<p><strong>ಹುಳಿಯಾರು</strong>: ಹೋಬಳಿಯ ದಸೂಡಿ-ಸೋಮನಹಳ್ಳಿ ರಸ್ತೆಯಿಂದ ನುಲೇನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಒಂದೇ ವರ್ಷದಲ್ಲಿ ಹಾಳಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ದಸೂಡಿ ರಸ್ತೆಯ ರಂಗನಗುಡ್ಡಕ್ಕೆ ಹೊಂದಿಕೊಂಡಿರುವ ಕಟ್ಟೆಯಿಂದ ನುಲೇನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಿದೆ. ಈ ರಸ್ತೆಯನ್ನು ವರ್ಷದ ಹಿಂದೆ ಜಲ್ಲಿಯಿಂದ ಕಾಮಗಾರಿ ಮಾಡಲಾಗಿದೆ. ಸಂಪರ್ಕ ಕಲ್ಪಿಸುವ ರಸ್ತೆ ಸುಮಾರು ಒಂದು ಕಿ.ಮೀ ದೂರವಿದ್ದರೂ ಅದರಲ್ಲಿ 200 ಮೀಟರ್ನಷ್ಟು ರಸ್ತೆ ಕಾಮಗಾರಿ ಮಾತ್ರ ಮಾಡಲಾಗಿದೆ. ರಸ್ತೆಗೆ ಜಲ್ಲಿ ಹಾಕಿ ಕಡಿಮೆ ಪ್ರಮಾಣದಲ್ಲಿ ಮಣ್ಣು ಹಾಕಿ ಹಾಗೆಯೇ ಬಿಟ್ಟಿದ್ದಾರೆ.</p>.<p>ಜೆಲ್ಲಿ ಹಾಗೂ ಮಣ್ಣಿನ ಮೇಲೆ ರೋಲ್ ಮಾಡದಿರುವ ಕಾರಣ ಜಲ್ಲಿ ಎದ್ದು ಹೋಗಿದೆ. ಜಲ್ಲೆ ರಸ್ತೆಯ ಮೇಲೆ ಚಲ್ಲಾಡಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ವಾಹನ ಸವಾರರು ದೂರುತ್ತಾರೆ. </p>.<p>ಕಳಪೆ ಗುಣಮಟ್ಟದ ಕಾಮಗಾರಿಯಾಗಿದ್ದು, ಸಂಬಂಧಪಟ್ಟವರು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಜರುಗಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು</strong>: ಹೋಬಳಿಯ ದಸೂಡಿ-ಸೋಮನಹಳ್ಳಿ ರಸ್ತೆಯಿಂದ ನುಲೇನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಒಂದೇ ವರ್ಷದಲ್ಲಿ ಹಾಳಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ದಸೂಡಿ ರಸ್ತೆಯ ರಂಗನಗುಡ್ಡಕ್ಕೆ ಹೊಂದಿಕೊಂಡಿರುವ ಕಟ್ಟೆಯಿಂದ ನುಲೇನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಿದೆ. ಈ ರಸ್ತೆಯನ್ನು ವರ್ಷದ ಹಿಂದೆ ಜಲ್ಲಿಯಿಂದ ಕಾಮಗಾರಿ ಮಾಡಲಾಗಿದೆ. ಸಂಪರ್ಕ ಕಲ್ಪಿಸುವ ರಸ್ತೆ ಸುಮಾರು ಒಂದು ಕಿ.ಮೀ ದೂರವಿದ್ದರೂ ಅದರಲ್ಲಿ 200 ಮೀಟರ್ನಷ್ಟು ರಸ್ತೆ ಕಾಮಗಾರಿ ಮಾತ್ರ ಮಾಡಲಾಗಿದೆ. ರಸ್ತೆಗೆ ಜಲ್ಲಿ ಹಾಕಿ ಕಡಿಮೆ ಪ್ರಮಾಣದಲ್ಲಿ ಮಣ್ಣು ಹಾಕಿ ಹಾಗೆಯೇ ಬಿಟ್ಟಿದ್ದಾರೆ.</p>.<p>ಜೆಲ್ಲಿ ಹಾಗೂ ಮಣ್ಣಿನ ಮೇಲೆ ರೋಲ್ ಮಾಡದಿರುವ ಕಾರಣ ಜಲ್ಲಿ ಎದ್ದು ಹೋಗಿದೆ. ಜಲ್ಲೆ ರಸ್ತೆಯ ಮೇಲೆ ಚಲ್ಲಾಡಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ವಾಹನ ಸವಾರರು ದೂರುತ್ತಾರೆ. </p>.<p>ಕಳಪೆ ಗುಣಮಟ್ಟದ ಕಾಮಗಾರಿಯಾಗಿದ್ದು, ಸಂಬಂಧಪಟ್ಟವರು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಜರುಗಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>