<p>ಪಾವಗಡ: ಜಾನುವಾರುಗಳಿಗಾಗಿ ಗೋಶಾಲೆ, ಮೇವು ವಿತರಣಾ ಕೇಂದ್ರ ಶೀಘ್ರ ಆರಂಭಿಸಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ ತುಮಕೂರು ಜಿಲ್ಲಾ ಅಧ್ಯಕ್ಷ ಪೂಜಾರಪ್ಪ ಒತ್ತಾಯಿಸಿದರು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇನ್ನೂ ಜಾನುವಾರುಗಳಿಗೆ ಮೇವು, ನೀರಿನ ಅಭಾವ ಇದೆ. ಬೆಟ್ಟ-ಗುಡ್ಡಗಳು, ಆರಣ್ಯ ಪ್ರದೇಶಗಳಲ್ಲಿ ಪ್ರಾಣಿಗಳಿಗೆ ಆಹಾರ, ನೀರಿನ ಕೊರತೆಯಿದೆ. ಕಾಡು ಪ್ರಾಣಿಗಳು ಗ್ರಾಮಗಳತ್ತ ಆಹಾರಕ್ಕಾಗಿ ಬರುವ ಸಂಭವ ಹೆಚ್ಚಿದೆ ಎಂದರು.</p>.<p>ತಾಲ್ಲೂಕು ಆಡಳಿತ ಕೂಡಲೇ ನಾಲ್ಕೂ ಹೋಬಳಿಗಳಲ್ಲಿ ಗೋಶಾಲೆಗಳನ್ನು ಆರಂಭಿಸಬೇಕು. ಜಾನುವಾರುಗಳಿಗೆ ನೀರಿನ ತೊಟ್ಟಿಗಳನ್ನು ನಿರ್ಮಿಸಬೇಕು. ತುಂಗಾಭದ್ರ ಯೋಜನೆಯಡಿ ಪ್ರತಿ ಗ್ರಾಮಕ್ಕೂ ಕುಡಿಯುವ ನೀರನ್ನು ಪೂರೈಸಲು ಆದ್ಯತೆ ನೀಡಬೇಕು. ಪಶು ಇಲಾಖೆಯಿಂದ ಜಾನುವಾರುಗಳಿಗೆ ಮೇವು ಒದಗಿಸುವ ಕೆಲಸವಾಗಬೇಕು ಎಂದು ಒತ್ತಾಯಿಸಿದರು.</p>.<p>ತಹಶೀಲ್ದಾರ್ ವೈ.ರವಿ, ಪಶು ಇಲಾಖೆಯಿಂದ ಜಾನುವಾರುಗಳ ಮಾಹಿತಿ ನಾಲ್ಕೂ ದಿನಗಳಲ್ಲಿ ನೀಡಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಮಧುಸೂದನ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಬಸವಲಿಂಗಪ್ಪ, ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ, ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಬ್ಯಾಡನೂರು ಶಿವು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-17-1472075301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ಜಾನುವಾರುಗಳಿಗಾಗಿ ಗೋಶಾಲೆ, ಮೇವು ವಿತರಣಾ ಕೇಂದ್ರ ಶೀಘ್ರ ಆರಂಭಿಸಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ ತುಮಕೂರು ಜಿಲ್ಲಾ ಅಧ್ಯಕ್ಷ ಪೂಜಾರಪ್ಪ ಒತ್ತಾಯಿಸಿದರು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇನ್ನೂ ಜಾನುವಾರುಗಳಿಗೆ ಮೇವು, ನೀರಿನ ಅಭಾವ ಇದೆ. ಬೆಟ್ಟ-ಗುಡ್ಡಗಳು, ಆರಣ್ಯ ಪ್ರದೇಶಗಳಲ್ಲಿ ಪ್ರಾಣಿಗಳಿಗೆ ಆಹಾರ, ನೀರಿನ ಕೊರತೆಯಿದೆ. ಕಾಡು ಪ್ರಾಣಿಗಳು ಗ್ರಾಮಗಳತ್ತ ಆಹಾರಕ್ಕಾಗಿ ಬರುವ ಸಂಭವ ಹೆಚ್ಚಿದೆ ಎಂದರು.</p>.<p>ತಾಲ್ಲೂಕು ಆಡಳಿತ ಕೂಡಲೇ ನಾಲ್ಕೂ ಹೋಬಳಿಗಳಲ್ಲಿ ಗೋಶಾಲೆಗಳನ್ನು ಆರಂಭಿಸಬೇಕು. ಜಾನುವಾರುಗಳಿಗೆ ನೀರಿನ ತೊಟ್ಟಿಗಳನ್ನು ನಿರ್ಮಿಸಬೇಕು. ತುಂಗಾಭದ್ರ ಯೋಜನೆಯಡಿ ಪ್ರತಿ ಗ್ರಾಮಕ್ಕೂ ಕುಡಿಯುವ ನೀರನ್ನು ಪೂರೈಸಲು ಆದ್ಯತೆ ನೀಡಬೇಕು. ಪಶು ಇಲಾಖೆಯಿಂದ ಜಾನುವಾರುಗಳಿಗೆ ಮೇವು ಒದಗಿಸುವ ಕೆಲಸವಾಗಬೇಕು ಎಂದು ಒತ್ತಾಯಿಸಿದರು.</p>.<p>ತಹಶೀಲ್ದಾರ್ ವೈ.ರವಿ, ಪಶು ಇಲಾಖೆಯಿಂದ ಜಾನುವಾರುಗಳ ಮಾಹಿತಿ ನಾಲ್ಕೂ ದಿನಗಳಲ್ಲಿ ನೀಡಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಮಧುಸೂದನ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಬಸವಲಿಂಗಪ್ಪ, ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ, ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಬ್ಯಾಡನೂರು ಶಿವು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-17-1472075301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>