<p><strong>ತುಮಕೂರು</strong>: ನೀಟ್ ಪ್ರಶ್ನೆ ಪತ್ರಿಕೆ ಪದೇ ಪದೇ ಸೋರಿಕೆಯಾಗುತ್ತಿದ್ದು, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ರದ್ದು ಪಡಿಸಬೇಕು. ಆಯಾ ರಾಜ್ಯಗಳೇ ಸಿಇಟಿ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹ್ಮದ್ ಇಲ್ಲಿ ಶನಿವಾರ ಒತ್ತಾಯಿಸಿದರು.</p>.<p>ವರ್ಷಗಳಿಂದ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಯಲ್ಲಿ ಇಡಲಾಗಿದೆ. ಕೃತ್ಯಕ್ಕೆ ಕಾರಣವಾದ ಎನ್ಟಿಎ ಮುಖ್ಯಸ್ಥರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರಾಷ್ಟ್ರದ ಅಭಿವೃದ್ಧಿಗೂ ಮಾರಕವಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಮುಖಂಡ ಕೆಂಚಮಾರಯ್ಯ, ‘ಕೋಚಿಂಗ್ ಸೆಂಟರ್ ಹಾವಳಿಗೆ ವಿದ್ಯಾರ್ಥಿ ಜೀವನ ಹಾಳಾಗುತ್ತಿದೆ. ಬೇರೆ ಸಂದರ್ಭಗಳಲ್ಲಿ ಬೀದಿಗಿಳಿಯುವ ಬಿಜೆಪಿ ಸಂಸದರು, ಶಾಸಕರು, ಎಬಿವಿಪಿ ಪದಾಧಿಕಾರಿಗಳು ಈಗ ಯಾಕೆ ಬಾಯಿ ಬಿಡುತ್ತಿಲ್ಲ. ಕ್ಷುಲ್ಲಕ ವಿಚಾರಗಳಿಗೆ ಜನರ ದಿಕ್ಕು ತಪ್ಪಿಸುವವರಿಗೆ ದೊಡ್ಡ ಹಗರಣ ಕಾಣುತ್ತಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣ, ಮುಖಂಡರಾದ ಮಹೇಶ್, ಮಂಜುನಾಥ್, ಗುರುಪ್ರಸಾದ್, ಕುಮಾರಸ್ವಾಮಿ, ಲಿಂಗರಾಜು, ಷಣ್ಮಕಪ್ಪ, ಇರ್ಫಾನ್ ಅಹ್ಮದ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-17-426139874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ನೀಟ್ ಪ್ರಶ್ನೆ ಪತ್ರಿಕೆ ಪದೇ ಪದೇ ಸೋರಿಕೆಯಾಗುತ್ತಿದ್ದು, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ರದ್ದು ಪಡಿಸಬೇಕು. ಆಯಾ ರಾಜ್ಯಗಳೇ ಸಿಇಟಿ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹ್ಮದ್ ಇಲ್ಲಿ ಶನಿವಾರ ಒತ್ತಾಯಿಸಿದರು.</p>.<p>ವರ್ಷಗಳಿಂದ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಯಲ್ಲಿ ಇಡಲಾಗಿದೆ. ಕೃತ್ಯಕ್ಕೆ ಕಾರಣವಾದ ಎನ್ಟಿಎ ಮುಖ್ಯಸ್ಥರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರಾಷ್ಟ್ರದ ಅಭಿವೃದ್ಧಿಗೂ ಮಾರಕವಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಮುಖಂಡ ಕೆಂಚಮಾರಯ್ಯ, ‘ಕೋಚಿಂಗ್ ಸೆಂಟರ್ ಹಾವಳಿಗೆ ವಿದ್ಯಾರ್ಥಿ ಜೀವನ ಹಾಳಾಗುತ್ತಿದೆ. ಬೇರೆ ಸಂದರ್ಭಗಳಲ್ಲಿ ಬೀದಿಗಿಳಿಯುವ ಬಿಜೆಪಿ ಸಂಸದರು, ಶಾಸಕರು, ಎಬಿವಿಪಿ ಪದಾಧಿಕಾರಿಗಳು ಈಗ ಯಾಕೆ ಬಾಯಿ ಬಿಡುತ್ತಿಲ್ಲ. ಕ್ಷುಲ್ಲಕ ವಿಚಾರಗಳಿಗೆ ಜನರ ದಿಕ್ಕು ತಪ್ಪಿಸುವವರಿಗೆ ದೊಡ್ಡ ಹಗರಣ ಕಾಣುತ್ತಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣ, ಮುಖಂಡರಾದ ಮಹೇಶ್, ಮಂಜುನಾಥ್, ಗುರುಪ್ರಸಾದ್, ಕುಮಾರಸ್ವಾಮಿ, ಲಿಂಗರಾಜು, ಷಣ್ಮಕಪ್ಪ, ಇರ್ಫಾನ್ ಅಹ್ಮದ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-17-426139874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>