<p><strong>ತುಮಕೂರು</strong>: ಆನ್ಲೈನ್ನಲ್ಲಿ ಪಾರ್ಟ್ಟೈಮ್ ಕೆಲಸದ ಆಮಿಷಕ್ಕೆ ಒಳಗಾಗಿ ತಿಪಟೂರು ತಾಲ್ಲೂಕು ಮಾದಿಹಳ್ಳಿಯ ಶಿವಕಿರಣ್ ಕುಮಾರ್ ಎಂಬುವರು ₹6.36 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಟೆಲಿಗ್ರಾಮ್ ಮೂಲಕ ಪರಿಚಯವಾದ ಆರೋಪಿಗಳು ಗೂಗಲ್ನಲ್ಲಿ ರಿವ್ಯೂ ನೀಡುತ್ತಾ, ಹೆಚ್ಚಿನ ಹಣ ಸಂಪಾದಿಸಬಹುದು ಎಂದು ತಿಳಿಸಿದ್ದಾರೆ. ಮೊದಲಿಗೆ ₹1 ಸಾವಿರ ಪಾವತಿಸಬೇಕು ಎಂದಿದ್ದಾರೆ. ಶಿವಕಿರಣ್ ಅದರಂತೆ ಮಾಡಿದ್ದಾರೆ. ನಂತರ ₹2 ಸಾವಿರ ಪಾವತಿಸಿದ್ದು, ಅವರ ಖಾತೆಗೆ ₹4,110 ವರ್ಗಾಯಿಸಿದ್ದಾರೆ.</p>.<p>ಇದೇ ರೀತಿ ಹೆಚ್ಚಿನ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಗಳಿಸಬಹುದು ಎಂದು ಹೇಳಿದ್ದಾರೆ. ಇದನ್ನು ನಂಬಿ ₹50 ಸಾವಿರ ವರ್ಗಾವಣೆ ಮಾಡಿದ್ದಾರೆ. ಇದಾದ ಬಳಿಕ ನಿಮ್ಮ ಖಾತೆ ಫ್ರೀಜ್ ಆಗಿದ್ದು, ₹1 ಲಕ್ಷ ವರ್ಗಾಯಿಸಿದರೆ ಅನ್ಫ್ರೀಜ್ ಮಾಡಲಾಗುವುದು ಎಂದಿದ್ದಾರೆ. ಶಿವಕಿರಣ್ ಆರೋಪಿಗಳು ತಿಳಿಸಿದ ಬ್ಯಾಂಕ್ ಖಾತೆಗೆ ಹಣ ಹಾಕಿದ್ದಾರೆ.</p>.<p>ಜಿಎಸ್ಟಿ, ತೆರಿಗೆ ಎಂದು ನಾನಾ ಕಾರಣ ಹೇಳಿ ₹6,50,380 ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಇದರಲ್ಲಿ ಶಿವಕಿರಣ್ಗೆ ₹14,110 ವಾಪಸ್ ಹಾಕಿದ್ದಾರೆ. ವಂಚನೆ ಮಾಡಿದ ಆರೋಪಿಗಳ ವಿರುದ್ಧ ಕ್ರಮಕೈಗೊಂಡು ಹಣ ವಾಪಸ್ ಕೊಡಿಸುವಂತೆ ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಆನ್ಲೈನ್ನಲ್ಲಿ ಪಾರ್ಟ್ಟೈಮ್ ಕೆಲಸದ ಆಮಿಷಕ್ಕೆ ಒಳಗಾಗಿ ತಿಪಟೂರು ತಾಲ್ಲೂಕು ಮಾದಿಹಳ್ಳಿಯ ಶಿವಕಿರಣ್ ಕುಮಾರ್ ಎಂಬುವರು ₹6.36 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಟೆಲಿಗ್ರಾಮ್ ಮೂಲಕ ಪರಿಚಯವಾದ ಆರೋಪಿಗಳು ಗೂಗಲ್ನಲ್ಲಿ ರಿವ್ಯೂ ನೀಡುತ್ತಾ, ಹೆಚ್ಚಿನ ಹಣ ಸಂಪಾದಿಸಬಹುದು ಎಂದು ತಿಳಿಸಿದ್ದಾರೆ. ಮೊದಲಿಗೆ ₹1 ಸಾವಿರ ಪಾವತಿಸಬೇಕು ಎಂದಿದ್ದಾರೆ. ಶಿವಕಿರಣ್ ಅದರಂತೆ ಮಾಡಿದ್ದಾರೆ. ನಂತರ ₹2 ಸಾವಿರ ಪಾವತಿಸಿದ್ದು, ಅವರ ಖಾತೆಗೆ ₹4,110 ವರ್ಗಾಯಿಸಿದ್ದಾರೆ.</p>.<p>ಇದೇ ರೀತಿ ಹೆಚ್ಚಿನ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಗಳಿಸಬಹುದು ಎಂದು ಹೇಳಿದ್ದಾರೆ. ಇದನ್ನು ನಂಬಿ ₹50 ಸಾವಿರ ವರ್ಗಾವಣೆ ಮಾಡಿದ್ದಾರೆ. ಇದಾದ ಬಳಿಕ ನಿಮ್ಮ ಖಾತೆ ಫ್ರೀಜ್ ಆಗಿದ್ದು, ₹1 ಲಕ್ಷ ವರ್ಗಾಯಿಸಿದರೆ ಅನ್ಫ್ರೀಜ್ ಮಾಡಲಾಗುವುದು ಎಂದಿದ್ದಾರೆ. ಶಿವಕಿರಣ್ ಆರೋಪಿಗಳು ತಿಳಿಸಿದ ಬ್ಯಾಂಕ್ ಖಾತೆಗೆ ಹಣ ಹಾಕಿದ್ದಾರೆ.</p>.<p>ಜಿಎಸ್ಟಿ, ತೆರಿಗೆ ಎಂದು ನಾನಾ ಕಾರಣ ಹೇಳಿ ₹6,50,380 ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಇದರಲ್ಲಿ ಶಿವಕಿರಣ್ಗೆ ₹14,110 ವಾಪಸ್ ಹಾಕಿದ್ದಾರೆ. ವಂಚನೆ ಮಾಡಿದ ಆರೋಪಿಗಳ ವಿರುದ್ಧ ಕ್ರಮಕೈಗೊಂಡು ಹಣ ವಾಪಸ್ ಕೊಡಿಸುವಂತೆ ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>