<p><strong>ತುಮಕೂರು</strong>: ಕೆಎಸ್ಆರ್ಟಿಸಿ ನೌಕರರ ಮುಷ್ಕರದ ಕರೆಗೆ ಬೆದರಿದ ರಾಜ್ಯ ಸರ್ಕಾರ, ತನ್ನ ಸಾಧನಾ ಸಮಾವೇಶದ ದಿನಾಂಕವನ್ನೇ ಹಿಂದೂಡಿದೆ.</p>.<p>ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಮೇ 20ರಂದು ನಡೆಸಲು ಉದ್ದೇಶಿಸಿದ್ದ ಸಮಾವೇಶವನ್ನು ಈಗ ಮೇ 19ರಂದೇ ನಡೆಸಲು ನಿರ್ಧರಿಸಲಾಗಿದೆ.</p>.<p>‘ಸಾರಿಗೆ ನೌಕರರ ಮುಷ್ಕರದಿಂದ ಸಮಾವೇಶಕ್ಕೆ ಅಡ್ಡಿ ಆಗಬಾರದು ಎಂದು ಒಂದು ದಿನ ಮುಂಚಿತವಾಗಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ ಬದಲಾವಣೆ ಮಾಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.</p>.<p>ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ತುಂಬಿದ್ದು, ಮೇ 20ರಂದು ಸಾಧನಾ ಸಮಾವೇಶಏರ್ಪಡಿಸಿತ್ತು.</p>.<p>ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳ ನ್ನು ಕರೆತರಲು 2,500ಕ್ಕೂ ಹೆಚ್ಚು ಬಸ್ಗಳನ್ನು ಬಳಸಲು ಉದ್ದೇಶಿಸ ಲಾಗಿದೆ. ಮುಷ್ಕರ ಆರಂಭವಾದರೆ ಸಮಾವೇಶಕ್ಕೆ ಜನರು ಬರಲು ಸಾಧ್ಯವಾಗುವುದಿಲ್ಲ. ಮುನ್ನೆಚ್ಚರಿಕೆ ವಹಿಸಿ ಒಂದು ದಿನ ಮೊದಲು ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.</p>.<p>ಈಗ ಮುದ್ರಿಸಿರುವ ಆಹ್ವಾನ ಪತ್ರಿಕೆಗಳನ್ನೇ ನೀಡಿ ಮೇ 19ರಂದೇ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಲಾಗುತ್ತಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-51-1379476188</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಕೆಎಸ್ಆರ್ಟಿಸಿ ನೌಕರರ ಮುಷ್ಕರದ ಕರೆಗೆ ಬೆದರಿದ ರಾಜ್ಯ ಸರ್ಕಾರ, ತನ್ನ ಸಾಧನಾ ಸಮಾವೇಶದ ದಿನಾಂಕವನ್ನೇ ಹಿಂದೂಡಿದೆ.</p>.<p>ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಮೇ 20ರಂದು ನಡೆಸಲು ಉದ್ದೇಶಿಸಿದ್ದ ಸಮಾವೇಶವನ್ನು ಈಗ ಮೇ 19ರಂದೇ ನಡೆಸಲು ನಿರ್ಧರಿಸಲಾಗಿದೆ.</p>.<p>‘ಸಾರಿಗೆ ನೌಕರರ ಮುಷ್ಕರದಿಂದ ಸಮಾವೇಶಕ್ಕೆ ಅಡ್ಡಿ ಆಗಬಾರದು ಎಂದು ಒಂದು ದಿನ ಮುಂಚಿತವಾಗಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ ಬದಲಾವಣೆ ಮಾಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.</p>.<p>ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ತುಂಬಿದ್ದು, ಮೇ 20ರಂದು ಸಾಧನಾ ಸಮಾವೇಶಏರ್ಪಡಿಸಿತ್ತು.</p>.<p>ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳ ನ್ನು ಕರೆತರಲು 2,500ಕ್ಕೂ ಹೆಚ್ಚು ಬಸ್ಗಳನ್ನು ಬಳಸಲು ಉದ್ದೇಶಿಸ ಲಾಗಿದೆ. ಮುಷ್ಕರ ಆರಂಭವಾದರೆ ಸಮಾವೇಶಕ್ಕೆ ಜನರು ಬರಲು ಸಾಧ್ಯವಾಗುವುದಿಲ್ಲ. ಮುನ್ನೆಚ್ಚರಿಕೆ ವಹಿಸಿ ಒಂದು ದಿನ ಮೊದಲು ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.</p>.<p>ಈಗ ಮುದ್ರಿಸಿರುವ ಆಹ್ವಾನ ಪತ್ರಿಕೆಗಳನ್ನೇ ನೀಡಿ ಮೇ 19ರಂದೇ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಲಾಗುತ್ತಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-51-1379476188</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>