<p>ನಿಟ್ಟೂರು,(ಗುಬ್ಬಿ): ನಿಟ್ಟೂರು ಹೋಬಳಿ ದೊಡ್ಡಗುಣಿ ಮತ್ತು ಕೊಂಡ್ಲಿ ಕ್ರಾಸ್ ನಡುವೆ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿರುವ ಜಾಗದಲ್ಲಿ ಗುರುವಾರ ರಾತ್ರಿ ದೊಡ್ಡಗುಣಿಯಿಂದ ಕೊಂಡ್ಲಿ ಕ್ರಾಸ್ ಕಡೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದೇವರ ಹಟ್ಟಿಯ ಮಹಾಲಿಂಗಯ್ಯ ಗಾಯಗೊಂಡಿದ್ದಾರೆ.</p>.<p>ದೊಡ್ಡಗುಣಿ ಸಮೀಪ ನಡೆಯುತ್ತಿರುವ ಎತ್ತಿನಹೊಳೆ ನಾಲೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಾಗಿದ್ದರೂ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಅಗತ್ಯ ಕ್ರಮ ಕೈಗೊಳ್ಳದೆ ಇರುವುದರಿಂದ ಹೆದ್ದಾರಿ ಗುಂಡಿ ಬಿದ್ದು ಹಾಳಾಗಿದೆ.</p>.<p>ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಸಂಬಂಧಿಸಿದವರು ಯಾವುದೇ ಕ್ರಮ ಕೈಗೊಂಡಿಲ್ಲ. ಜೊತೆಗೆ ಅಗತ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸದೆ ಇರುವುದರಿಂದ ಪದೇ ಪದೇ ಈ ಪ್ರದೇಶಗಳಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-17-210203746</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಿಟ್ಟೂರು,(ಗುಬ್ಬಿ): ನಿಟ್ಟೂರು ಹೋಬಳಿ ದೊಡ್ಡಗುಣಿ ಮತ್ತು ಕೊಂಡ್ಲಿ ಕ್ರಾಸ್ ನಡುವೆ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿರುವ ಜಾಗದಲ್ಲಿ ಗುರುವಾರ ರಾತ್ರಿ ದೊಡ್ಡಗುಣಿಯಿಂದ ಕೊಂಡ್ಲಿ ಕ್ರಾಸ್ ಕಡೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದೇವರ ಹಟ್ಟಿಯ ಮಹಾಲಿಂಗಯ್ಯ ಗಾಯಗೊಂಡಿದ್ದಾರೆ.</p>.<p>ದೊಡ್ಡಗುಣಿ ಸಮೀಪ ನಡೆಯುತ್ತಿರುವ ಎತ್ತಿನಹೊಳೆ ನಾಲೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಾಗಿದ್ದರೂ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಅಗತ್ಯ ಕ್ರಮ ಕೈಗೊಳ್ಳದೆ ಇರುವುದರಿಂದ ಹೆದ್ದಾರಿ ಗುಂಡಿ ಬಿದ್ದು ಹಾಳಾಗಿದೆ.</p>.<p>ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಸಂಬಂಧಿಸಿದವರು ಯಾವುದೇ ಕ್ರಮ ಕೈಗೊಂಡಿಲ್ಲ. ಜೊತೆಗೆ ಅಗತ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸದೆ ಇರುವುದರಿಂದ ಪದೇ ಪದೇ ಈ ಪ್ರದೇಶಗಳಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-17-210203746</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>