<p>ತುಮಕೂರು: ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಎಸ್ಎಸ್ಐಟಿ) ಶುಕ್ರವಾರ ‘ಕಲೋತ್ಸವ’ಕ್ಕೆ ಅದ್ದೂರಿ ಚಾಲನೆ ದೊರೆಯಿತು.</p>.<p>ನಾಟಕ, ಗುಂಪು ನೃತ್ಯ, ಮಿಮಿಕ್ರಿ, ಪ್ರಬಂಧ ಒಳಗೊಂಡಂತೆ 30ಕ್ಕೂ ಹೆಚ್ಚು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಶನಿವಾರ ಸಂಜೆ ಕಲೋತ್ಸವಕ್ಕೆ ತೆರೆ ಬೀಳಲಿದೆ.</p>.<p>ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ನಂಜುಂಡಪ್ಪ ಕಲೋತ್ಸವ ಉದ್ಘಾಟಿಸಿ ಮಾತನಾಡಿ, ‘ಮನುಷ್ಯ ಉತ್ತಮ ಜೀವನ ಕಟ್ಟಿಕೊಳ್ಳಲು ಕಲೆ ಪ್ರಮುಖ ಪಾತ್ರ ವಹಿಸುತ್ತದೆ. ಗ್ರಾಮೀಣ ಭಾಗದ ಜನರು ಉದ್ಯೋಗದ ಒತ್ತಡದಲ್ಲಿ ಕಲೆ ಮತ್ತು ಸಂಸ್ಕೃತಿ ಮರೆಯುತ್ತಿದ್ದಾರೆ’ ಎಂದು ವಿಷಾದಿಸಿದರು.</p>.<p>ಸಿದ್ಧಗಂಗಾ ವೈದ್ಯಕೀಯ ಕಾಲೇಜಿನ ವೈದ್ಯೆ, ಗಾಯಕಿ ಶ್ರಾವ್ಯಾ, ‘ಮಾನವನಿಗೆ ದೇವರು ಕೊಟ್ಟ ವರ ಪ್ರತಿಭೆ. ಸಿಕ್ಕ ಅವಕಾಶ ಬಳಸಿಕೊಳ್ಳಬೇಕು. ನಮ್ಮಲ್ಲಿನ ಪ್ರತಿಭೆಯಿಂದ ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದರು.</p>.<p>ಎಸ್ಎಸ್ಐಟಿ ಪ್ರಾಂಶುಪಾಲ ಮಹಾಂತೇಶ್ ಎಂ.ನಡಕಟ್ಟಿ, ‘ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ಸೃಜನಾತ್ಮಕತೆ, ಕ್ರಿಯಾತ್ಮಕತೆ ಹೆಚ್ಚಿಸುತ್ತದೆ. ಕಲೋತ್ಸವದಲ್ಲಿ ಎಲ್ಲರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ’ ಎಂದು ತಿಳಿಸಿದರು.</p>.<p>ಡೀನ್ ಎಸ್.ರೇಣುಕಾಲತಾ, ನಿವೃತ್ತ ಪ್ರಾಂಶುಪಾಲ ವೀರಯ್ಯ, ಕಲೋತ್ಸವ ಅಧ್ಯಕ್ಷ ಎನ್.ಪ್ರದೀಪ್, ಪ್ರಾಧ್ಯಾಪಕರಾದ ದಿವ್ಯಾಪ್ರಭಾ, ರಾಜೇಶ್ ಕಾಮತ್, ಯೋಗಾನಂದ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-17-1342644949</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಎಸ್ಎಸ್ಐಟಿ) ಶುಕ್ರವಾರ ‘ಕಲೋತ್ಸವ’ಕ್ಕೆ ಅದ್ದೂರಿ ಚಾಲನೆ ದೊರೆಯಿತು.</p>.<p>ನಾಟಕ, ಗುಂಪು ನೃತ್ಯ, ಮಿಮಿಕ್ರಿ, ಪ್ರಬಂಧ ಒಳಗೊಂಡಂತೆ 30ಕ್ಕೂ ಹೆಚ್ಚು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಶನಿವಾರ ಸಂಜೆ ಕಲೋತ್ಸವಕ್ಕೆ ತೆರೆ ಬೀಳಲಿದೆ.</p>.<p>ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ನಂಜುಂಡಪ್ಪ ಕಲೋತ್ಸವ ಉದ್ಘಾಟಿಸಿ ಮಾತನಾಡಿ, ‘ಮನುಷ್ಯ ಉತ್ತಮ ಜೀವನ ಕಟ್ಟಿಕೊಳ್ಳಲು ಕಲೆ ಪ್ರಮುಖ ಪಾತ್ರ ವಹಿಸುತ್ತದೆ. ಗ್ರಾಮೀಣ ಭಾಗದ ಜನರು ಉದ್ಯೋಗದ ಒತ್ತಡದಲ್ಲಿ ಕಲೆ ಮತ್ತು ಸಂಸ್ಕೃತಿ ಮರೆಯುತ್ತಿದ್ದಾರೆ’ ಎಂದು ವಿಷಾದಿಸಿದರು.</p>.<p>ಸಿದ್ಧಗಂಗಾ ವೈದ್ಯಕೀಯ ಕಾಲೇಜಿನ ವೈದ್ಯೆ, ಗಾಯಕಿ ಶ್ರಾವ್ಯಾ, ‘ಮಾನವನಿಗೆ ದೇವರು ಕೊಟ್ಟ ವರ ಪ್ರತಿಭೆ. ಸಿಕ್ಕ ಅವಕಾಶ ಬಳಸಿಕೊಳ್ಳಬೇಕು. ನಮ್ಮಲ್ಲಿನ ಪ್ರತಿಭೆಯಿಂದ ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದರು.</p>.<p>ಎಸ್ಎಸ್ಐಟಿ ಪ್ರಾಂಶುಪಾಲ ಮಹಾಂತೇಶ್ ಎಂ.ನಡಕಟ್ಟಿ, ‘ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ಸೃಜನಾತ್ಮಕತೆ, ಕ್ರಿಯಾತ್ಮಕತೆ ಹೆಚ್ಚಿಸುತ್ತದೆ. ಕಲೋತ್ಸವದಲ್ಲಿ ಎಲ್ಲರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ’ ಎಂದು ತಿಳಿಸಿದರು.</p>.<p>ಡೀನ್ ಎಸ್.ರೇಣುಕಾಲತಾ, ನಿವೃತ್ತ ಪ್ರಾಂಶುಪಾಲ ವೀರಯ್ಯ, ಕಲೋತ್ಸವ ಅಧ್ಯಕ್ಷ ಎನ್.ಪ್ರದೀಪ್, ಪ್ರಾಧ್ಯಾಪಕರಾದ ದಿವ್ಯಾಪ್ರಭಾ, ರಾಜೇಶ್ ಕಾಮತ್, ಯೋಗಾನಂದ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-17-1342644949</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>