ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾ: ಹೊತ್ತಿ ಉರಿದ ತೆಂಗಿನ ತೋಟ

Published 1 ಮೇ 2024, 11:38 IST
Last Updated 1 ಮೇ 2024, 11:38 IST
ಅಕ್ಷರ ಗಾತ್ರ

ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಮಾದೇನಹಳ್ಳಿ ಗ್ರಾಮದ ತೆಂಗಿನ ತೋಟದಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹತ್ತಿಕೊಂಡು 20ಕ್ಕೂ ಹೆಚ್ಚು ತೆಂಗಿನ ಹಾಗೂ 80 ತೇಗದ ಮರಗಳು ಸುಟ್ಟು ಹೋಗಿವೆ.

ನಿವೃತ್ತ ಮುಖ್ಯ ಶಿಕ್ಷಕ ರಾಜಣ್ಣ ಹಾಗೂ ದಿವ್ಯಾನಂದ ಅವರ ಮಾದೇನಹಳ್ಳಿ ತೋಟದಲ್ಲಿ ಈ ಘಟನೆ ನಡೆದಿದೆ. ಹತ್ತಾರು ವರ್ಷಗಳಿಂದ ಬೆಳೆಸಿದ್ದ ತೇಗದ ಮರಗಳು ಸೇರಿದಂತೆ ಬೆಂಕಿಯ ಕೆನ್ನಾಲೆಗೆಗೆ ಇಡೀ ತೋಟ ಸುಟ್ಟು ಭಸ್ಮವಾಗಿದೆ.

ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT