<p><strong>ತುಮಕೂರು</strong>: ರಿಫಾ ಚೇಂಬರ್ ಆಫ್ ಕಾಮರ್ಸ್ ಜಿಲ್ಲಾ ಘಟಕದ ವತಿಯಿಂದ ರಂಜಾನ್ ಅಂಗವಾಗಿ ಈಚೆಗೆ ದಾವತ್–ಇ-ಇಫ್ತಾರ್ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಂದಿದ್ದ ಉದ್ಯಮಿಗಳು ಭಾಗವಹಿಸಿದ್ದರು. ಸೌಹಾರ್ದ ಸಂದೇಶವನ್ನು ಸಾರಿದರು.</p>.<p>ರಾಜ್ಯ ಘಟಕದ ಅಧ್ಯಕ್ಷ ಸೈಯದ್ ಮುಮ್ತಾಜ್ ಮನ್ಸೂರಿ, ‘ಸಮುದಾಯದ ಸಣ್ಣ, ಮಧ್ಯಮ ಉದ್ಯಮಿಗಳಿಗೆ ತರಬೇತಿ, ಮಾರ್ಗದರ್ಶನ, ಆರ್ಥಿಕ ಜಾಗೃತಿ ಮೂಡಿಸುವ ಕಾರ್ಯವನ್ನು ಸಂಸ್ಥೆ ಕೈಗೊಂಡಿದೆ. ಕೌಶಲಾಭಿವೃದ್ಧಿ ಮೂಲಕ ಉದ್ಯಮಿಗಳನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ಪ್ರಮುಖ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಯಾಹ್ಯಾ ಖಾನ್, ‘ಸಮುದಾಯದ ಉದ್ಯಮಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಪ್ರಯತ್ನ ಮಾಡಲಾಗಿದೆ. ಉದ್ಯಮಿಗಳು ಪರಸ್ಪರ ಪರಿಚಯಿಸಿಕೊಂಡು ವ್ಯವಹಾರ ವೃದ್ಧಿಸಿಕೊಂಡರೆ ಆರ್ಥಿಕವಾಗಿ ಬಲಿಷ್ಠ ಸಮುದಾಯ ನಿರ್ಮಾಣ ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ರಿಫಾ ಚೇಂಬರ್ನ ಪ್ರಮುಖರಾದ ಹಬೀಬ್ ಉರ್ ರಹಮಾನ್, ಸಲೀಂ ಅಹಮದ್ ಖಾನ್ ಮನ್ಸೂರಿ, ತಾಜುದ್ದೀನ್ ಶರೀಫ್, ಮುಖಂಡರಾದ ಇಕ್ಬಾಲ್ ಅಹಮದ್, ತನ್ವೀರ್ ಅಹಮದ್ ಖಾನ್, ಎಸ್.ಎಂ.ಇರ್ಫಾನ್, ನದೀಂ ಪಾಷಾ, ಜಿಯಾಉಲ್ಲಾ, ರಾಮನಗರದ ಮೊಹಮ್ಮದ್ ಆರಿಫ್ ಖುರೇಷಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ರಿಫಾ ಚೇಂಬರ್ ಆಫ್ ಕಾಮರ್ಸ್ ಜಿಲ್ಲಾ ಘಟಕದ ವತಿಯಿಂದ ರಂಜಾನ್ ಅಂಗವಾಗಿ ಈಚೆಗೆ ದಾವತ್–ಇ-ಇಫ್ತಾರ್ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಂದಿದ್ದ ಉದ್ಯಮಿಗಳು ಭಾಗವಹಿಸಿದ್ದರು. ಸೌಹಾರ್ದ ಸಂದೇಶವನ್ನು ಸಾರಿದರು.</p>.<p>ರಾಜ್ಯ ಘಟಕದ ಅಧ್ಯಕ್ಷ ಸೈಯದ್ ಮುಮ್ತಾಜ್ ಮನ್ಸೂರಿ, ‘ಸಮುದಾಯದ ಸಣ್ಣ, ಮಧ್ಯಮ ಉದ್ಯಮಿಗಳಿಗೆ ತರಬೇತಿ, ಮಾರ್ಗದರ್ಶನ, ಆರ್ಥಿಕ ಜಾಗೃತಿ ಮೂಡಿಸುವ ಕಾರ್ಯವನ್ನು ಸಂಸ್ಥೆ ಕೈಗೊಂಡಿದೆ. ಕೌಶಲಾಭಿವೃದ್ಧಿ ಮೂಲಕ ಉದ್ಯಮಿಗಳನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ಪ್ರಮುಖ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಯಾಹ್ಯಾ ಖಾನ್, ‘ಸಮುದಾಯದ ಉದ್ಯಮಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಪ್ರಯತ್ನ ಮಾಡಲಾಗಿದೆ. ಉದ್ಯಮಿಗಳು ಪರಸ್ಪರ ಪರಿಚಯಿಸಿಕೊಂಡು ವ್ಯವಹಾರ ವೃದ್ಧಿಸಿಕೊಂಡರೆ ಆರ್ಥಿಕವಾಗಿ ಬಲಿಷ್ಠ ಸಮುದಾಯ ನಿರ್ಮಾಣ ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ರಿಫಾ ಚೇಂಬರ್ನ ಪ್ರಮುಖರಾದ ಹಬೀಬ್ ಉರ್ ರಹಮಾನ್, ಸಲೀಂ ಅಹಮದ್ ಖಾನ್ ಮನ್ಸೂರಿ, ತಾಜುದ್ದೀನ್ ಶರೀಫ್, ಮುಖಂಡರಾದ ಇಕ್ಬಾಲ್ ಅಹಮದ್, ತನ್ವೀರ್ ಅಹಮದ್ ಖಾನ್, ಎಸ್.ಎಂ.ಇರ್ಫಾನ್, ನದೀಂ ಪಾಷಾ, ಜಿಯಾಉಲ್ಲಾ, ರಾಮನಗರದ ಮೊಹಮ್ಮದ್ ಆರಿಫ್ ಖುರೇಷಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>