<p>ಶಿರಾ: ತಾಲ್ಲೂಕಿನ ತಡಕಲೂರಿನಲ್ಲಿ ಇತ್ತೀಚೆಗೆ ಆಲಿಕಲ್ಲು ಮತ್ತು ಬಿರುಗಾಳಿಯಿಂದ ಬೆಳೆ ನಷ್ಟವಾದ ಜಮೀನುಗಳಿಗೆ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಶಾಸಕ ಟಿ.ಬಿ.ಜಯಚಂದ್ರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಅಧಿಕಾರಿಗಳ ಜೊತೆ ದಾಳಿಂಬೆ, ರೇಷ್ಮೆ ಮತ್ತು ಅಡಿಕೆ ತೋಟಗಳಿಗೆ ಭೇಟಿ ನೀಡಿದ ಸಚಿವ ಜಿ.ಪರಮೇಶ್ವರ ಬೆಳೆ ನಷ್ಟದ ಬಗ್ಗೆ ರೈತರಿಂದ ಮಾಹಿತಿ ಪಡೆದು ಮಾತನಾಡಿದರು.</p>.<p>ಬೆಳೆ ನಷ್ಟದ ಬಗ್ಗೆ ಈಗಾಗಲೇ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ಸಿದ್ಧಮಾಡುತ್ತಿದ್ದಾರೆ. ನಷ್ಟ ಅನುಭವಿಸಿದ ರೈತರಿಗೆ ಹೆಚ್ಚಿನ ಪರಿಹಾರ ದೊರಕಿಸಿ ಕೊಡಲಾಗುವುದು. ವಿಮೆ ಮಾಡಿಸಿರುವವರಿಗೆ ವಿಮೆ ಕಂಪನಿಗಳಿಂದ ಪರಿಹಾರ ದೊರಕಿಸಲಾಗುವುದು ಎಂದು ಹೇಳಿದರು.</p>.<p>ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ಆಲಿಕಲ್ಲು ಮಳೆಯಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿ ತಾಲ್ಲೂಕಿನಲ್ಲಿ ಆಗಿದ್ದು ರೈತರ ಹಿತಕಾಯುವ ಕೆಲಸವನ್ನು ಸರ್ಕಾರ ಮಾಡುವುದು ಎಂದರು.</p>.<p>ಆಸ್ಪತ್ರೆಗೆ ಭೇಟಿ: ನಗರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ಎಚ್ಪಿವಿ ಲಸಿಕೆ ನೀಡಲು ಚಾಲನೆ ನೀಡಿದರು.</p>.<p>ಮನೆಗಳ ವೀಕ್ಷಣೆ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ 1,008 ಗುಂಪು ಮನೆಗಳನ್ನು ವೀಕ್ಷಿಸಿದರು. ಈಗಾಗಲೇ ಸಿದ್ಧವಾಗಿರುವ ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಲು ಸೂಚಿಸಿದರು. ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ತಡಕಲೂರಿನಲ್ಲಿ ಬೆಳೆಹಾನಿ ವೀಕ್ಷಿಸಿದ ನಂತರ ಶಾಸಕ ಟಿ.ಬಿ.ಜಯಚಂದ್ರ ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆ ತೆರಳಿದರೆ ಸಚಿವ ಡಾ.ಜಿ.ಪರಮೇಶ್ವರ ಆಸ್ಪತ್ರೆಗೆ ಭೇಟಿ ನೀಡಿದರು.</p>.<p>ಸಂಚಾರಿ ಠಾಣೆಗೆ ಮನವಿ: ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿದೆ. ಅಪಘಾತಗಳ ಸಂಖ್ಯೆ ಸಹ ಹೆಚ್ಚುತ್ತಿದ್ದು, ಸಾವು ನೋವು ತಡೆಯುವ ಉದ್ದೇಶದಿಂದ ಸಂಚಾರಿ ಪೊಲೀಸ್ ಠಾಣೆ ಪ್ರಾರಂಭಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪವಿಭಾಗಾಧಿಕಾರಿ ಶಿವಪ್ಪ ಗೋಟೂರು, ತಹಶೀಲ್ದಾರ್ ಆನಂದಕುಮಾರ್, ಇಒ ಆರ್.ಹರೀಶ್, ನಗರಸಭೆ ಪೌರಾಯುಕ್ತ ರುದ್ರೇಶ್, ಡಿವೈಎಸ್ಪಿ ಶೇಖರ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್ ಹಾಗೂ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-17-912995579</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ತಾಲ್ಲೂಕಿನ ತಡಕಲೂರಿನಲ್ಲಿ ಇತ್ತೀಚೆಗೆ ಆಲಿಕಲ್ಲು ಮತ್ತು ಬಿರುಗಾಳಿಯಿಂದ ಬೆಳೆ ನಷ್ಟವಾದ ಜಮೀನುಗಳಿಗೆ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಶಾಸಕ ಟಿ.ಬಿ.ಜಯಚಂದ್ರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಅಧಿಕಾರಿಗಳ ಜೊತೆ ದಾಳಿಂಬೆ, ರೇಷ್ಮೆ ಮತ್ತು ಅಡಿಕೆ ತೋಟಗಳಿಗೆ ಭೇಟಿ ನೀಡಿದ ಸಚಿವ ಜಿ.ಪರಮೇಶ್ವರ ಬೆಳೆ ನಷ್ಟದ ಬಗ್ಗೆ ರೈತರಿಂದ ಮಾಹಿತಿ ಪಡೆದು ಮಾತನಾಡಿದರು.</p>.<p>ಬೆಳೆ ನಷ್ಟದ ಬಗ್ಗೆ ಈಗಾಗಲೇ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ಸಿದ್ಧಮಾಡುತ್ತಿದ್ದಾರೆ. ನಷ್ಟ ಅನುಭವಿಸಿದ ರೈತರಿಗೆ ಹೆಚ್ಚಿನ ಪರಿಹಾರ ದೊರಕಿಸಿ ಕೊಡಲಾಗುವುದು. ವಿಮೆ ಮಾಡಿಸಿರುವವರಿಗೆ ವಿಮೆ ಕಂಪನಿಗಳಿಂದ ಪರಿಹಾರ ದೊರಕಿಸಲಾಗುವುದು ಎಂದು ಹೇಳಿದರು.</p>.<p>ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ಆಲಿಕಲ್ಲು ಮಳೆಯಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿ ತಾಲ್ಲೂಕಿನಲ್ಲಿ ಆಗಿದ್ದು ರೈತರ ಹಿತಕಾಯುವ ಕೆಲಸವನ್ನು ಸರ್ಕಾರ ಮಾಡುವುದು ಎಂದರು.</p>.<p>ಆಸ್ಪತ್ರೆಗೆ ಭೇಟಿ: ನಗರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ಎಚ್ಪಿವಿ ಲಸಿಕೆ ನೀಡಲು ಚಾಲನೆ ನೀಡಿದರು.</p>.<p>ಮನೆಗಳ ವೀಕ್ಷಣೆ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ 1,008 ಗುಂಪು ಮನೆಗಳನ್ನು ವೀಕ್ಷಿಸಿದರು. ಈಗಾಗಲೇ ಸಿದ್ಧವಾಗಿರುವ ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಲು ಸೂಚಿಸಿದರು. ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ತಡಕಲೂರಿನಲ್ಲಿ ಬೆಳೆಹಾನಿ ವೀಕ್ಷಿಸಿದ ನಂತರ ಶಾಸಕ ಟಿ.ಬಿ.ಜಯಚಂದ್ರ ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆ ತೆರಳಿದರೆ ಸಚಿವ ಡಾ.ಜಿ.ಪರಮೇಶ್ವರ ಆಸ್ಪತ್ರೆಗೆ ಭೇಟಿ ನೀಡಿದರು.</p>.<p>ಸಂಚಾರಿ ಠಾಣೆಗೆ ಮನವಿ: ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿದೆ. ಅಪಘಾತಗಳ ಸಂಖ್ಯೆ ಸಹ ಹೆಚ್ಚುತ್ತಿದ್ದು, ಸಾವು ನೋವು ತಡೆಯುವ ಉದ್ದೇಶದಿಂದ ಸಂಚಾರಿ ಪೊಲೀಸ್ ಠಾಣೆ ಪ್ರಾರಂಭಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪವಿಭಾಗಾಧಿಕಾರಿ ಶಿವಪ್ಪ ಗೋಟೂರು, ತಹಶೀಲ್ದಾರ್ ಆನಂದಕುಮಾರ್, ಇಒ ಆರ್.ಹರೀಶ್, ನಗರಸಭೆ ಪೌರಾಯುಕ್ತ ರುದ್ರೇಶ್, ಡಿವೈಎಸ್ಪಿ ಶೇಖರ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್ ಹಾಗೂ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-17-912995579</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>