ಕುಂಟೆಗೌಡನಹಳ್ಳಿ ಗ್ರಾಮದ ಕರಿಯಣ್ಣ (60) ಹಾಗೂ ಮೊಮ್ಮಗ ದಿಲೀಪ್ (12) ಮೃತರು. ಹಸುಗಳಿಗೆ ಕಟ್ಟೆಯಲ್ಲಿ ಮೈ ತೊಳೆಯುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಮೊಮ್ಮಗ ದಿಲೀಪ್ ನೀರಿನಲ್ಲಿ ಬಿದ್ದಿದ್ದಾನೆ. ಮೊಮ್ಮಗನನ್ನು ಕಾಪಾಡಲು ತಾತ ಕರಿಯಣ್ಣ ಸಹ ನೀರಿಗೆ ದುಮುಕಿದ್ದು ಕೆಸರಿನಲ್ಲಿ ಸಿಲುಕಿ ಇಬ್ಬರು ಮೃತ ಪಟ್ಟಿದ್ದಾರೆ.