<p><strong>ತುಮಕೂರು</strong>: ಪಾರ್ಟ್ಟೈಮ್ ಕೆಲಸದ ಆಮಿಷಕ್ಕೆ ಒಳಗಾಗಿ ನಗರದ ಎಸ್ಐಟಿ ಬಡಾವಣೆಯ ವೈದ್ಯೆ ಜಿ.ಯು.ಲಕ್ಷ್ಮಿನಾಗವಣಿ ಎಂಬುವರು ₹4 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಟೆಲಿಗ್ರಾಮ್ ಮೂಲಕ ಸಂಪರ್ಕಿಸಿದ ಆರೋಪಿಗಳುಕೆಲಸದ ಬಗ್ಗೆ ಮಾಹಿತಿ ನೀಡಿದ್ದಾರೆ. ಕೆಲ ಪ್ರಶ್ನೆಗಳಿಗೆ ಉತ್ತರ ನೀಡಿದರೆ ಹಣ ಕೊಡುತ್ತೇವೆ ಎಂದಿದ್ದಾರೆ. ಲಕ್ಷ್ಮಿ ಮೊದಲಿಗೆ ₹800 ವರ್ಗಾಯಿಸಿದ್ದು, ಅವರ ಖಾತೆಗೆ ವಾಪಸ್ ₹1,040 ಜಮಾ ಮಾಡಿದ್ದಾರೆ. ಬಳಿಕ ₹1,050 ವರ್ಗಾವಣೆ ಮಾಡಿದ್ದು, ₹2 ಸಾವಿರ ಹಿಂದಿರುಗಿಸಿದ್ದಾರೆ.</p>.<p>ಇದೇ ರೀತಿಯಾಗಿ ಹೆಚ್ಚಿನ ಹಣ ಹೂಡಿಕೆ ಮಾಡಿ, ನಾವು ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದರೆ ದುಪ್ಪಟ್ಟು ಹಣ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನು ನಂಬಿ ವಿವಿಧ ಖಾತೆಗಳಿಗೆ ಹಂತ ಹಂತವಾಗಿ ₹4,01,500 ವರ್ಗಾಯಿಸಿದ್ದಾರೆ. ನಂತರ 3 ಟಾಸ್ಕ್ ಪೂರ್ಣಗೊಳಿಸಿದರೆ ಹಣ ವಾಪಸ್ ನೀಡಲಾಗುವುದು ಎಂದಿದ್ದಾರೆ. 2 ಟಾಸ್ಕ್ ತಪ್ಪು ಮಾಡಿದ್ದು, ಇನ್ನೂ ಹೆಚ್ಚಿನ ಹಣ ವರ್ಗಾವಣೆ ಮಾಡುವಂತೆ ತಿಳಿಸಿದ್ದಾರೆ.</p>.<p>ಲಕ್ಷ್ಮಿನಾಗವಣಿ ಇದರಿಂದ ಅನುಮಾನಗೊಂಡು ಹೊಸ ಬಡಾವಣೆ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಂಡು, ಹಣ ವಾಪಸ್ ಕೊಡಿಸುವಂತೆ ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-18-747673699</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಪಾರ್ಟ್ಟೈಮ್ ಕೆಲಸದ ಆಮಿಷಕ್ಕೆ ಒಳಗಾಗಿ ನಗರದ ಎಸ್ಐಟಿ ಬಡಾವಣೆಯ ವೈದ್ಯೆ ಜಿ.ಯು.ಲಕ್ಷ್ಮಿನಾಗವಣಿ ಎಂಬುವರು ₹4 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಟೆಲಿಗ್ರಾಮ್ ಮೂಲಕ ಸಂಪರ್ಕಿಸಿದ ಆರೋಪಿಗಳುಕೆಲಸದ ಬಗ್ಗೆ ಮಾಹಿತಿ ನೀಡಿದ್ದಾರೆ. ಕೆಲ ಪ್ರಶ್ನೆಗಳಿಗೆ ಉತ್ತರ ನೀಡಿದರೆ ಹಣ ಕೊಡುತ್ತೇವೆ ಎಂದಿದ್ದಾರೆ. ಲಕ್ಷ್ಮಿ ಮೊದಲಿಗೆ ₹800 ವರ್ಗಾಯಿಸಿದ್ದು, ಅವರ ಖಾತೆಗೆ ವಾಪಸ್ ₹1,040 ಜಮಾ ಮಾಡಿದ್ದಾರೆ. ಬಳಿಕ ₹1,050 ವರ್ಗಾವಣೆ ಮಾಡಿದ್ದು, ₹2 ಸಾವಿರ ಹಿಂದಿರುಗಿಸಿದ್ದಾರೆ.</p>.<p>ಇದೇ ರೀತಿಯಾಗಿ ಹೆಚ್ಚಿನ ಹಣ ಹೂಡಿಕೆ ಮಾಡಿ, ನಾವು ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದರೆ ದುಪ್ಪಟ್ಟು ಹಣ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನು ನಂಬಿ ವಿವಿಧ ಖಾತೆಗಳಿಗೆ ಹಂತ ಹಂತವಾಗಿ ₹4,01,500 ವರ್ಗಾಯಿಸಿದ್ದಾರೆ. ನಂತರ 3 ಟಾಸ್ಕ್ ಪೂರ್ಣಗೊಳಿಸಿದರೆ ಹಣ ವಾಪಸ್ ನೀಡಲಾಗುವುದು ಎಂದಿದ್ದಾರೆ. 2 ಟಾಸ್ಕ್ ತಪ್ಪು ಮಾಡಿದ್ದು, ಇನ್ನೂ ಹೆಚ್ಚಿನ ಹಣ ವರ್ಗಾವಣೆ ಮಾಡುವಂತೆ ತಿಳಿಸಿದ್ದಾರೆ.</p>.<p>ಲಕ್ಷ್ಮಿನಾಗವಣಿ ಇದರಿಂದ ಅನುಮಾನಗೊಂಡು ಹೊಸ ಬಡಾವಣೆ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಂಡು, ಹಣ ವಾಪಸ್ ಕೊಡಿಸುವಂತೆ ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-18-747673699</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>