<p>ತುಮಕೂರು: ಮೈಕ್ರೊ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ವಿಷ ಮನುಷ್ಯನ ದೇಹ ಸೇರುತ್ತಿದೆ. ಕ್ಯಾನ್ಸರ್ನಂತಹ ಮಾರಕ ರೋಗಕ್ಕೆ ಜನ ತುತ್ತಾಗುತ್ತಿದ್ದಾರೆ ಎಂದು ಜೆಸಿಐ ವಲಯ 14ರ ಅಧ್ಯಕ್ಷ ಪ್ರಜ್ವಲ್ ಎಸ್.ಜೈನ್ ಆತಂಕ ವ್ಯಕ್ತಪಡಿಸಿದರು.</p>.<p>ನಗರದ ಟೌನ್ಹಾಲ್ನಲ್ಲಿ ಶನಿವಾರ ಜೆಸಿಐ ತುಮಕೂರು ಮೆಟ್ರೊ ವತಿಯಿಂದ ಪ್ಲಾಸ್ಟಿಕ್ ಮುಕ್ತ ದೇಶ ಅಭಿಯಾನದಡಿ ಆಟೊ ಚಾಲಕರು, ಸಾರ್ವಜನಿಕರಿಗೆ ನೀರಿನ ಸ್ಟೀಲ್ ಬಾಟಲಿ ವಿತರಿಸಿ ಮಾತನಾಡಿದರು.</p>.<p>‘ಮನುಷ್ಯ ತನಗೆ ಅರಿವಿಲ್ಲದೆ ಪ್ರತಿ ನಿತ್ಯ ಹಾನಿಕಾರಕ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾನೆ. ಇದನ್ನು ತಪ್ಪಿಸುವ ಉದ್ದೇಶದಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಯುವ ಜನರಲ್ಲಿ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ. ಇದಕ್ಕಾಗಿ ಪ್ಲಾಸ್ಟಿಕ್ ಮುಕ್ತ ಭಾರತ ಅಭಿಯಾನ ಕೈಗೊಳ್ಳಲಾಗಿದೆ’ ಎಂದರು.</p>.<p>ಯುವ ಜನರನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮೇಲೆ ತರಲು ಅಗತ್ಯ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ. ಅವರಲ್ಲಿ ನಾಯಕತ್ವದ ಗುಣ ಬೆಳೆಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷ ಜಿತೇಶ್ ಅದ್ವಾನಿ, ಜೆಸಿಐ ತುಮಕೂರು ಮೆಟ್ರೊ ಅಧ್ಯಕ್ಷೆ ಮಮತಾ ರಾಜ್, ಪದಾಧಿಕಾರಿಗಳಾದ ಬೆಳ್ಳಿ ಲೋಕೇಶ್, ಸುನಿತ್ ರಾಜ್, ಶ್ರೀನಿವಾಸಮೂರ್ತಿ, ಉಮಾಮಹೇಶ್, ಸಂಜಯ್, ಅನು, ನಾಗೇಂದ್ರನಾಥ್, ನಾಗಭೂಷಣ್, ವೇಣುಗೋಪಾಲ್, ನಟರಾಜಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-17-1350992456</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಮೈಕ್ರೊ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ವಿಷ ಮನುಷ್ಯನ ದೇಹ ಸೇರುತ್ತಿದೆ. ಕ್ಯಾನ್ಸರ್ನಂತಹ ಮಾರಕ ರೋಗಕ್ಕೆ ಜನ ತುತ್ತಾಗುತ್ತಿದ್ದಾರೆ ಎಂದು ಜೆಸಿಐ ವಲಯ 14ರ ಅಧ್ಯಕ್ಷ ಪ್ರಜ್ವಲ್ ಎಸ್.ಜೈನ್ ಆತಂಕ ವ್ಯಕ್ತಪಡಿಸಿದರು.</p>.<p>ನಗರದ ಟೌನ್ಹಾಲ್ನಲ್ಲಿ ಶನಿವಾರ ಜೆಸಿಐ ತುಮಕೂರು ಮೆಟ್ರೊ ವತಿಯಿಂದ ಪ್ಲಾಸ್ಟಿಕ್ ಮುಕ್ತ ದೇಶ ಅಭಿಯಾನದಡಿ ಆಟೊ ಚಾಲಕರು, ಸಾರ್ವಜನಿಕರಿಗೆ ನೀರಿನ ಸ್ಟೀಲ್ ಬಾಟಲಿ ವಿತರಿಸಿ ಮಾತನಾಡಿದರು.</p>.<p>‘ಮನುಷ್ಯ ತನಗೆ ಅರಿವಿಲ್ಲದೆ ಪ್ರತಿ ನಿತ್ಯ ಹಾನಿಕಾರಕ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾನೆ. ಇದನ್ನು ತಪ್ಪಿಸುವ ಉದ್ದೇಶದಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಯುವ ಜನರಲ್ಲಿ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ. ಇದಕ್ಕಾಗಿ ಪ್ಲಾಸ್ಟಿಕ್ ಮುಕ್ತ ಭಾರತ ಅಭಿಯಾನ ಕೈಗೊಳ್ಳಲಾಗಿದೆ’ ಎಂದರು.</p>.<p>ಯುವ ಜನರನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮೇಲೆ ತರಲು ಅಗತ್ಯ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ. ಅವರಲ್ಲಿ ನಾಯಕತ್ವದ ಗುಣ ಬೆಳೆಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷ ಜಿತೇಶ್ ಅದ್ವಾನಿ, ಜೆಸಿಐ ತುಮಕೂರು ಮೆಟ್ರೊ ಅಧ್ಯಕ್ಷೆ ಮಮತಾ ರಾಜ್, ಪದಾಧಿಕಾರಿಗಳಾದ ಬೆಳ್ಳಿ ಲೋಕೇಶ್, ಸುನಿತ್ ರಾಜ್, ಶ್ರೀನಿವಾಸಮೂರ್ತಿ, ಉಮಾಮಹೇಶ್, ಸಂಜಯ್, ಅನು, ನಾಗೇಂದ್ರನಾಥ್, ನಾಗಭೂಷಣ್, ವೇಣುಗೋಪಾಲ್, ನಟರಾಜಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-17-1350992456</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>