<p><strong>ತುಮಕೂರು:</strong> ಅತ್ಯಂತ ವಾಸ್ತವದ ನೆಲೆಯಲ್ಲಿ ‘ನೊಳಂಬ ಲಿಂಗಾಯತರು’ ಕೃತಿ ರಚಿಸಲಾಗಿದೆ. ಇದು ಸಮುದಾಯದ ಸಮಗ್ರ ಅಧ್ಯಯನವಾಗಿದೆ ಎಂದು ಶರಣತತ್ವ ಚಿಂತಕ ಬಸವರಾಜಪ್ಪ ವೆಂಕಟಾಪುರ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶನಿವಾರ ಬಸವ ಕೇಂದ್ರ, ಜಯದೇವ ವಿದ್ಯಾರ್ಥಿ ನಿಲಯ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶರಣ ಸಂಗಮ ಕಾರ್ಯಕ್ರಮದಲ್ಲಿ ಇತಿಹಾಸಕಾರ ಡಿ.ಎನ್.ಯೋಗೀಶ್ವರಪ್ಪ ರಚನೆಯ ‘ನೊಳಂಬ ಲಿಂಗಾಯತರು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>ಈ ಕೃತಿ ನೊಳಂಬ ಲಿಂಗಾಯತರ ಸಾಂಸ್ಕೃತಿಕ ಬದುಕಿನ ಸೂಕ್ಷ್ಮ ಆಯಾಮಗಳನ್ನು ಚರ್ಚಿಸುತ್ತದೆ ಎಂದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ‘ನೊಳಂಬ ಲಿಂಗಾಯತರು ಗುರು ಸಿದ್ಧರಾಮೇಶ್ವರರ ಆರಾಧಕರು. ಪ್ರತಿ ವರ್ಷ ಸಿದ್ಧರಾಮೇಶ್ವರರ ಜಯಂತಿ ಆಚರಿಸುವ ಮೂಲಕ ಸಮಾಜವನ್ನು ಸಂಘಟಿಸಲಾಗುತ್ತಿದೆ. ನೊಳಂಬ ಲಿಂಗಾಯತ ಸಂಘ ಸ್ಥಾಪಿಸಿ ಜನಮುಖಿ, ಸಾಮಾಜಿಕ ಕಾರ್ಯ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಕೃತಿಕಾರ ಡಿ.ಎನ್.ಯೋಗೀಶ್ವರಪ್ಪ, ‘ಲಿಂಗಾಯತರಲ್ಲಿ 98 ಒಳ ಪಂಗಡಗಳಿದ್ದು, ನೊಳಂಬ ಲಿಂಗಾಯತರು ಎಂಟು ಜಿಲ್ಲೆಗಳಲ್ಲಿ ಗಣನೀಯವಾಗಿ ನೆಲೆಸಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಸಮುದಾಯದ ಸಂಸ್ಕೃತಿ ಅಳಿಸಿ ಹೋಗುತ್ತಿದೆ. ಆ ಸಂಸ್ಕೃತಿ ದಾಖಲಿಸುವ ಉದ್ದೇಶದಿಂದ ಕೃತಿ ರಚಿಸಲಾಗಿದೆ’ ಎಂದು ಹೇಳಿದರು.</p>.<p>ಲೇಖಕಿ ಸುಶೀಲಾ ಸದಾಶಿವಯ್ಯ, ಪ್ರಾಧ್ಯಾಪಕ ಎಂ.ಗೋವಿಂದರಾಯ ಮಾತನಾಡಿದರು. ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ.ನಾಗಭೂಷಣ್, ಹರಿಕಥಾ ವಿದ್ವಾನ್ ಲಕ್ಷ್ಮಣದಾಸ್, ಪ್ರಕಾಶಕ ಸತೀಶ್ ಹೆಬ್ಬಾಕ, ಬಸವ ಕೇಂದ್ರದ ಅಧ್ಯಕ್ಷೆ ಸಿದ್ಧಗಂಗಮ್ಮ ಬಿ.ಸಿದ್ಧರಾಮಣ್ಣ, ಪದಾಧಿಕಾರಿಗಳಾದ ಚಂದ್ರಶೇಖರ್, ಕಲ್ಪನಾ ಉಮೇಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಅತ್ಯಂತ ವಾಸ್ತವದ ನೆಲೆಯಲ್ಲಿ ‘ನೊಳಂಬ ಲಿಂಗಾಯತರು’ ಕೃತಿ ರಚಿಸಲಾಗಿದೆ. ಇದು ಸಮುದಾಯದ ಸಮಗ್ರ ಅಧ್ಯಯನವಾಗಿದೆ ಎಂದು ಶರಣತತ್ವ ಚಿಂತಕ ಬಸವರಾಜಪ್ಪ ವೆಂಕಟಾಪುರ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶನಿವಾರ ಬಸವ ಕೇಂದ್ರ, ಜಯದೇವ ವಿದ್ಯಾರ್ಥಿ ನಿಲಯ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶರಣ ಸಂಗಮ ಕಾರ್ಯಕ್ರಮದಲ್ಲಿ ಇತಿಹಾಸಕಾರ ಡಿ.ಎನ್.ಯೋಗೀಶ್ವರಪ್ಪ ರಚನೆಯ ‘ನೊಳಂಬ ಲಿಂಗಾಯತರು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>ಈ ಕೃತಿ ನೊಳಂಬ ಲಿಂಗಾಯತರ ಸಾಂಸ್ಕೃತಿಕ ಬದುಕಿನ ಸೂಕ್ಷ್ಮ ಆಯಾಮಗಳನ್ನು ಚರ್ಚಿಸುತ್ತದೆ ಎಂದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ‘ನೊಳಂಬ ಲಿಂಗಾಯತರು ಗುರು ಸಿದ್ಧರಾಮೇಶ್ವರರ ಆರಾಧಕರು. ಪ್ರತಿ ವರ್ಷ ಸಿದ್ಧರಾಮೇಶ್ವರರ ಜಯಂತಿ ಆಚರಿಸುವ ಮೂಲಕ ಸಮಾಜವನ್ನು ಸಂಘಟಿಸಲಾಗುತ್ತಿದೆ. ನೊಳಂಬ ಲಿಂಗಾಯತ ಸಂಘ ಸ್ಥಾಪಿಸಿ ಜನಮುಖಿ, ಸಾಮಾಜಿಕ ಕಾರ್ಯ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಕೃತಿಕಾರ ಡಿ.ಎನ್.ಯೋಗೀಶ್ವರಪ್ಪ, ‘ಲಿಂಗಾಯತರಲ್ಲಿ 98 ಒಳ ಪಂಗಡಗಳಿದ್ದು, ನೊಳಂಬ ಲಿಂಗಾಯತರು ಎಂಟು ಜಿಲ್ಲೆಗಳಲ್ಲಿ ಗಣನೀಯವಾಗಿ ನೆಲೆಸಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಸಮುದಾಯದ ಸಂಸ್ಕೃತಿ ಅಳಿಸಿ ಹೋಗುತ್ತಿದೆ. ಆ ಸಂಸ್ಕೃತಿ ದಾಖಲಿಸುವ ಉದ್ದೇಶದಿಂದ ಕೃತಿ ರಚಿಸಲಾಗಿದೆ’ ಎಂದು ಹೇಳಿದರು.</p>.<p>ಲೇಖಕಿ ಸುಶೀಲಾ ಸದಾಶಿವಯ್ಯ, ಪ್ರಾಧ್ಯಾಪಕ ಎಂ.ಗೋವಿಂದರಾಯ ಮಾತನಾಡಿದರು. ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ.ನಾಗಭೂಷಣ್, ಹರಿಕಥಾ ವಿದ್ವಾನ್ ಲಕ್ಷ್ಮಣದಾಸ್, ಪ್ರಕಾಶಕ ಸತೀಶ್ ಹೆಬ್ಬಾಕ, ಬಸವ ಕೇಂದ್ರದ ಅಧ್ಯಕ್ಷೆ ಸಿದ್ಧಗಂಗಮ್ಮ ಬಿ.ಸಿದ್ಧರಾಮಣ್ಣ, ಪದಾಧಿಕಾರಿಗಳಾದ ಚಂದ್ರಶೇಖರ್, ಕಲ್ಪನಾ ಉಮೇಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>