<p><strong>ಕುಣಿಗಲ್:</strong> ತಾಲ್ಲೂಕಿನ ಎಡೆಯೂರು ಹೋಬಳಿಯ ತಟ್ಟೆಕೆರೆ ಗ್ರಾಮದ ಅವಧೂತ ಸಿದ್ದಪ್ಪಾಜಿ ಸ್ವಾಮಿ (85) ವಯೋಸಹಜ ಅನಾರೋಗ್ಯದಿಂದ ಬುಧುವಾರ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾದರು.</p>.<p>ತಾಲ್ಲೂಕಿನ ಜಲಧಿಗೆರೆ ಮೂಲದವರಾಗಿದ್ದು, 30 ವರ್ಷಗಳ ಹಿಂದೆ ತಟ್ಟೆಕೆರೆ ಗ್ರಾಮಕ್ಕೆ ಬಂದು ನೆಲೆಸಿದ್ದರು. ಪ್ರಶಾಂತ ವಾತಾವರಣದ ಗುಡಿಸಲಿನಲ್ಲಿ ನೆಲೆಸಿದ್ದು, ಸಾಕಷ್ಟು ಸಂಖ್ಯೆಯ ಭಕ್ತರನ್ನು ಹೊಂದಿದ್ದರು. ನಿತ್ಯ ನೂರಾರು ಭಕ್ತರು ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದರು.</p>.<p>ಭಕ್ತರಿಗೆ ಕಷಾಯ, ಭೋಜನ ನೀಡುವುದರ ಜತೆಗೆ ಭಕ್ತರು ತಂದು ಕೊಡುತ್ತಿದ್ದ ಹಣ್ಣನ್ನು ಭಕ್ತರಿಗೇ ನೀಡುತ್ತಿದ್ದರು. ಇತ್ತೀಚೆಗೆ ಧ್ಯಾನ ಮಂದಿರ ನಿರ್ಮಿಸಿ ಗಮನ ಸೆಳೆದಿದ್ದರು. ಗುರುವಾರ ಮಧ್ಯಾಹ್ನ 12 ಗಂಟೆಗೆ ಆಶ್ರಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.</p>.<p>ಗುಬ್ಬಿ: ಪಟ್ಟಣದ ಭಾರತ್ ಪೆಟ್ರೋಲ್ ಬಂಕ್ ಮಾಲೀಕರಾದ ಶಕುಂತಲಾ (72) ಅನಾರೋಗ್ಯದಿಂದ ಬುಧವಾರ ನಿಧನರಾದರು.</p>.<p>ಅವಿವಾಹಿತರಾಗಿದ್ದ ಶಕುಂತಲಾ ಹೋರಾಟದಲ್ಲಿಯೇ ಬದುಕು ಕಟ್ಟಿಕೊಂಡು ಪೆಟ್ರೋಲ್ ಬಂಕ್ ಸ್ಥಾಪಿಸಿದ್ದರು.</p>.<p>ಪಟ್ಟಣದಲ್ಲಿ ಗುರುವಾರ ಅಂತ್ಯಕ್ರಿಯೆ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-17-1372356722</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ತಾಲ್ಲೂಕಿನ ಎಡೆಯೂರು ಹೋಬಳಿಯ ತಟ್ಟೆಕೆರೆ ಗ್ರಾಮದ ಅವಧೂತ ಸಿದ್ದಪ್ಪಾಜಿ ಸ್ವಾಮಿ (85) ವಯೋಸಹಜ ಅನಾರೋಗ್ಯದಿಂದ ಬುಧುವಾರ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾದರು.</p>.<p>ತಾಲ್ಲೂಕಿನ ಜಲಧಿಗೆರೆ ಮೂಲದವರಾಗಿದ್ದು, 30 ವರ್ಷಗಳ ಹಿಂದೆ ತಟ್ಟೆಕೆರೆ ಗ್ರಾಮಕ್ಕೆ ಬಂದು ನೆಲೆಸಿದ್ದರು. ಪ್ರಶಾಂತ ವಾತಾವರಣದ ಗುಡಿಸಲಿನಲ್ಲಿ ನೆಲೆಸಿದ್ದು, ಸಾಕಷ್ಟು ಸಂಖ್ಯೆಯ ಭಕ್ತರನ್ನು ಹೊಂದಿದ್ದರು. ನಿತ್ಯ ನೂರಾರು ಭಕ್ತರು ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದರು.</p>.<p>ಭಕ್ತರಿಗೆ ಕಷಾಯ, ಭೋಜನ ನೀಡುವುದರ ಜತೆಗೆ ಭಕ್ತರು ತಂದು ಕೊಡುತ್ತಿದ್ದ ಹಣ್ಣನ್ನು ಭಕ್ತರಿಗೇ ನೀಡುತ್ತಿದ್ದರು. ಇತ್ತೀಚೆಗೆ ಧ್ಯಾನ ಮಂದಿರ ನಿರ್ಮಿಸಿ ಗಮನ ಸೆಳೆದಿದ್ದರು. ಗುರುವಾರ ಮಧ್ಯಾಹ್ನ 12 ಗಂಟೆಗೆ ಆಶ್ರಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.</p>.<p>ಗುಬ್ಬಿ: ಪಟ್ಟಣದ ಭಾರತ್ ಪೆಟ್ರೋಲ್ ಬಂಕ್ ಮಾಲೀಕರಾದ ಶಕುಂತಲಾ (72) ಅನಾರೋಗ್ಯದಿಂದ ಬುಧವಾರ ನಿಧನರಾದರು.</p>.<p>ಅವಿವಾಹಿತರಾಗಿದ್ದ ಶಕುಂತಲಾ ಹೋರಾಟದಲ್ಲಿಯೇ ಬದುಕು ಕಟ್ಟಿಕೊಂಡು ಪೆಟ್ರೋಲ್ ಬಂಕ್ ಸ್ಥಾಪಿಸಿದ್ದರು.</p>.<p>ಪಟ್ಟಣದಲ್ಲಿ ಗುರುವಾರ ಅಂತ್ಯಕ್ರಿಯೆ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-17-1372356722</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>