದಿಲ್ಲ ಎಂದರು.</p>.<p>ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷೆ ಜ್ಯೋತಿ ಅನಂತಸುಬ್ಬರಾವ್, ‘ವೇತನ ಹೆಚ್ಚಳ ಮಾಡುವುದು ಸರ್ಕಾರದ ಕರ್ತವ್ಯ. ಈ ಕುರಿತು ಕಳೆದ ಎರಡೂವರೆ ವರ್ಷದಿಂದ ಸರ್ಕಾರದ ಜತೆಗೆ ಮಾತುಕತೆ ನಡೆಯುತ್ತಿದೆ. ಮುಖ್ಯಮಂತ್ರಿ, ಸಚಿವರ ಗಮನಕ್ಕೂ ತರಲಾಗಿದೆ. ಕಾರ್ಮಿಕರ ಪರವಾದ ನಿರ್ಧಾರ ತೆಗೆದುಕೊಳ್ಳಲು ಆಗಿಲ್ಲ. ಸರ್ಕಾರದ ನಿಜವಾದ ಸಾಧನೆ ಏನು ಎಂಬುವುದನ್ನು ಜನರಿಗೆ ತಿಳಿಸಲು ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<p>ಮುಷ್ಕರದಿಂದ ಸಾಮಾನ್ಯರಿಗೆ ತೊಂದರೆ ಕೊಡುವ ಉದ್ದೇಶವಿಲ್ಲ. ನಮ್ಮ ಮುಂದೆ ಪರ್ಯಾಯ ಆಯ್ಕೆಗಳಿಲ್ಲ. ಎಸ್ಮಾ ಜಾರಿ ಮಾಡಿದರೂ ಮುಷ್ಕರ ಮುಂದುವರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.</p>.<p>ಮುಖಂಡರಾದ ಎಚ್.ಡಿ.ರೇವಪ್ಪ, ಗಿರೀಶ್, ಎನ್.ಕೆ.ಸುಬ್ರಮಣ್ಯ, ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-17-1593426051</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>