<p><strong>ತುಮಕೂರು</strong>: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಪ್ರಧಾನಿ ಮೋದಿ ಈ ಕುರಿತು ಇದುವರೆಗೆ ಮಾತನಾಡಿಲ್ಲ. ಇಂತಹ ಪ್ರಧಾನಿಯಿಂದ ಏನು ನಿರೀಕ್ಷಿಸಲು ಸಾಧ್ಯ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಚಂದ್ರಶೇಖರ್ಗೌಡ ಪ್ರಶ್ನಿಸಿದರು.</p>.<p>ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ.ರಾಜೀವ್ಗಾಂಧಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ನೆಹರೂ, ಇಂದಿರಾ ಗಾಂಧಿ, ರಾಜೀವ್ಗಾಂಧಿ ದೇಶದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಮಣಿಪುರ ಹೊತ್ತಿ ಉರಿದರೂ ಅಲ್ಲಿಗೆ ಪ್ರಧಾನಿ ಭೇಟಿ ನೀಡಲಿಲ್ಲ. ತಿಂಗಳಿಗೊಂದು ವಿದೇಶಿ ಪ್ರವಾಸ ಮಾಡುವ ಪ್ರಧಾನಿಗೆ ಮಣಿಪುರಕ್ಕೆ ಹೋಗಲು ಸಮಯ ಇಲ್ಲ ಎಂದು ಟೀಕಿಸಿದರು.</p>.<p>ಮಾಜಿ ಶಾಸಕ ರಫೀಕ್ ಅಹ್ಮದ್, ‘ಈ ವರ್ಷದ ಅಂತ್ಯಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸಾಧ್ಯತೆ ಇದೆ. ಸಮರ್ಥವಾಗಿ ಎದುರಿಸಲು ಮುಖಂಡರು, ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹ್ಮದ್, ‘ರಾಷ್ಟ್ರದ ಆಡಳಿತ ವ್ಯವಸ್ಥೆಗೆ ತಂತ್ರಜ್ಞಾನದ ಮೂಲಕ ಆಧುನಿಕತೆಯ ವೇಗ ನೀಡಿದವರು ರಾಜೀವ್ಗಾಂಧಿ. ಅವರ ಬದುಕಿನ ಹಾದಿ, ಸಾಧನೆ ಕುರಿತು ಜನತೆಗೆ ತಿಳಿಸಬೇಕು. ಬಿಜೆಪಿಯ ಜನ ವಿರೋಧಿ ನೀತಿ ಖಂಡಿಸಬೇಕು’ ಎಂದರು.</p>.<p>ಮುಖಂಡರಾದ ಆರ್.ರಾಮಕೃಷ್ಣ, ಎಚ್.ಸಿ.ಷಣ್ಮುಖಪ್ಪ, ಸೌಭಾಗ್ಯ, ಮಹೇಶ್, ಫಯಾಜ್, ಪಂಚಾಕ್ಷರಯ್ಯ, ಸೈಯದ್ ದಾದಾಪೀರ್, ಅನಿಲ್ಕುಮಾರ್, ಸಂಜೀವಕುಮಾರ್, ಹಾಲೇನೂರು ವೀರೇಶ್ಕುಮಾರ್, ಕೈದಾಳ ರಮೇಶ್, ಸುಜಾತಾ, ಸುಮಾ, ಕೆಂಪರಾಜು, ಇರ್ಫಾನ್, ಶಿವಾಜಿ, ಕುಮಾರಸ್ವಾಮಿ, ಶಿವರಾಜು, ನ್ಯಾತೇಗೌಡ ಇತರರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-17-1429999262</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಪ್ರಧಾನಿ ಮೋದಿ ಈ ಕುರಿತು ಇದುವರೆಗೆ ಮಾತನಾಡಿಲ್ಲ. ಇಂತಹ ಪ್ರಧಾನಿಯಿಂದ ಏನು ನಿರೀಕ್ಷಿಸಲು ಸಾಧ್ಯ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಚಂದ್ರಶೇಖರ್ಗೌಡ ಪ್ರಶ್ನಿಸಿದರು.</p>.<p>ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ.ರಾಜೀವ್ಗಾಂಧಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ನೆಹರೂ, ಇಂದಿರಾ ಗಾಂಧಿ, ರಾಜೀವ್ಗಾಂಧಿ ದೇಶದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಮಣಿಪುರ ಹೊತ್ತಿ ಉರಿದರೂ ಅಲ್ಲಿಗೆ ಪ್ರಧಾನಿ ಭೇಟಿ ನೀಡಲಿಲ್ಲ. ತಿಂಗಳಿಗೊಂದು ವಿದೇಶಿ ಪ್ರವಾಸ ಮಾಡುವ ಪ್ರಧಾನಿಗೆ ಮಣಿಪುರಕ್ಕೆ ಹೋಗಲು ಸಮಯ ಇಲ್ಲ ಎಂದು ಟೀಕಿಸಿದರು.</p>.<p>ಮಾಜಿ ಶಾಸಕ ರಫೀಕ್ ಅಹ್ಮದ್, ‘ಈ ವರ್ಷದ ಅಂತ್ಯಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸಾಧ್ಯತೆ ಇದೆ. ಸಮರ್ಥವಾಗಿ ಎದುರಿಸಲು ಮುಖಂಡರು, ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹ್ಮದ್, ‘ರಾಷ್ಟ್ರದ ಆಡಳಿತ ವ್ಯವಸ್ಥೆಗೆ ತಂತ್ರಜ್ಞಾನದ ಮೂಲಕ ಆಧುನಿಕತೆಯ ವೇಗ ನೀಡಿದವರು ರಾಜೀವ್ಗಾಂಧಿ. ಅವರ ಬದುಕಿನ ಹಾದಿ, ಸಾಧನೆ ಕುರಿತು ಜನತೆಗೆ ತಿಳಿಸಬೇಕು. ಬಿಜೆಪಿಯ ಜನ ವಿರೋಧಿ ನೀತಿ ಖಂಡಿಸಬೇಕು’ ಎಂದರು.</p>.<p>ಮುಖಂಡರಾದ ಆರ್.ರಾಮಕೃಷ್ಣ, ಎಚ್.ಸಿ.ಷಣ್ಮುಖಪ್ಪ, ಸೌಭಾಗ್ಯ, ಮಹೇಶ್, ಫಯಾಜ್, ಪಂಚಾಕ್ಷರಯ್ಯ, ಸೈಯದ್ ದಾದಾಪೀರ್, ಅನಿಲ್ಕುಮಾರ್, ಸಂಜೀವಕುಮಾರ್, ಹಾಲೇನೂರು ವೀರೇಶ್ಕುಮಾರ್, ಕೈದಾಳ ರಮೇಶ್, ಸುಜಾತಾ, ಸುಮಾ, ಕೆಂಪರಾಜು, ಇರ್ಫಾನ್, ಶಿವಾಜಿ, ಕುಮಾರಸ್ವಾಮಿ, ಶಿವರಾಜು, ನ್ಯಾತೇಗೌಡ ಇತರರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-17-1429999262</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>