<p><strong>ತುಮಕೂರು:</strong> ಡಾ.ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ ಮತ್ತು ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಡಾ.ಜಯರಾಮ್ ಸ್ಮರಣಾರ್ಥ ರಾಜ್ಯ ಮಟ್ಟದ ಹೊನಲು ಬೆಳಕಿನ ‘ಪುನೀತ್ ರಾಜ್ ಕಪ್’ ಕ್ರಿಕೆಟ್ ಪಂದ್ಯಾವಳಿ ನಗರದಲ್ಲಿ ಡಿಸೆಂಬರ್ 25ರಿಂದ 28ರ ವರೆಗೆ ನಡೆಯಲಿದೆ.</p>.<p>ನಗರದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕ್ರಿಕೆಟ್ ಪಂದ್ಯಾವಳಿಯ ಪೋಸ್ಟರ್ಅನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ಬಿಡುಗಡೆ ಮಾಡಿದರು. ವರನಟ ಡಾ.ರಾಜ್ ಕುಮಾರ್ ಕುಟುಂಬದ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಪಂದ್ಯಾವಳಿ ನಡೆಯುತ್ತಿರುವುದು ಸಂತಸದ ವಿಚಾರ ಎಂದರು.</p>.<p>ವಿಜಯ ಸೇನೆ ಅಧ್ಯಕ್ಷ ಎಚ್.ಎನ್.ದೀಪಕ್, ‘ಪ್ರತಿ ವರ್ಷವೂ ಯಾವುದಾದರೂ ಒಂದು ಕಾರ್ಯಕ್ರಮ ಆಯೋಜನೆ ಮಾಡಿಕೊಂಡು ಬರುತ್ತಿದ್ದೇವೆ. ಅದರಲ್ಲಿ ಕ್ರಿಕೆಟ್ಗೆ ಒತ್ತು ಕೊಡುತ್ತಿದ್ದೇವೆ’ ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ, ‘ಈ ಬಾರಿಯ ಪಂದ್ಯಾವಳಿಗೆ 14 ತಂಡಗಳು ಬರುತ್ತಿವೆ. ಮೊದಲ ಬಹುಮಾನ ₹5 ಲಕ್ಷ, ಎರಡನೇ ಬಹುಮಾನ ₹2.50 ಲಕ್ಷ, ಮೂರು, ನಾಲ್ಕನೇ ಬಹುಮಾನವಾಗಿ ತಲಾ ₹50 ಸಾವಿರ ನೀಡಲಾಗುತ್ತದೆ’ ಎಂದು ಮಾಹಿತಿ ಹಂಚಿಕೊಂಡರು.</p>.<p>ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ನ ಪ್ರಕಾಶ್ ಚಕ್ರವರ್ತಿ, ‘ನಾಲ್ಕು ದಿನ ನಡೆಯುವ ಪಂದ್ಯಾವಳಿಯನ್ನು ಸುಸಜ್ಜಿತವಾಗಿ ಆಯೋಜಿಸಲಾಗುತ್ತಿದೆ. ಟೀ ಶರ್ಟ್, ಊಟದ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.</p>.<p>ಪ್ರಮುಖರಾದ ಧನಿಯಾಕುಮಾರ್, ಶಂಕರ್, ರಂಜನ್, ಅರವಿಂದ್, ಚೇತನ್, ಹರೀಶ್, ಚಂದನ್, ಅಖಿಲೇಶ್, ಅರುಣ್ ಕೃಷ್ಣಯ್ಯ, ಅರವಿಂದ್ ಬಾಳಾರಾಧ್ಯ ಇತರರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಡಾ.ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ ಮತ್ತು ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಡಾ.ಜಯರಾಮ್ ಸ್ಮರಣಾರ್ಥ ರಾಜ್ಯ ಮಟ್ಟದ ಹೊನಲು ಬೆಳಕಿನ ‘ಪುನೀತ್ ರಾಜ್ ಕಪ್’ ಕ್ರಿಕೆಟ್ ಪಂದ್ಯಾವಳಿ ನಗರದಲ್ಲಿ ಡಿಸೆಂಬರ್ 25ರಿಂದ 28ರ ವರೆಗೆ ನಡೆಯಲಿದೆ.</p>.<p>ನಗರದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕ್ರಿಕೆಟ್ ಪಂದ್ಯಾವಳಿಯ ಪೋಸ್ಟರ್ಅನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ಬಿಡುಗಡೆ ಮಾಡಿದರು. ವರನಟ ಡಾ.ರಾಜ್ ಕುಮಾರ್ ಕುಟುಂಬದ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಪಂದ್ಯಾವಳಿ ನಡೆಯುತ್ತಿರುವುದು ಸಂತಸದ ವಿಚಾರ ಎಂದರು.</p>.<p>ವಿಜಯ ಸೇನೆ ಅಧ್ಯಕ್ಷ ಎಚ್.ಎನ್.ದೀಪಕ್, ‘ಪ್ರತಿ ವರ್ಷವೂ ಯಾವುದಾದರೂ ಒಂದು ಕಾರ್ಯಕ್ರಮ ಆಯೋಜನೆ ಮಾಡಿಕೊಂಡು ಬರುತ್ತಿದ್ದೇವೆ. ಅದರಲ್ಲಿ ಕ್ರಿಕೆಟ್ಗೆ ಒತ್ತು ಕೊಡುತ್ತಿದ್ದೇವೆ’ ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ, ‘ಈ ಬಾರಿಯ ಪಂದ್ಯಾವಳಿಗೆ 14 ತಂಡಗಳು ಬರುತ್ತಿವೆ. ಮೊದಲ ಬಹುಮಾನ ₹5 ಲಕ್ಷ, ಎರಡನೇ ಬಹುಮಾನ ₹2.50 ಲಕ್ಷ, ಮೂರು, ನಾಲ್ಕನೇ ಬಹುಮಾನವಾಗಿ ತಲಾ ₹50 ಸಾವಿರ ನೀಡಲಾಗುತ್ತದೆ’ ಎಂದು ಮಾಹಿತಿ ಹಂಚಿಕೊಂಡರು.</p>.<p>ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ನ ಪ್ರಕಾಶ್ ಚಕ್ರವರ್ತಿ, ‘ನಾಲ್ಕು ದಿನ ನಡೆಯುವ ಪಂದ್ಯಾವಳಿಯನ್ನು ಸುಸಜ್ಜಿತವಾಗಿ ಆಯೋಜಿಸಲಾಗುತ್ತಿದೆ. ಟೀ ಶರ್ಟ್, ಊಟದ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.</p>.<p>ಪ್ರಮುಖರಾದ ಧನಿಯಾಕುಮಾರ್, ಶಂಕರ್, ರಂಜನ್, ಅರವಿಂದ್, ಚೇತನ್, ಹರೀಶ್, ಚಂದನ್, ಅಖಿಲೇಶ್, ಅರುಣ್ ಕೃಷ್ಣಯ್ಯ, ಅರವಿಂದ್ ಬಾಳಾರಾಧ್ಯ ಇತರರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>