<p><strong>ತುಮಕೂರು</strong>: ಜಮೀನಿನ ಖಾತೆ ಬದಲಾವಣೆಗೆ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಯಾತ್ಸಂದ್ರ ವೃತ್ತದ ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಎಂಬುವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಮಾಚನಹಳ್ಳಿ ಗ್ರಾಮದ ಬಿ.ಯೋಗೀಶ್ ತಮ್ಮ ತಾತನ ಹೆಸರಿನಲ್ಲಿದ್ದ 38 ಗುಂಟೆ ಜಮೀನನ್ನು ಅವರ ತಂದೆ ಹೆಸರಿಗೆ ಖಾತೆ ಬದಲಾವಣೆ ಮಾಡಿಸಲು ಮಂಜುನಾಥ ಬಳಿ ಹೋಗಿದ್ದರು. ಇದಕ್ಕಾಗಿ ಮಂಜುನಾಥ ₹10 ಸಾವಿರ ಲಂಚ ಕೇಳಿದ್ದರು. ಯೋಗೀಶ್ ಹಣ ನೀಡಿದ್ದರು. ಮತ್ತೆ ₹10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡಲು ಇಷ್ಟವಿಲ್ಲದ ಯೋಗೀಶ್ ಲೋಕಾಯುಕ್ತ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.</p>.<p>ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಊರ್ಡಿಗೆರೆ ಹೋಬಳಿ ಕಂದಾಯ ನಿರೀಕ್ಷಕರ ಕಚೇರಿ ಹತ್ತಿರ ಲಂಚದ ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಂಜುನಾಥ ಅವರನ್ನು ವಶಕ್ಕೆ ಪಡೆದಿದ್ದಾರೆ.</p>.<p>ಲೋಕಾಯುಕ್ತ ಡಿವೈಎಸ್ಪಿ ಕೆ.ಎಂ.ಸಂತೋಷ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ಬಿ.ಮೊಹಮ್ಮದ್ ಸಲೀಂ, ಕೆ.ಸುರೇಶ, ಶಿವರುದ್ರಪ್ಪ ಮೇಟಿ, ಟಿ.ರಾಜು ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎ.ವಿ.ಲಕ್ಷ್ಮಿನಾರಾಯಣ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಜಮೀನಿನ ಖಾತೆ ಬದಲಾವಣೆಗೆ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಯಾತ್ಸಂದ್ರ ವೃತ್ತದ ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಎಂಬುವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಮಾಚನಹಳ್ಳಿ ಗ್ರಾಮದ ಬಿ.ಯೋಗೀಶ್ ತಮ್ಮ ತಾತನ ಹೆಸರಿನಲ್ಲಿದ್ದ 38 ಗುಂಟೆ ಜಮೀನನ್ನು ಅವರ ತಂದೆ ಹೆಸರಿಗೆ ಖಾತೆ ಬದಲಾವಣೆ ಮಾಡಿಸಲು ಮಂಜುನಾಥ ಬಳಿ ಹೋಗಿದ್ದರು. ಇದಕ್ಕಾಗಿ ಮಂಜುನಾಥ ₹10 ಸಾವಿರ ಲಂಚ ಕೇಳಿದ್ದರು. ಯೋಗೀಶ್ ಹಣ ನೀಡಿದ್ದರು. ಮತ್ತೆ ₹10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡಲು ಇಷ್ಟವಿಲ್ಲದ ಯೋಗೀಶ್ ಲೋಕಾಯುಕ್ತ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.</p>.<p>ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಊರ್ಡಿಗೆರೆ ಹೋಬಳಿ ಕಂದಾಯ ನಿರೀಕ್ಷಕರ ಕಚೇರಿ ಹತ್ತಿರ ಲಂಚದ ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಂಜುನಾಥ ಅವರನ್ನು ವಶಕ್ಕೆ ಪಡೆದಿದ್ದಾರೆ.</p>.<p>ಲೋಕಾಯುಕ್ತ ಡಿವೈಎಸ್ಪಿ ಕೆ.ಎಂ.ಸಂತೋಷ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ಬಿ.ಮೊಹಮ್ಮದ್ ಸಲೀಂ, ಕೆ.ಸುರೇಶ, ಶಿವರುದ್ರಪ್ಪ ಮೇಟಿ, ಟಿ.ರಾಜು ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎ.ವಿ.ಲಕ್ಷ್ಮಿನಾರಾಯಣ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>