<p><strong>ತುಮಕೂರು</strong>: ಪೌರಾಣಿಕ ನಾಟಕಗಳು ಯುವ ಪೀಳಿಗೆಯಲ್ಲಿ ಧಾರ್ಮಿಕ ಚಿಂತನೆ ಮೂಡಿಸುವಲ್ಲಿ ಯಶಸ್ವಿಯಾಗುತ್ತಿವೆ ಎಂದು ಮುಖಂಡ ರಾಮಚಂದ್ರಯ್ಯ ಹೇಳಿದರು.</p>.<p>ತಾಲ್ಲೂಕಿನ ಗೂಳೂರು ಹೋಬಳಿ ಸಾಸಲು ಗ್ರಾಮದಲ್ಲಿ ಈಚೆಗೆ ಅಭಿನಯ ರಂಗ ಕೇಂದ್ರದಿಂದ ಆಯೋಜಿಸಿದ್ದ ‘ಕುರುಕ್ಷೇತ್ರ’ ನಾಟಕ ಪ್ರದರ್ಶನ, ರಂಗ ಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>ಪೌರಾಣಿಕ ನಾಟಕಗಳು ಗ್ರಾಮೀಣ ಭಾಗದಲ್ಲಿ ಹಬ್ಬದ ವಾತಾವರಣ ನಿರ್ಮಿಸುತ್ತವೆ. ಜನರನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿವೆ ಎಂದರು.</p>.<p>ಅಭಿನಯ ರಂಗ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ‘ಗ್ರಾಮೀಣ ಪ್ರದೇಶದ ಕಲಾವಿದರಿಗೆ ರಂಗ ತರಬೇತಿ ಶಿಬಿರ, ನಾಟಕ ಸ್ಪರ್ಧೆ ನಡೆಸಲಾಗುತ್ತಿದೆ. ಶಾಲಾ ಮಕ್ಕಳಿಗೆ ನಾಟಕದ ಮೂಲಕ ಹೆಚ್ಚಿನ ವಿಚಾರ ಕುರಿತು ತಿಳಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಕಲಾವಿದ ಎಸ್.ಜಿ.ನರಸಿಂಹಮೂರ್ತಿ ಅವರಿಗೆ ರಂಗ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖಂಡರಾದ ಬಿ.ಎಂ.ಗೋಪಾಲಯ್ಯ, ಲಕ್ಷ್ಮಿಕಾಂತ್, ಮುನಿರಾಜು, ರವಿಗೌಡ, ಸಿದ್ದೇಗೌಡ, ಕೆಂಪಯ್ಯ, ಪಿ.ಸಿ.ಜೈಕುಮಾರ್, ಬಸವರಾಜ್ ಐನಾಪುರ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-17-185991530</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಪೌರಾಣಿಕ ನಾಟಕಗಳು ಯುವ ಪೀಳಿಗೆಯಲ್ಲಿ ಧಾರ್ಮಿಕ ಚಿಂತನೆ ಮೂಡಿಸುವಲ್ಲಿ ಯಶಸ್ವಿಯಾಗುತ್ತಿವೆ ಎಂದು ಮುಖಂಡ ರಾಮಚಂದ್ರಯ್ಯ ಹೇಳಿದರು.</p>.<p>ತಾಲ್ಲೂಕಿನ ಗೂಳೂರು ಹೋಬಳಿ ಸಾಸಲು ಗ್ರಾಮದಲ್ಲಿ ಈಚೆಗೆ ಅಭಿನಯ ರಂಗ ಕೇಂದ್ರದಿಂದ ಆಯೋಜಿಸಿದ್ದ ‘ಕುರುಕ್ಷೇತ್ರ’ ನಾಟಕ ಪ್ರದರ್ಶನ, ರಂಗ ಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>ಪೌರಾಣಿಕ ನಾಟಕಗಳು ಗ್ರಾಮೀಣ ಭಾಗದಲ್ಲಿ ಹಬ್ಬದ ವಾತಾವರಣ ನಿರ್ಮಿಸುತ್ತವೆ. ಜನರನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿವೆ ಎಂದರು.</p>.<p>ಅಭಿನಯ ರಂಗ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ‘ಗ್ರಾಮೀಣ ಪ್ರದೇಶದ ಕಲಾವಿದರಿಗೆ ರಂಗ ತರಬೇತಿ ಶಿಬಿರ, ನಾಟಕ ಸ್ಪರ್ಧೆ ನಡೆಸಲಾಗುತ್ತಿದೆ. ಶಾಲಾ ಮಕ್ಕಳಿಗೆ ನಾಟಕದ ಮೂಲಕ ಹೆಚ್ಚಿನ ವಿಚಾರ ಕುರಿತು ತಿಳಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಕಲಾವಿದ ಎಸ್.ಜಿ.ನರಸಿಂಹಮೂರ್ತಿ ಅವರಿಗೆ ರಂಗ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖಂಡರಾದ ಬಿ.ಎಂ.ಗೋಪಾಲಯ್ಯ, ಲಕ್ಷ್ಮಿಕಾಂತ್, ಮುನಿರಾಜು, ರವಿಗೌಡ, ಸಿದ್ದೇಗೌಡ, ಕೆಂಪಯ್ಯ, ಪಿ.ಸಿ.ಜೈಕುಮಾರ್, ಬಸವರಾಜ್ ಐನಾಪುರ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-17-185991530</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>