<p>ಶಿರಾ: ‘ರಾಜ್ಯದಲ್ಲಿ ಶಿರಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಶಿಕ್ಷಣ ಕಾಶಿಯನ್ನಾಗಿ ಮಾಡಲಾಗುತ್ತಿದೆ. ಗೌಡಗೆರೆ ಮತ್ತು ಹುಲಿಕುಂಟೆ ಹೋಬಳಿಗಳ ಕೆರೆಗಳಿಗೆ ನೀರು ಹರಿಸಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಭರವಸೆ ನೀಡಿದರು.</p>.<p>ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಪ್ರೌಢಶಾಲೆ ಕಟ್ಟಡ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿ ಮಾತನಾಡಿದರು.</p>.<p>ತಾಲ್ಲೂಕಿನ ತಾವರೆಕೆರೆ, ಶಿರಾ, ಗೋಪಿ ಕುಂಟೆ, ತರೂರು, ಬರಗೂರು ಗ್ರಾಮಗಳಲ್ಲಿ ಕೋಟ್ಯಂತರ ರೂಪಾಯಿ ಅನುದಾನ ಹಾಗೂ ಸ್ವಂತ ಹಣ ಬಳಸಿ ಸರ್ಕಾರಿ ಶಾಲೆಗಳನ್ನು ಭವ್ಯವಾಗಿ ನಿರ್ಮಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ದಾಖಲಾಗುವ ಮೂಲಕ ಶಾಲೆಗಳನ್ನು ಉಳಿಸಬೇಕು ಎಂದರು.</p>.<p>ಗ್ರಾ.ಪಂ. ಮಾಜಿ ಸದಸ್ಯ ಶಿವು ಸ್ನೇಹಪ್ರಿಯ, ಮುದಕನಹಳ್ಳಿ ಗೊಲ್ಲರಹಟ್ಟಿ ಗೌಡಪ್ಪ, ಮದಕ್ಕನಹಳ್ಳಿ ರಂಗನಾಥ್, ಚಿಕ್ಕಣ್ಣ, ನಾಗಭೂಷಣ್, ಕಾಟನಹಳ್ಳಿ ಭಾಸ್ಕರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-17-1143326830</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ‘ರಾಜ್ಯದಲ್ಲಿ ಶಿರಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಶಿಕ್ಷಣ ಕಾಶಿಯನ್ನಾಗಿ ಮಾಡಲಾಗುತ್ತಿದೆ. ಗೌಡಗೆರೆ ಮತ್ತು ಹುಲಿಕುಂಟೆ ಹೋಬಳಿಗಳ ಕೆರೆಗಳಿಗೆ ನೀರು ಹರಿಸಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಭರವಸೆ ನೀಡಿದರು.</p>.<p>ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಪ್ರೌಢಶಾಲೆ ಕಟ್ಟಡ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿ ಮಾತನಾಡಿದರು.</p>.<p>ತಾಲ್ಲೂಕಿನ ತಾವರೆಕೆರೆ, ಶಿರಾ, ಗೋಪಿ ಕುಂಟೆ, ತರೂರು, ಬರಗೂರು ಗ್ರಾಮಗಳಲ್ಲಿ ಕೋಟ್ಯಂತರ ರೂಪಾಯಿ ಅನುದಾನ ಹಾಗೂ ಸ್ವಂತ ಹಣ ಬಳಸಿ ಸರ್ಕಾರಿ ಶಾಲೆಗಳನ್ನು ಭವ್ಯವಾಗಿ ನಿರ್ಮಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ದಾಖಲಾಗುವ ಮೂಲಕ ಶಾಲೆಗಳನ್ನು ಉಳಿಸಬೇಕು ಎಂದರು.</p>.<p>ಗ್ರಾ.ಪಂ. ಮಾಜಿ ಸದಸ್ಯ ಶಿವು ಸ್ನೇಹಪ್ರಿಯ, ಮುದಕನಹಳ್ಳಿ ಗೊಲ್ಲರಹಟ್ಟಿ ಗೌಡಪ್ಪ, ಮದಕ್ಕನಹಳ್ಳಿ ರಂಗನಾಥ್, ಚಿಕ್ಕಣ್ಣ, ನಾಗಭೂಷಣ್, ಕಾಟನಹಳ್ಳಿ ಭಾಸ್ಕರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-17-1143326830</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>