<p><strong>ಬೆಂಗಳೂರು</strong>: ಜರ್ಮನಿ ಮೂಲದ ಮಾನ್+ಹುಮ್ಮೆಲ್ ಕಂಪನಿಯು ತುಮಕೂರಿನಲ್ಲಿ ಅತ್ಯಾಧುನಿಕ ‘ಜಾಗತಿಕ ತಂತ್ರಜ್ಞಾನ ಮತ್ತು ನಾವೀನ್ಯ ಕೇಂದ್ರ’ ಆರಂಭಿಸಲಿದೆ.</p>.<p>ಕಂಪನಿಯು ವಾಹನಗಳು, ಕೈಗಾರಿಕೆಗಳಲ್ಲಿ ಬಳಕೆಯಾಗುವ ಶುದ್ಧೀಕರಣ ಉತ್ಪನ್ನಗಳನ್ನು ತಯಾರಿಸುತ್ತದೆ. ತುಮಕೂರಿನಲ್ಲಿ ಗುರುವಾರ ಆರಂಭವಾಗಲಿರುವ ಕೇಂದ್ರವು ಕಂಪನಿಯ ಪಾಲಿಗೆ ಜರ್ಮನಿಯ ಹೊರಗಿನ ಅತಿದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯ ಕೇಂದ್ರ ಎಂದು ಕಂಪನಿಯ ಭಾರತದ ವ್ಯವಸ್ಥಾಪಕ ನಿರ್ದೇಶಕ ಸುದೀಶ್ ಕರಿಬಿಂಗಲ್ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಹೇಳಿದರು.</p>.<p>ಕಂಪನಿಯು ದೇಶದಲ್ಲಿ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ವಿಸ್ತರಿಸಲು ಮುಂದಾಗಿದೆ. ಇದಕ್ಕಾಗಿ ₹100 ಕೋಟಿ ಹೂಡಿಕೆ ಮಾಡಲಿದೆ. ಎಂಜಿನಿಯರಿಂಗ್, ನಾವೀನ್ಯ ಮತ್ತು ಸುಧಾರಿತ ಫಿಲ್ಟರೇಶನ್ ತಂತ್ರಜ್ಞಾನಗಳಿಗೆ ಭಾರತವನ್ನು ಪ್ರಮುಖ ಕೇಂದ್ರವನ್ನಾಗಿ ಮಾಡಲಿದೆ. ಸುಧಾರಿತ ಸಂಶೋಧನಾ ಪ್ರಯೋಗಾಲಯಗಳು,ಪರೀಕ್ಷಾ ಮೂಲಸೌಕರ್ಯಗಳು, ಡಿಜಿಟಲ್ ಎಂಜಿನಿಯರಿಂಗ್ ಮತ್ತು ದತ್ತಾಂಶ ವಿಶ್ಲೇಷಣೆಯು ತುಮಕೂರಿನ ಈ ಒಂದೇ ಕೇಂದ್ರದಲ್ಲಿ ದೊರೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜರ್ಮನಿ ಮೂಲದ ಮಾನ್+ಹುಮ್ಮೆಲ್ ಕಂಪನಿಯು ತುಮಕೂರಿನಲ್ಲಿ ಅತ್ಯಾಧುನಿಕ ‘ಜಾಗತಿಕ ತಂತ್ರಜ್ಞಾನ ಮತ್ತು ನಾವೀನ್ಯ ಕೇಂದ್ರ’ ಆರಂಭಿಸಲಿದೆ.</p>.<p>ಕಂಪನಿಯು ವಾಹನಗಳು, ಕೈಗಾರಿಕೆಗಳಲ್ಲಿ ಬಳಕೆಯಾಗುವ ಶುದ್ಧೀಕರಣ ಉತ್ಪನ್ನಗಳನ್ನು ತಯಾರಿಸುತ್ತದೆ. ತುಮಕೂರಿನಲ್ಲಿ ಗುರುವಾರ ಆರಂಭವಾಗಲಿರುವ ಕೇಂದ್ರವು ಕಂಪನಿಯ ಪಾಲಿಗೆ ಜರ್ಮನಿಯ ಹೊರಗಿನ ಅತಿದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯ ಕೇಂದ್ರ ಎಂದು ಕಂಪನಿಯ ಭಾರತದ ವ್ಯವಸ್ಥಾಪಕ ನಿರ್ದೇಶಕ ಸುದೀಶ್ ಕರಿಬಿಂಗಲ್ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಹೇಳಿದರು.</p>.<p>ಕಂಪನಿಯು ದೇಶದಲ್ಲಿ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ವಿಸ್ತರಿಸಲು ಮುಂದಾಗಿದೆ. ಇದಕ್ಕಾಗಿ ₹100 ಕೋಟಿ ಹೂಡಿಕೆ ಮಾಡಲಿದೆ. ಎಂಜಿನಿಯರಿಂಗ್, ನಾವೀನ್ಯ ಮತ್ತು ಸುಧಾರಿತ ಫಿಲ್ಟರೇಶನ್ ತಂತ್ರಜ್ಞಾನಗಳಿಗೆ ಭಾರತವನ್ನು ಪ್ರಮುಖ ಕೇಂದ್ರವನ್ನಾಗಿ ಮಾಡಲಿದೆ. ಸುಧಾರಿತ ಸಂಶೋಧನಾ ಪ್ರಯೋಗಾಲಯಗಳು,ಪರೀಕ್ಷಾ ಮೂಲಸೌಕರ್ಯಗಳು, ಡಿಜಿಟಲ್ ಎಂಜಿನಿಯರಿಂಗ್ ಮತ್ತು ದತ್ತಾಂಶ ವಿಶ್ಲೇಷಣೆಯು ತುಮಕೂರಿನ ಈ ಒಂದೇ ಕೇಂದ್ರದಲ್ಲಿ ದೊರೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>