<p>ತುಮಕೂರು: ಸಣ್ಣ ಕೈಗಾರಿಕೆಗಳು ಉದ್ಯೋಗ ಸೃಷ್ಟಿ, ಉತ್ಪಾದನೆ ಹೆಚ್ಚಳ ಮತ್ತು ಆರ್ಥಿಕ ಅಭಿವೃದ್ಧಿಯ ಪ್ರಮುಖ ಚಾಲಕ ಶಕ್ತಿ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಿ.ಆರ್.ಗಣೇಶ್ ರಾವ್ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಭಾನುವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದಿಂದ (ಕಾಸಿಯಾ) ಹಮ್ಮಿಕೊಂಡಿದ್ದ ದಕ್ಷಿಣ ಭಾರತ ಮಟ್ಟದ ಸೂಕ್ಷ್ಮ ಹಾಗೂ ಸಣ್ಣ ಕೈಗಾರಿಕೆಗಳ (ಎಂಎಸ್ಎಂಇ) ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ಕಾಸಿಯಾ ರಾಷ್ಟ್ರದ ಆರ್ಥಿಕತೆ ಬಲಪಡಿಸಲು, ನಮ್ಮ ದೇಶದ ಯುವಕರಿಗೆ ಸುಸ್ಥಿರ ಉದ್ಯೋಗ ಸೃಷ್ಟಿಸಲು ಕೈಗಾರಿಕೆಗಳ ಸಬಲೀಕರಣಕ್ಕೆ ಶ್ರಮಿಸುತ್ತಿದೆ. ಕೈಗಾರಿಕೆಗಳ ಅಭಿವೃದ್ಧಿಗೆ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ. ಎಂಎಸ್ಎಂಇಗಳು ಸಮಾವೇಶದ ಮೂಲಕ ತಮ್ಮ ಕೊಡುಗೆ ಸಣ್ಣದಲ್ಲ ಎಂಬುದನ್ನು ಸಾಬೀತು ಪಡಿಸಿವೆ ಎಂದರು.</p>.<p>ಪರಸ್ಪರ ಸಂಪರ್ಕ ಸಾಧಿಸಲು, ಸಹಕಾರ ಬೆಳೆಸಿಕೊಳ್ಳಲು, ಹೊಸ ಅವಕಾಶ ಅನ್ವೇಷಿಸಲು ಸಮಾವೇಶ ಸಹಕಾರಿಯಾಗಿದೆ. ತಾಂತ್ರಿಕ ಅಧಿವೇಶನ, ಚರ್ಚೆ– ಸಂವಾದ, ವಸ್ತು ಪ್ರದರ್ಶನ ಉದ್ಯಮಿಗಳಿಗೆ ಕಲಿಕೆಯ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.</p>.<p>ಮೆ. ಏಸ್ ಮೈಕ್ರೋಮ್ಯಾಟಿಕ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಟಿ.ಕೆ.ರಮೇಶ್, ‘ಸಣ್ಣ ಕೈಗಾರಿಕೆಗಳಿಂದ ಉತ್ಪಾದನೆಯಾಗುವ ವಸ್ತುಗಳಲ್ಲಿ ಶೇ 40 ರಷ್ಟು ರಫ್ತು ಆಗುತ್ತಿವೆ. ಉದ್ಯಮಿಗಳು ಗುಣಮಟ್ಟ ಕಾಪಾಡಿದರೆ ನಿರೀಕ್ಷಿತ ಯಶಸ್ಸು ಕಾಣಲು ಸಾಧ್ಯ. ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ಮಾಡಿದರು.</p>.<p>ಸಮಾವೇಶದ ಉಪ ಸಮಿತಿ ಅಧ್ಯಕ್ಷ ಸದಾಶಿವ ಆರ್.ಅಮಿನ್, ‘ಸುಮಾರು 150 ಮಳಿಗೆ ತೆರೆಯಲಾಗಿತ್ತು. ಸಣ್ಣ ಕೈಗಾರಿಕೆ ಆರಂಭಿಸುವ ಉದ್ಯಮಿಗಳಿಗೆ ಇದು ಉಪಯೋಗವಾಗಲಿದೆ’ ಎಂದರು.</p>.<p>ವಸ್ತು ಪ್ರದರ್ಶನದ 12 ಮಳಿಗೆಗಳಿಗೆ ಪ್ರಶಸ್ತಿ ನೀಡಲಾಯಿತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕ ವಿಷ್ಣುವರ್ಧನ್ ರೆಡ್ಡಿ, ಕಾಸಿಯಾ ಉಪಾಧ್ಯಕ್ಷ ನಿಂಗಣ್ಣ ಎಸ್.ಬಿರಾದರ್, ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹುಸೇನ್, ಪದಾಧಿಕಾರಿಗಳಾದ ಕೇಶವಮೂರ್ತಿ, ವಿ.ದಿನೇಶ್ ಕುಮಾರ್, ಆರ್.ದೊರೈ, ಕೆ.ಆನಂದರಾವ್, ಪಿ.ಎಸ್.ಶ್ರೀಕಂಠದತ್ತ, ಕಿರಣ್ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-17-1771251372</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಸಣ್ಣ ಕೈಗಾರಿಕೆಗಳು ಉದ್ಯೋಗ ಸೃಷ್ಟಿ, ಉತ್ಪಾದನೆ ಹೆಚ್ಚಳ ಮತ್ತು ಆರ್ಥಿಕ ಅಭಿವೃದ್ಧಿಯ ಪ್ರಮುಖ ಚಾಲಕ ಶಕ್ತಿ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಿ.ಆರ್.ಗಣೇಶ್ ರಾವ್ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಭಾನುವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದಿಂದ (ಕಾಸಿಯಾ) ಹಮ್ಮಿಕೊಂಡಿದ್ದ ದಕ್ಷಿಣ ಭಾರತ ಮಟ್ಟದ ಸೂಕ್ಷ್ಮ ಹಾಗೂ ಸಣ್ಣ ಕೈಗಾರಿಕೆಗಳ (ಎಂಎಸ್ಎಂಇ) ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ಕಾಸಿಯಾ ರಾಷ್ಟ್ರದ ಆರ್ಥಿಕತೆ ಬಲಪಡಿಸಲು, ನಮ್ಮ ದೇಶದ ಯುವಕರಿಗೆ ಸುಸ್ಥಿರ ಉದ್ಯೋಗ ಸೃಷ್ಟಿಸಲು ಕೈಗಾರಿಕೆಗಳ ಸಬಲೀಕರಣಕ್ಕೆ ಶ್ರಮಿಸುತ್ತಿದೆ. ಕೈಗಾರಿಕೆಗಳ ಅಭಿವೃದ್ಧಿಗೆ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ. ಎಂಎಸ್ಎಂಇಗಳು ಸಮಾವೇಶದ ಮೂಲಕ ತಮ್ಮ ಕೊಡುಗೆ ಸಣ್ಣದಲ್ಲ ಎಂಬುದನ್ನು ಸಾಬೀತು ಪಡಿಸಿವೆ ಎಂದರು.</p>.<p>ಪರಸ್ಪರ ಸಂಪರ್ಕ ಸಾಧಿಸಲು, ಸಹಕಾರ ಬೆಳೆಸಿಕೊಳ್ಳಲು, ಹೊಸ ಅವಕಾಶ ಅನ್ವೇಷಿಸಲು ಸಮಾವೇಶ ಸಹಕಾರಿಯಾಗಿದೆ. ತಾಂತ್ರಿಕ ಅಧಿವೇಶನ, ಚರ್ಚೆ– ಸಂವಾದ, ವಸ್ತು ಪ್ರದರ್ಶನ ಉದ್ಯಮಿಗಳಿಗೆ ಕಲಿಕೆಯ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.</p>.<p>ಮೆ. ಏಸ್ ಮೈಕ್ರೋಮ್ಯಾಟಿಕ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಟಿ.ಕೆ.ರಮೇಶ್, ‘ಸಣ್ಣ ಕೈಗಾರಿಕೆಗಳಿಂದ ಉತ್ಪಾದನೆಯಾಗುವ ವಸ್ತುಗಳಲ್ಲಿ ಶೇ 40 ರಷ್ಟು ರಫ್ತು ಆಗುತ್ತಿವೆ. ಉದ್ಯಮಿಗಳು ಗುಣಮಟ್ಟ ಕಾಪಾಡಿದರೆ ನಿರೀಕ್ಷಿತ ಯಶಸ್ಸು ಕಾಣಲು ಸಾಧ್ಯ. ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ಮಾಡಿದರು.</p>.<p>ಸಮಾವೇಶದ ಉಪ ಸಮಿತಿ ಅಧ್ಯಕ್ಷ ಸದಾಶಿವ ಆರ್.ಅಮಿನ್, ‘ಸುಮಾರು 150 ಮಳಿಗೆ ತೆರೆಯಲಾಗಿತ್ತು. ಸಣ್ಣ ಕೈಗಾರಿಕೆ ಆರಂಭಿಸುವ ಉದ್ಯಮಿಗಳಿಗೆ ಇದು ಉಪಯೋಗವಾಗಲಿದೆ’ ಎಂದರು.</p>.<p>ವಸ್ತು ಪ್ರದರ್ಶನದ 12 ಮಳಿಗೆಗಳಿಗೆ ಪ್ರಶಸ್ತಿ ನೀಡಲಾಯಿತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕ ವಿಷ್ಣುವರ್ಧನ್ ರೆಡ್ಡಿ, ಕಾಸಿಯಾ ಉಪಾಧ್ಯಕ್ಷ ನಿಂಗಣ್ಣ ಎಸ್.ಬಿರಾದರ್, ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹುಸೇನ್, ಪದಾಧಿಕಾರಿಗಳಾದ ಕೇಶವಮೂರ್ತಿ, ವಿ.ದಿನೇಶ್ ಕುಮಾರ್, ಆರ್.ದೊರೈ, ಕೆ.ಆನಂದರಾವ್, ಪಿ.ಎಸ್.ಶ್ರೀಕಂಠದತ್ತ, ಕಿರಣ್ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-17-1771251372</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>