<p>ತುಮಕೂರು: ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಬೆಂಗಳೂರಿಗೆ ಪಾದಯಾತ್ರೆ ನಡೆಸುತ್ತಿರುವ ಕೋಡಿಹಳ್ಳಿ ಆದಿಜಾಂಬವ ಮಠದ ಷಡಕ್ಷರಿಮುನಿ ಸ್ವಾಮೀಜಿ ನಗರದಲ್ಲಿ ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಸೋಮವಾರ ಚಿಕಿತ್ಸೆ ಪಡೆದರು.</p>.<p>ಭಾನುವಾರ ಸಂಜೆ ಪಾದಯಾತ್ರೆ ನಗರ ತಲುಪಿತ್ತು. ಪಾದಯಾತ್ರಿಗಳು ಶಿರಾ ಗೇಟ್ ಬಳಿ ವಾಸ್ತವ್ಯ ಹೂಡಿದ್ದರು. ಸೋಮವಾರ ಬೆಳಿಗ್ಗೆ ಆರಂಭವಾದ ಪಾದಯಾತ್ರೆ ನಗರದ ಬಿ.ಎಚ್.ರಸ್ತೆ ಮೂಲಕ ಬೆಂಗಳೂರು ಕಡೆಗೆ ಸಾಗುವಾಗ ಭದ್ರಮ್ಮ ಛತ್ರ ವೃತ್ತದ ಬಳಿ ಸ್ವಾಮೀಜಿ ಅಸ್ವಸ್ಥರಾದರು.</p>.<p>ತಕ್ಷಣ ಅವರನ್ನು ಆಂಬು ಲೆನ್ಸ್ನಲ್ಲಿ ಆಸ್ಪತ್ರೆಗೆ ರವಾನಿಸಲಾಯಿತು. ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದು, ವಿಶ್ರಾಂತಿ ಪಡೆದು ಮತ್ತೆ ಪಾದಯಾತ್ರೆ ಮುಂದುವರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-17-607774516</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಬೆಂಗಳೂರಿಗೆ ಪಾದಯಾತ್ರೆ ನಡೆಸುತ್ತಿರುವ ಕೋಡಿಹಳ್ಳಿ ಆದಿಜಾಂಬವ ಮಠದ ಷಡಕ್ಷರಿಮುನಿ ಸ್ವಾಮೀಜಿ ನಗರದಲ್ಲಿ ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಸೋಮವಾರ ಚಿಕಿತ್ಸೆ ಪಡೆದರು.</p>.<p>ಭಾನುವಾರ ಸಂಜೆ ಪಾದಯಾತ್ರೆ ನಗರ ತಲುಪಿತ್ತು. ಪಾದಯಾತ್ರಿಗಳು ಶಿರಾ ಗೇಟ್ ಬಳಿ ವಾಸ್ತವ್ಯ ಹೂಡಿದ್ದರು. ಸೋಮವಾರ ಬೆಳಿಗ್ಗೆ ಆರಂಭವಾದ ಪಾದಯಾತ್ರೆ ನಗರದ ಬಿ.ಎಚ್.ರಸ್ತೆ ಮೂಲಕ ಬೆಂಗಳೂರು ಕಡೆಗೆ ಸಾಗುವಾಗ ಭದ್ರಮ್ಮ ಛತ್ರ ವೃತ್ತದ ಬಳಿ ಸ್ವಾಮೀಜಿ ಅಸ್ವಸ್ಥರಾದರು.</p>.<p>ತಕ್ಷಣ ಅವರನ್ನು ಆಂಬು ಲೆನ್ಸ್ನಲ್ಲಿ ಆಸ್ಪತ್ರೆಗೆ ರವಾನಿಸಲಾಯಿತು. ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದು, ವಿಶ್ರಾಂತಿ ಪಡೆದು ಮತ್ತೆ ಪಾದಯಾತ್ರೆ ಮುಂದುವರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-17-607774516</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>