<p><strong>ತುಮಕೂರು:</strong> ಸನಾತನ ಸಂಸ್ಥೆಯಿಂದ ನಗರದಲ್ಲಿ ಈಚೆಗೆ ಸನಾತನ ಸಂಸ್ಕಾರ ತರಬೇತಿ ಶಿಬಿರ ಆಯೋಜಿಸಲಾಗಿತ್ತು.</p>.<p>9ರಿಂದ 15 ವರ್ಷದ ಮಕ್ಕಳಲ್ಲಿ ನೈತಿಕ ಮೌಲ್ಯ, ಸಂಸ್ಕಾರ ಹಾಗೂ ರಾಷ್ಟ್ರ ಪ್ರೇಮ ಬಿತ್ತಿ ಅವರ ಸರ್ವತೋಮುಖ ವ್ಯಕ್ತಿತ್ವ ವಿಕಸನ ಮಾಡುವ ಉದ್ದೇಶದಿಂದ ಶಿಬಿರ ಏರ್ಪಡಿಸಲಾಗಿತ್ತು. ಮಕ್ಕಳಿಗೆ ಸೂರ್ಯ ನಮಸ್ಕಾರ ಸೇರಿ ಇತರೆ ಯೋಗಾಸನಗಳ ಪ್ರಾಯೋಗಿಕ ತರಬೇತಿ ನೀಡಲಾಯಿತು.</p>.<p>ಮೇ 17ರಿಂದ ನಡೆಯುತ್ತಿದ್ದ ಶಿಬಿರಕ್ಕೆ ಗುರುವಾರ ತೆರೆ ಬಿತ್ತು. ಮಕ್ಕಳು ಐದು ದಿನ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಹಲವು ವಿಚಾರಗಳ ಕುರಿತು ತಿಳಿದುಕೊಂಡರು.</p>.<p>‘ಮೊಬೈಲ್ ಯುಗದಲ್ಲಿ ಮಕ್ಕಳು ಓದುವ ಹವ್ಯಾಸದಿಂದ ದೂರು ಉಳಿಯಬಾರದು. ಪ್ರತಿ ದಿನ ಹೊಸ ಜ್ಞಾನ ಪಡೆಯಬೇಕು. ಮೊಬೈಲ್ ಬಳಕೆ ಕಡಿಮೆ ಮಾಡಿ, ಓದಿನ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಸಂಪನ್ಮೂಲ ವ್ಯಕ್ತಿಗಳು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-17-1507530867</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸನಾತನ ಸಂಸ್ಥೆಯಿಂದ ನಗರದಲ್ಲಿ ಈಚೆಗೆ ಸನಾತನ ಸಂಸ್ಕಾರ ತರಬೇತಿ ಶಿಬಿರ ಆಯೋಜಿಸಲಾಗಿತ್ತು.</p>.<p>9ರಿಂದ 15 ವರ್ಷದ ಮಕ್ಕಳಲ್ಲಿ ನೈತಿಕ ಮೌಲ್ಯ, ಸಂಸ್ಕಾರ ಹಾಗೂ ರಾಷ್ಟ್ರ ಪ್ರೇಮ ಬಿತ್ತಿ ಅವರ ಸರ್ವತೋಮುಖ ವ್ಯಕ್ತಿತ್ವ ವಿಕಸನ ಮಾಡುವ ಉದ್ದೇಶದಿಂದ ಶಿಬಿರ ಏರ್ಪಡಿಸಲಾಗಿತ್ತು. ಮಕ್ಕಳಿಗೆ ಸೂರ್ಯ ನಮಸ್ಕಾರ ಸೇರಿ ಇತರೆ ಯೋಗಾಸನಗಳ ಪ್ರಾಯೋಗಿಕ ತರಬೇತಿ ನೀಡಲಾಯಿತು.</p>.<p>ಮೇ 17ರಿಂದ ನಡೆಯುತ್ತಿದ್ದ ಶಿಬಿರಕ್ಕೆ ಗುರುವಾರ ತೆರೆ ಬಿತ್ತು. ಮಕ್ಕಳು ಐದು ದಿನ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಹಲವು ವಿಚಾರಗಳ ಕುರಿತು ತಿಳಿದುಕೊಂಡರು.</p>.<p>‘ಮೊಬೈಲ್ ಯುಗದಲ್ಲಿ ಮಕ್ಕಳು ಓದುವ ಹವ್ಯಾಸದಿಂದ ದೂರು ಉಳಿಯಬಾರದು. ಪ್ರತಿ ದಿನ ಹೊಸ ಜ್ಞಾನ ಪಡೆಯಬೇಕು. ಮೊಬೈಲ್ ಬಳಕೆ ಕಡಿಮೆ ಮಾಡಿ, ಓದಿನ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಸಂಪನ್ಮೂಲ ವ್ಯಕ್ತಿಗಳು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-17-1507530867</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>