<p>ತುಮಕೂರು: ಸರ್ಕಾರದ ಖಜಾನೆ ಖಾಲಿಯಾಗಿದ್ದು, ಅಧಿಕಾರಿ, ಸಿಬ್ಬಂದಿಗೆ ಸರಿಯಾಗಿ ಸಂಬಳ ಆಗುತ್ತಿಲ್ಲ. ಇದೊಂದು ನಿರ್ಲಿಪ್ತ ಸರ್ಕಾರ ಎಂದು ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಟೀಕಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಕಾಂಗ್ರೆಸ್ನ ಹಿರಿಯ ಶಾಸಕರು ನವದೆಹಲಿಗೆ ತೆರಳುತ್ತಿರುವ ಕುರಿತು ಪ್ರತಿಕ್ರಿಯಿಸಿದರು.</p>.<p>ಬಿಸಿಲಿನ ಪ್ರಮಾಣವೂ ಹೆಚ್ಚುತ್ತಿದ್ದು, ಜನ ಹೈರಾಣಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ಜನರ ಸಮಸ್ಯೆ ಕೇಳಬೇಕಾದ ಶಾಸಕರು ನಮ್ಮನ್ನು ಮಂತ್ರಿ ಮಾಡಿ ಎಂದು ಕೇಳುವುದು ಅವರಿಗೆ ಶೋಭೆ ತರುವುದಿಲ್ಲ. ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮತ್ತೊಂದು ಗೊಂಬೆ ಆಟ ಎಂದು ಕಿಡಿಕಾರಿದರು.</p>.<p>35 ಶಾಸಕರು ದೆಹಲಿಗೆ ಹೋಗುತ್ತಿರುವುದು ಅಸಹ್ಯದ ಕಾರ್ಯಕ್ರಮ. ಈ ರೀತಿಯಾದ ದೊಂಬರಾಟ ಮಾಡಿ ಜನರನ್ನು ಕತ್ತಲೆ ಕೋಣೆಯಲ್ಲಿ ಕೂರಿಸುತ್ತಿದ್ದಾರೆ ಎಂದರು.</p>.<p>ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆ ಪ್ರಚಾರಕ್ಕೆ ನಾನು ಸಹ ಹೋಗಿದ್ದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುತ್ತಾರೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-17-624059493</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಸರ್ಕಾರದ ಖಜಾನೆ ಖಾಲಿಯಾಗಿದ್ದು, ಅಧಿಕಾರಿ, ಸಿಬ್ಬಂದಿಗೆ ಸರಿಯಾಗಿ ಸಂಬಳ ಆಗುತ್ತಿಲ್ಲ. ಇದೊಂದು ನಿರ್ಲಿಪ್ತ ಸರ್ಕಾರ ಎಂದು ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಟೀಕಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಕಾಂಗ್ರೆಸ್ನ ಹಿರಿಯ ಶಾಸಕರು ನವದೆಹಲಿಗೆ ತೆರಳುತ್ತಿರುವ ಕುರಿತು ಪ್ರತಿಕ್ರಿಯಿಸಿದರು.</p>.<p>ಬಿಸಿಲಿನ ಪ್ರಮಾಣವೂ ಹೆಚ್ಚುತ್ತಿದ್ದು, ಜನ ಹೈರಾಣಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ಜನರ ಸಮಸ್ಯೆ ಕೇಳಬೇಕಾದ ಶಾಸಕರು ನಮ್ಮನ್ನು ಮಂತ್ರಿ ಮಾಡಿ ಎಂದು ಕೇಳುವುದು ಅವರಿಗೆ ಶೋಭೆ ತರುವುದಿಲ್ಲ. ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮತ್ತೊಂದು ಗೊಂಬೆ ಆಟ ಎಂದು ಕಿಡಿಕಾರಿದರು.</p>.<p>35 ಶಾಸಕರು ದೆಹಲಿಗೆ ಹೋಗುತ್ತಿರುವುದು ಅಸಹ್ಯದ ಕಾರ್ಯಕ್ರಮ. ಈ ರೀತಿಯಾದ ದೊಂಬರಾಟ ಮಾಡಿ ಜನರನ್ನು ಕತ್ತಲೆ ಕೋಣೆಯಲ್ಲಿ ಕೂರಿಸುತ್ತಿದ್ದಾರೆ ಎಂದರು.</p>.<p>ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆ ಪ್ರಚಾರಕ್ಕೆ ನಾನು ಸಹ ಹೋಗಿದ್ದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುತ್ತಾರೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-17-624059493</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>