ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಮಾದೇನಹಳ್ಳಿ ಗ್ರಾಮದ ತೆಂಗಿನ ತೋಟದಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ಹತ್ತಿಕೊಂಡು 20ಕ್ಕೂ ಹೆಚ್ಚು ತೆಂಗಿನ ಹಾಗೂ 80 ತೇಗದ ಮರಗಳು ಸುಟ್ಟು ಹೋಗಿವೆ.
ನಿವೃತ್ತ ಮುಖ್ಯ ಶಿಕ್ಷಕ ರಾಜಣ್ಣ ಹಾಗೂ ದಿವ್ಯಾನಂದ ಅವರ ಮಾದೇನಹಳ್ಳಿ ತೋಟದಲ್ಲಿ ಈ ಘಟನೆ ನಡೆದಿದೆ. ಹತ್ತಾರು ವರ್ಷಗಳಿಂದ ಬೆಳೆಸಿದ್ದ ತೇಗದ ಮರಗಳು ಸೇರಿದಂತೆ ಬೆಂಕಿಯ ಕೆನ್ನಾಲೆಗೆಗೆ ಇಡೀ ತೋಟ ಸುಟ್ಟು ಭಸ್ಮವಾಗಿದೆ.
ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು.