<p>ಶಿರಾ: ತಾಲ್ಲೂಕಿನ ಸೀಬಿ ಅಗ್ರಹಾರ ಗ್ರಾಮಕ್ಕೆ ಜಿಲ್ಲಾ ತಾಂತ್ರಿಕ ಸಹಾಯ ಘಟಕದ ಸಾಮಾಜಿಕ ಅಭಿವೃದ್ಧಿ ಸಮಾಲೋಚಕ ಎಚ್.ಎಸ್. ರವಿಕುಮಾರ್ ಭೇಟಿ ನೀಡಿ ಜಲಜೀವನ್ ಮಿಷನ್ನ ಮನೆ ಮನೆಗೆ ಗಂಗೆ ಯೋಜನೆ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿದರು.</p>.<p>ಜಲಜೀವನ್ ಮಿಷನ್ ಯೋಜನೆ ಯಶಸ್ವಿಯಾಗಬೇಕಾದರೆ ಜನರ ಸಹಭಾಗಿತ್ವ ಅತ್ಯಗತ್ಯ. ನೀರನ್ನು ಪೋಲು ಮಾಡದೆ ಅಗತ್ಯಕ್ಕೆ ತಕ್ಕಂತೆ ಬಳಸಬೇಕು. ಮುಂದಿನ ಪೀಳಿಗೆಗೂ ನೀರು ಉಳಿಸುವ ಜವಾಬ್ದಾರಿ ಜನರ ಮೇಲಿದೆ ಎಂದು ತಿಳಿಸಿದರು.</p>.<p>ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಲ್ಲಿ ದಿನದ 24 ಗಂಟೆಯೂ ನೀರು ಸರಬರಾಜು ಆಗುವ ಗ್ರಾಮವೆಂದು ಘೋಷಿಸಲಾಗುವುದು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಸಭೆಗಳಲ್ಲಿ ಜನರು ತಪ್ಪದೆ ಭಾಗವಹಿಸಬೇಕು. ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕು. ಸಮಸ್ಯೆಗಳನ್ನು ಪಂಚಾಯಿತಿಗಳ ಗಮನಕ್ಕೆ ತರಬೇಕು ಎಂದರು.</p>.<p>ಪಂಚಾಯಿತಿ ಕಾರ್ಯದರ್ಶಿ ಜಾನ್ ರಾಡಿ ಕ್ರಾಸ್, ಕುಮಾರಸ್ವಾಮಿ, ನೀರು ವಿತರಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-17-276985879</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಾ: ತಾಲ್ಲೂಕಿನ ಸೀಬಿ ಅಗ್ರಹಾರ ಗ್ರಾಮಕ್ಕೆ ಜಿಲ್ಲಾ ತಾಂತ್ರಿಕ ಸಹಾಯ ಘಟಕದ ಸಾಮಾಜಿಕ ಅಭಿವೃದ್ಧಿ ಸಮಾಲೋಚಕ ಎಚ್.ಎಸ್. ರವಿಕುಮಾರ್ ಭೇಟಿ ನೀಡಿ ಜಲಜೀವನ್ ಮಿಷನ್ನ ಮನೆ ಮನೆಗೆ ಗಂಗೆ ಯೋಜನೆ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿದರು.</p>.<p>ಜಲಜೀವನ್ ಮಿಷನ್ ಯೋಜನೆ ಯಶಸ್ವಿಯಾಗಬೇಕಾದರೆ ಜನರ ಸಹಭಾಗಿತ್ವ ಅತ್ಯಗತ್ಯ. ನೀರನ್ನು ಪೋಲು ಮಾಡದೆ ಅಗತ್ಯಕ್ಕೆ ತಕ್ಕಂತೆ ಬಳಸಬೇಕು. ಮುಂದಿನ ಪೀಳಿಗೆಗೂ ನೀರು ಉಳಿಸುವ ಜವಾಬ್ದಾರಿ ಜನರ ಮೇಲಿದೆ ಎಂದು ತಿಳಿಸಿದರು.</p>.<p>ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಲ್ಲಿ ದಿನದ 24 ಗಂಟೆಯೂ ನೀರು ಸರಬರಾಜು ಆಗುವ ಗ್ರಾಮವೆಂದು ಘೋಷಿಸಲಾಗುವುದು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಸಭೆಗಳಲ್ಲಿ ಜನರು ತಪ್ಪದೆ ಭಾಗವಹಿಸಬೇಕು. ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕು. ಸಮಸ್ಯೆಗಳನ್ನು ಪಂಚಾಯಿತಿಗಳ ಗಮನಕ್ಕೆ ತರಬೇಕು ಎಂದರು.</p>.<p>ಪಂಚಾಯಿತಿ ಕಾರ್ಯದರ್ಶಿ ಜಾನ್ ರಾಡಿ ಕ್ರಾಸ್, ಕುಮಾರಸ್ವಾಮಿ, ನೀರು ವಿತರಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-17-276985879</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>