<p><strong>ತುಮಕೂರು:</strong> ಮಧುಗಿರಿ ತಾಲ್ಲೂಕಿನ ಹನುಮಂತಪುರದಲ್ಲಿ 20ಕ್ಕೂ ಹೆಚ್ಚು ನವಿಲುಗಳು ಅನುಮಾನಾಸ್ಪದವಾಗಿ ಮೃತಪಟ್ಟ ಬಗ್ಗೆ ವರದಿ ಸಲ್ಲಿಕೆಯಾಗಿದೆ. ವರದಿ ಅಧ್ಯಯನ ಮಾಡಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿರೋಧ ಪಕ್ಷದವರಿಗೆ ಬರೀ ನಾಟಕ ಮಾಡುವುದು, ಸುಳ್ಳು ಹೇಳುವುದೇ ಕೆಲಸವಾಗಿದೆ. ಯಾವುದೇ ವಿಚಾರ ಇಲ್ಲದೆ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.</p>.<p>ಧರ್ಮಸ್ಥಳದಲ್ಲಿ ಬಿಜೆಪಿ–ಜೆಡಿಎಸ್ ಹಮ್ಮಿಕೊಂಡಿರುವ ಸಮಾರಂಭದ ಕುರಿತು ಪ್ರತಿಕ್ರಿಯಿಸಿ, ಜಾತಿ, ಧರ್ಮಗಳ ಮಧ್ಯೆ ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ಭಾವನಾತ್ಮಕವಾಗಿ ಜನರನ್ನು ಕೆರಳಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಮಧುಗಿರಿ ತಾಲ್ಲೂಕಿನ ಹನುಮಂತಪುರದಲ್ಲಿ 20ಕ್ಕೂ ಹೆಚ್ಚು ನವಿಲುಗಳು ಅನುಮಾನಾಸ್ಪದವಾಗಿ ಮೃತಪಟ್ಟ ಬಗ್ಗೆ ವರದಿ ಸಲ್ಲಿಕೆಯಾಗಿದೆ. ವರದಿ ಅಧ್ಯಯನ ಮಾಡಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿರೋಧ ಪಕ್ಷದವರಿಗೆ ಬರೀ ನಾಟಕ ಮಾಡುವುದು, ಸುಳ್ಳು ಹೇಳುವುದೇ ಕೆಲಸವಾಗಿದೆ. ಯಾವುದೇ ವಿಚಾರ ಇಲ್ಲದೆ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.</p>.<p>ಧರ್ಮಸ್ಥಳದಲ್ಲಿ ಬಿಜೆಪಿ–ಜೆಡಿಎಸ್ ಹಮ್ಮಿಕೊಂಡಿರುವ ಸಮಾರಂಭದ ಕುರಿತು ಪ್ರತಿಕ್ರಿಯಿಸಿ, ಜಾತಿ, ಧರ್ಮಗಳ ಮಧ್ಯೆ ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ಭಾವನಾತ್ಮಕವಾಗಿ ಜನರನ್ನು ಕೆರಳಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>