<p>ಮಧುಗಿರಿ: ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ಬುಧವಾರ 20 ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.</p>.<p>ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ, ಸರ್ಕಾರಿ ಹಾಗೂ ಗೋಮಾಳದ ಜಾಗಗಳನ್ನು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡಿರುವ ಕಾರಣಕ್ಕೆ ಸರ್ಕಾರಿ ಕಚೇರಿಗಳಿಗೆ ಜಾಗವೇ ಇಲ್ಲದಂತಾಗಿದೆ. ಸರ್ಕಾರಿ ಜಾಗವನ್ನು ಅಕ್ರಮವಾಗಿ ಖಾತೆಗಳನ್ನು ಮಾಡಿಕೊಂಡಿರುವವರನ್ನು ಪತ್ತೆ ಹಚ್ಚಬೇಕು ಎಂದು ಅಧಿಕಾರಿಗಳಿಗೆ ಅದೇಶಿಸಿದರು.</p>.<p>ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿ ಅಡವಿನಾಗೇನಹಳ್ಳಿಯಲ್ಲಿ 18 ಎಕರೆ ಗೋಮಾಳವನ್ನು ಗಂಗಮ್ಮ ಎಂಬುವವರಿಗೆ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ಗೆ ಸೂಚಿಸಿದರು.</p>.<p>ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ಮಾಡಬೇಕು ಎಂದರು.</p>.<p>ತುಮಕೂರಿನಲ್ಲಿ ಮೇ 20ರಂದು ನಡೆಯುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ತಾಲ್ಲೂಕಿನಿಂದ 250ಕ್ಕೂ ಹೆಚ್ಚು ಬಸ್ಗಳ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ರಾಜ್ಯ ಸಹಕಾರ ಮಹಾ ಮಂಡಳ ನಿರ್ದೇಶಕ ಎನ್.ಗಂಗಣ್ಣ, ತಹಶೀಲ್ದಾರ್ ಶ್ರೀನಿವಾಸ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-17-968057292</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧುಗಿರಿ: ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ಬುಧವಾರ 20 ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.</p>.<p>ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ, ಸರ್ಕಾರಿ ಹಾಗೂ ಗೋಮಾಳದ ಜಾಗಗಳನ್ನು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡಿರುವ ಕಾರಣಕ್ಕೆ ಸರ್ಕಾರಿ ಕಚೇರಿಗಳಿಗೆ ಜಾಗವೇ ಇಲ್ಲದಂತಾಗಿದೆ. ಸರ್ಕಾರಿ ಜಾಗವನ್ನು ಅಕ್ರಮವಾಗಿ ಖಾತೆಗಳನ್ನು ಮಾಡಿಕೊಂಡಿರುವವರನ್ನು ಪತ್ತೆ ಹಚ್ಚಬೇಕು ಎಂದು ಅಧಿಕಾರಿಗಳಿಗೆ ಅದೇಶಿಸಿದರು.</p>.<p>ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿ ಅಡವಿನಾಗೇನಹಳ್ಳಿಯಲ್ಲಿ 18 ಎಕರೆ ಗೋಮಾಳವನ್ನು ಗಂಗಮ್ಮ ಎಂಬುವವರಿಗೆ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ಗೆ ಸೂಚಿಸಿದರು.</p>.<p>ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ಮಾಡಬೇಕು ಎಂದರು.</p>.<p>ತುಮಕೂರಿನಲ್ಲಿ ಮೇ 20ರಂದು ನಡೆಯುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ತಾಲ್ಲೂಕಿನಿಂದ 250ಕ್ಕೂ ಹೆಚ್ಚು ಬಸ್ಗಳ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ರಾಜ್ಯ ಸಹಕಾರ ಮಹಾ ಮಂಡಳ ನಿರ್ದೇಶಕ ಎನ್.ಗಂಗಣ್ಣ, ತಹಶೀಲ್ದಾರ್ ಶ್ರೀನಿವಾಸ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-17-968057292</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>