<p><strong>ತುಮಕೂರು:</strong> ಕಲಿಕೆಗೆ ವಯಸ್ಸಿನ ಮಿತಿಯಿಲ್ಲ ಎಂಬ ಮಾತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇಲ್ಲೊಬ್ಬರು 76ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಕಾನೂನು ಪದವಿಯಲ್ಲಿ (ಎಲ್ಎಲ್ಎಂ) ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.</p>.<p>ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ನಡೆದ 19ನೇ ಘಟಿಕೋತ್ಸವದಲ್ಲಿ ಸ್ನಾತಕೋತ್ತರ ಕಾನೂನು ವಿಭಾಗದ ವಿ.ತಿಪ್ಪೇಸ್ವಾಮಿ ಪದವಿ ಪ್ರಮಾಣಪತ್ರ ಪಡೆದು, ಎಲ್ಲರ ಗಮನ ಸೆಳೆದರು.</p>.<p>ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಸಿದ್ದಾಪುರ ಗ್ರಾಮದ ತಿಪ್ಪೇಸ್ವಾಮಿ ನಿವೃತ್ತ ಸರ್ಕಾರಿ ಅಧಿಕಾರಿ. ಸದ್ಯ ಬೆಂಗಳೂರಿನಲ್ಲಿ ನೆಲಸಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಉಪ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ, 2011ರಲ್ಲಿ ವಯೋನಿವೃತ್ತಿ ಹೊಂದಿದರು. ನಂತರ ತುಮಕೂರು ವಿಶ್ವವಿದ್ಯಾಲಯದ ಅಕಾಡೆಮಿಕ್ ವಿಭಾಗದಲ್ಲಿ ಐದು ವರ್ಷ ಕೆಲಸ ಮಾಡಿದರು. ಇದರ ಮಧ್ಯೆ ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪೂರ್ಣಗೊಳಿಸಿದರು.</p>.<p>ಬೆಂಗಳೂರಿನ ವಿವಿಧ ಸಂಸ್ಥೆಗಳಲ್ಲಿ ಕಾನೂನು ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಹೊಸದಾಗಿ ಸ್ನಾತಕೋತ್ತರ ಕಾನೂನು ವಿಭಾಗ ಶುರುವಾದ ಮಾಹಿತಿ ಸಿಕ್ಕ ಕೂಡಲೇ ಕೋರ್ಸ್ಗೆ ದಾಖಲಾತಿ ಪಡೆದರು. ಇದೀಗ 4ನೇ ರ್ಯಾಂಕ್ ಗಳಿಸಿದ್ದಾರೆ.</p>.<p>‘ನಮ್ಮ ವಿಭಾಗದಲ್ಲಿ ಒಟ್ಟು 28 ವಿದ್ಯಾರ್ಥಿಗಳಿದ್ದರು. ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣ ನೋಡುತ್ತಿದ್ದೆ. ದಿನೇ ದಿನೇ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದ್ದವು. ಹೆಚ್ಚಿನ ಜ್ಞಾನ, ಕಾನೂನು ತಿಳಿವಳಿಕೆಯ ಉದ್ದೇಶದಿಂದ ಮತ್ತೆ ಕಾಲೇಜು ಸೇರಿದೆ. ಕಷ್ಟಪಟ್ಟು ಓದಿದರೆ ಎಲ್ಲವೂ ಸಾಧ್ಯ. ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ವಿದ್ಯಾರ್ಥಿ ಜೀವನ ತುಂಬಾ ಮುಖ್ಯ’ ಎಂದು ತಿಪ್ಪೇಸ್ವಾಮಿ ಪ್ರತಿಕ್ರಿಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-51-1939550711</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕಲಿಕೆಗೆ ವಯಸ್ಸಿನ ಮಿತಿಯಿಲ್ಲ ಎಂಬ ಮಾತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇಲ್ಲೊಬ್ಬರು 76ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಕಾನೂನು ಪದವಿಯಲ್ಲಿ (ಎಲ್ಎಲ್ಎಂ) ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.</p>.<p>ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ನಡೆದ 19ನೇ ಘಟಿಕೋತ್ಸವದಲ್ಲಿ ಸ್ನಾತಕೋತ್ತರ ಕಾನೂನು ವಿಭಾಗದ ವಿ.ತಿಪ್ಪೇಸ್ವಾಮಿ ಪದವಿ ಪ್ರಮಾಣಪತ್ರ ಪಡೆದು, ಎಲ್ಲರ ಗಮನ ಸೆಳೆದರು.</p>.<p>ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಸಿದ್ದಾಪುರ ಗ್ರಾಮದ ತಿಪ್ಪೇಸ್ವಾಮಿ ನಿವೃತ್ತ ಸರ್ಕಾರಿ ಅಧಿಕಾರಿ. ಸದ್ಯ ಬೆಂಗಳೂರಿನಲ್ಲಿ ನೆಲಸಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಉಪ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ, 2011ರಲ್ಲಿ ವಯೋನಿವೃತ್ತಿ ಹೊಂದಿದರು. ನಂತರ ತುಮಕೂರು ವಿಶ್ವವಿದ್ಯಾಲಯದ ಅಕಾಡೆಮಿಕ್ ವಿಭಾಗದಲ್ಲಿ ಐದು ವರ್ಷ ಕೆಲಸ ಮಾಡಿದರು. ಇದರ ಮಧ್ಯೆ ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪೂರ್ಣಗೊಳಿಸಿದರು.</p>.<p>ಬೆಂಗಳೂರಿನ ವಿವಿಧ ಸಂಸ್ಥೆಗಳಲ್ಲಿ ಕಾನೂನು ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಹೊಸದಾಗಿ ಸ್ನಾತಕೋತ್ತರ ಕಾನೂನು ವಿಭಾಗ ಶುರುವಾದ ಮಾಹಿತಿ ಸಿಕ್ಕ ಕೂಡಲೇ ಕೋರ್ಸ್ಗೆ ದಾಖಲಾತಿ ಪಡೆದರು. ಇದೀಗ 4ನೇ ರ್ಯಾಂಕ್ ಗಳಿಸಿದ್ದಾರೆ.</p>.<p>‘ನಮ್ಮ ವಿಭಾಗದಲ್ಲಿ ಒಟ್ಟು 28 ವಿದ್ಯಾರ್ಥಿಗಳಿದ್ದರು. ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣ ನೋಡುತ್ತಿದ್ದೆ. ದಿನೇ ದಿನೇ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದ್ದವು. ಹೆಚ್ಚಿನ ಜ್ಞಾನ, ಕಾನೂನು ತಿಳಿವಳಿಕೆಯ ಉದ್ದೇಶದಿಂದ ಮತ್ತೆ ಕಾಲೇಜು ಸೇರಿದೆ. ಕಷ್ಟಪಟ್ಟು ಓದಿದರೆ ಎಲ್ಲವೂ ಸಾಧ್ಯ. ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ವಿದ್ಯಾರ್ಥಿ ಜೀವನ ತುಂಬಾ ಮುಖ್ಯ’ ಎಂದು ತಿಪ್ಪೇಸ್ವಾಮಿ ಪ್ರತಿಕ್ರಿಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-51-1939550711</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>