<p><strong>ತುಮಕೂರು</strong>: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ಮುಷ್ಕರ ಆರಂಭಿಸಿದ್ದು, ಜಿಲ್ಲೆಯಲ್ಲಿ ಬಸ್ಗಳ ಸಂಚಾರ ವಿರಳವಾಗಿದೆ. </p><p>ಬೆಂಗಳೂರು- ತುಮಕೂರು ಮಧ್ಯೆ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸುತ್ತಿವೆ. ಗ್ರಾಮೀಣ ಭಾಗದ ಕಡೆಗೆ ಹೋಗುವ ಬಸ್ಗಳ ಸಂಖ್ಯೆ ತೀರಾ ಕಡಿಮೆಯಾಗಿದೆ. ಹಳ್ಳಿಗಳಿಗೆ ಹೋಗುವ ಪ್ರಯಾಣಿಕರು ನಗರದ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದಾರೆ. </p><p>ದೂರದ ಊರುಗಳಿಂದ ಬರುವ ಬಸ್ಗಳು ಮಾತ್ರ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿವೆ. ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯೂ ವಿರಳವಾಗಿದೆ. ಜಿಲ್ಲೆಯಲ್ಲಿ ಪ್ರತಿ ದಿನ 675 ಬಸ್ಗಳು ಸಂಚರಿಸುತ್ತವೆ. 2,400ಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. </p><p>'ಬಸ್ ಸಂಚಾರ ಆರಂಭಿಸಿಲ್ಲ, ಎಲ್ಲ ಬಸ್ಗಳನ್ನು ಡಿಪೊದಲ್ಲಿ ನಿಲ್ಲಿಸಲಾಗಿದೆ. ಬೇರೆ ಬೇರೆ ಕಡೆಯಿಂದ ಬರುವ ಬಸ್ಗಳು ಮಾತ್ರ ನಿಲ್ದಾಣಕ್ಕೆ ಆಗಮಿಸುತ್ತಿವೆ' ಎಂದು ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ದೇವರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ಮುಷ್ಕರ ಆರಂಭಿಸಿದ್ದು, ಜಿಲ್ಲೆಯಲ್ಲಿ ಬಸ್ಗಳ ಸಂಚಾರ ವಿರಳವಾಗಿದೆ. </p><p>ಬೆಂಗಳೂರು- ತುಮಕೂರು ಮಧ್ಯೆ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸುತ್ತಿವೆ. ಗ್ರಾಮೀಣ ಭಾಗದ ಕಡೆಗೆ ಹೋಗುವ ಬಸ್ಗಳ ಸಂಖ್ಯೆ ತೀರಾ ಕಡಿಮೆಯಾಗಿದೆ. ಹಳ್ಳಿಗಳಿಗೆ ಹೋಗುವ ಪ್ರಯಾಣಿಕರು ನಗರದ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದಾರೆ. </p><p>ದೂರದ ಊರುಗಳಿಂದ ಬರುವ ಬಸ್ಗಳು ಮಾತ್ರ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿವೆ. ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯೂ ವಿರಳವಾಗಿದೆ. ಜಿಲ್ಲೆಯಲ್ಲಿ ಪ್ರತಿ ದಿನ 675 ಬಸ್ಗಳು ಸಂಚರಿಸುತ್ತವೆ. 2,400ಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. </p><p>'ಬಸ್ ಸಂಚಾರ ಆರಂಭಿಸಿಲ್ಲ, ಎಲ್ಲ ಬಸ್ಗಳನ್ನು ಡಿಪೊದಲ್ಲಿ ನಿಲ್ಲಿಸಲಾಗಿದೆ. ಬೇರೆ ಬೇರೆ ಕಡೆಯಿಂದ ಬರುವ ಬಸ್ಗಳು ಮಾತ್ರ ನಿಲ್ದಾಣಕ್ಕೆ ಆಗಮಿಸುತ್ತಿವೆ' ಎಂದು ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ದೇವರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>