<p><strong>ತುಮಕೂರು:</strong> ಪತ್ರಕರ್ತರು ಸಮಾಜದಲ್ಲಿ ಹೊಣೆಗಾರಿಕೆಯಿಂದ ನಡೆದುಕೊಳ್ಳಬೇಕು. ಸತ್ಯವನ್ನು ಎಂದೂ ಮರೆಮಾಚಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಲ್ಲಿ ಬುಧವಾರ ಸಲಹೆ ನೀಡಿದರು.</p>.<p>ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ‘ಅಕ್ಷರ ನಿಧಿ’ ಪ್ರತಿಭಾ ಪುರಸ್ಕಾರ ಮತ್ತು ಜಿ.ಪರಮೇಶ್ವರ– ಕನ್ನಿಕಾ ಪರಮೇಶ್ವರಿ ಪ್ರತಿಭಾ ಪುರಸ್ಕಾರ ನಿಧಿ ವಿತರಣಾ ಸಮಾರಂಭದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.</p>.<p>ರಾಜಕಾರಣಿಗಳು ಐದು ವರ್ಷ ಏನು ಕೆಲಸ ಮಾಡಿದ್ದಾರೆ ಎಂಬುದನ್ನು ಚುನಾವಣೆ ಸಮಯದಲ್ಲಿ ಅಳತೆ ಮಾಡುತ್ತಾರೆ. ಅಧಿಕಾರಿಗಳನ್ನೂ ಮತ್ತೊಂದು ರೀತಿಯಲ್ಲಿ ಅಳತೆ ಮಾಡಲಾಗುತ್ತದೆ. ಅದೇ ರೀತಿ ಪತ್ರಕರ್ತರಾದವರು ಸಮಾಜಕ್ಕೆ ಹೊಣೆಗಾರರಾಗಿರಬೇಕು. ಜನರ ನಂಬಿಕೆ ಉಳಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ವದಂತಿ, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ ಶೀಘ್ರವೇ ಕಾಯ್ದೆಯೊಂದನ್ನು ಜಾರಿಗೆ ತರಲಾಗುವುದು. ಪರಿಶೀಲಿಸದೆ, ಖಚಿತಪಡಿಸಿಕೊಳ್ಳದೆ ಸುದ್ದಿ ಪ್ರಕಟಿಸಬಾರದು. ಎಲ್ಲಕ್ಕೂ ವಿಶ್ವಾಸಾರ್ಹತೆ ಮುಖ್ಯವಾಗುತ್ತದೆ. ವ್ಯಕ್ತಿ ಗೌರವ, ಖಾಸಗಿತನ ಕಾಪಾಡಬೇಕು. ಬರಹಗಳು ಸಮಾಜದಲ್ಲಿ ದ್ವೇಷ ಸೃಷ್ಟಿಸಬಾರದು ಎಂದರು.</p>.<p>ಪತ್ರಕರ್ತರಿಗೆ ನಿವೇಶನ ಕೊಡಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಸಿದ್ಧಾರ್ಥ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಸಿಗುವಂತೆ ಮಾಡಲು ಆರೋಗ್ಯ ಕಾರ್ಡ್ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಸಂಘದ ಅಧ್ಯಕ್ಷ ಎಲ್.ಯೋಗೇಶ್, ‘ಶಿಕ್ಷಣ ಸಂಸ್ಥೆಗಳಲ್ಲಿ ರಿಯಾಯಿತಿ ದರದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರವೇಶ ಕೊಡಿಸುವ ಪ್ರಯತ್ನ ನಡೆದಿದೆ’ ಎಂದು ಹೇಳಿದರು.</p>.<p>ಶಾಸಕರಾದ ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಉಪಸ್ಥಿತರಿದ್ದರು.</p>
<p><strong>ತುಮಕೂರು:</strong> ಪತ್ರಕರ್ತರು ಸಮಾಜದಲ್ಲಿ ಹೊಣೆಗಾರಿಕೆಯಿಂದ ನಡೆದುಕೊಳ್ಳಬೇಕು. ಸತ್ಯವನ್ನು ಎಂದೂ ಮರೆಮಾಚಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಲ್ಲಿ ಬುಧವಾರ ಸಲಹೆ ನೀಡಿದರು.</p>.<p>ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ‘ಅಕ್ಷರ ನಿಧಿ’ ಪ್ರತಿಭಾ ಪುರಸ್ಕಾರ ಮತ್ತು ಜಿ.ಪರಮೇಶ್ವರ– ಕನ್ನಿಕಾ ಪರಮೇಶ್ವರಿ ಪ್ರತಿಭಾ ಪುರಸ್ಕಾರ ನಿಧಿ ವಿತರಣಾ ಸಮಾರಂಭದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.</p>.<p>ರಾಜಕಾರಣಿಗಳು ಐದು ವರ್ಷ ಏನು ಕೆಲಸ ಮಾಡಿದ್ದಾರೆ ಎಂಬುದನ್ನು ಚುನಾವಣೆ ಸಮಯದಲ್ಲಿ ಅಳತೆ ಮಾಡುತ್ತಾರೆ. ಅಧಿಕಾರಿಗಳನ್ನೂ ಮತ್ತೊಂದು ರೀತಿಯಲ್ಲಿ ಅಳತೆ ಮಾಡಲಾಗುತ್ತದೆ. ಅದೇ ರೀತಿ ಪತ್ರಕರ್ತರಾದವರು ಸಮಾಜಕ್ಕೆ ಹೊಣೆಗಾರರಾಗಿರಬೇಕು. ಜನರ ನಂಬಿಕೆ ಉಳಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ವದಂತಿ, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ ಶೀಘ್ರವೇ ಕಾಯ್ದೆಯೊಂದನ್ನು ಜಾರಿಗೆ ತರಲಾಗುವುದು. ಪರಿಶೀಲಿಸದೆ, ಖಚಿತಪಡಿಸಿಕೊಳ್ಳದೆ ಸುದ್ದಿ ಪ್ರಕಟಿಸಬಾರದು. ಎಲ್ಲಕ್ಕೂ ವಿಶ್ವಾಸಾರ್ಹತೆ ಮುಖ್ಯವಾಗುತ್ತದೆ. ವ್ಯಕ್ತಿ ಗೌರವ, ಖಾಸಗಿತನ ಕಾಪಾಡಬೇಕು. ಬರಹಗಳು ಸಮಾಜದಲ್ಲಿ ದ್ವೇಷ ಸೃಷ್ಟಿಸಬಾರದು ಎಂದರು.</p>.<p>ಪತ್ರಕರ್ತರಿಗೆ ನಿವೇಶನ ಕೊಡಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಸಿದ್ಧಾರ್ಥ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಸಿಗುವಂತೆ ಮಾಡಲು ಆರೋಗ್ಯ ಕಾರ್ಡ್ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಸಂಘದ ಅಧ್ಯಕ್ಷ ಎಲ್.ಯೋಗೇಶ್, ‘ಶಿಕ್ಷಣ ಸಂಸ್ಥೆಗಳಲ್ಲಿ ರಿಯಾಯಿತಿ ದರದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರವೇಶ ಕೊಡಿಸುವ ಪ್ರಯತ್ನ ನಡೆದಿದೆ’ ಎಂದು ಹೇಳಿದರು.</p>.<p>ಶಾಸಕರಾದ ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಉಪಸ್ಥಿತರಿದ್ದರು.</p>