<p><strong>ತುಮಕೂರು</strong>: ಸಮೀಕ್ಷೆಗೆ ಹೋಗಿದ್ದ ಮುಸ್ಲಿಂ ಸಮುದಾಯದ ಶಿಕ್ಷಕಿಯೊಬ್ಬರ ಮೇಲೆ ಕೆಲವರು ಗಲಾಟೆ ಮಾಡಿರುವ ಘಟನೆ ನಗರದ ಹೊರವಲಯ ಭೀಮಸಂದ್ರದಲ್ಲಿ ನಡೆದಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಮುಸ್ಲಿಂ ಸಮುದಾಯದ ಶಿಕ್ಷಕಿ ಎಂಬ ಕಾರಣಕ್ಕೆ ಸಮೀಕ್ಷೆಗೆ ಅವಕಾಶ ನೀಡದೆ ಗಲಾಟೆ ಮಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.</p>.<p>‘ಮುಸ್ಲಿಂ ಆಗಿ ಸಮೀಕ್ಷೆಗೆ ಹೇಗೆ ಮನೆ ಬಳಿ ಬಂದಿದ್ದೀಯಾ? ಸಮೀಕ್ಷೆ ಮಾಡಲು ನೀರು ಯಾರು? ಮುಸ್ಲಿಮರ ಮನೆ ಹತ್ತಿರ ಬಿಟ್ಟುಕೊಳ್ಳಬಾರದು. ಮನೆ ಬಳಿಗೆ ಏಕೆ ಬರುತ್ತೀರಾ? ಸಮೀಕ್ಷೆಗೆ ಬರುವಾಗ ಗುರುತಿನ ಕಾರ್ಡ್ ಏಕೆ ತಂದಿಲ್ಲ?’ ಎಂದೆಲ್ಲ ಪ್ರಶ್ನಿಸಲಾಗಿದೆ.</p>.<p>‘ನಮ್ಮ ಮನೆ ಸಮೀಪದಲ್ಲೇ ಇದ್ದು, ಐ.ಡಿ ಕಾರ್ಡ್ ತರುತ್ತೇನೆ. ಸಮೀಕ್ಷೆಗೆ ಅವಕಾಶ ಮಾಡಿಕೊಡಿ’ ಎಂದು ಶಿಕ್ಷಕಿ ಮನವಿ ಮಾಡುತ್ತಿರುವುದು ವಿಡಿಯೊದಲ್ಲಿ ಇದೆ.</p>.<p>ಈ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಶಿಕ್ಷಕಿ ದೂರು ನೀಡಿದ್ದಾರೆ. ಈ ಕುರಿತು ಮಾಹಿತಿ ಪಡೆಯಲು ಯತ್ನಿಸಿದರೂ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಸಂಪರ್ಕಕ್ಕೆ ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಸಮೀಕ್ಷೆಗೆ ಹೋಗಿದ್ದ ಮುಸ್ಲಿಂ ಸಮುದಾಯದ ಶಿಕ್ಷಕಿಯೊಬ್ಬರ ಮೇಲೆ ಕೆಲವರು ಗಲಾಟೆ ಮಾಡಿರುವ ಘಟನೆ ನಗರದ ಹೊರವಲಯ ಭೀಮಸಂದ್ರದಲ್ಲಿ ನಡೆದಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಮುಸ್ಲಿಂ ಸಮುದಾಯದ ಶಿಕ್ಷಕಿ ಎಂಬ ಕಾರಣಕ್ಕೆ ಸಮೀಕ್ಷೆಗೆ ಅವಕಾಶ ನೀಡದೆ ಗಲಾಟೆ ಮಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.</p>.<p>‘ಮುಸ್ಲಿಂ ಆಗಿ ಸಮೀಕ್ಷೆಗೆ ಹೇಗೆ ಮನೆ ಬಳಿ ಬಂದಿದ್ದೀಯಾ? ಸಮೀಕ್ಷೆ ಮಾಡಲು ನೀರು ಯಾರು? ಮುಸ್ಲಿಮರ ಮನೆ ಹತ್ತಿರ ಬಿಟ್ಟುಕೊಳ್ಳಬಾರದು. ಮನೆ ಬಳಿಗೆ ಏಕೆ ಬರುತ್ತೀರಾ? ಸಮೀಕ್ಷೆಗೆ ಬರುವಾಗ ಗುರುತಿನ ಕಾರ್ಡ್ ಏಕೆ ತಂದಿಲ್ಲ?’ ಎಂದೆಲ್ಲ ಪ್ರಶ್ನಿಸಲಾಗಿದೆ.</p>.<p>‘ನಮ್ಮ ಮನೆ ಸಮೀಪದಲ್ಲೇ ಇದ್ದು, ಐ.ಡಿ ಕಾರ್ಡ್ ತರುತ್ತೇನೆ. ಸಮೀಕ್ಷೆಗೆ ಅವಕಾಶ ಮಾಡಿಕೊಡಿ’ ಎಂದು ಶಿಕ್ಷಕಿ ಮನವಿ ಮಾಡುತ್ತಿರುವುದು ವಿಡಿಯೊದಲ್ಲಿ ಇದೆ.</p>.<p>ಈ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಶಿಕ್ಷಕಿ ದೂರು ನೀಡಿದ್ದಾರೆ. ಈ ಕುರಿತು ಮಾಹಿತಿ ಪಡೆಯಲು ಯತ್ನಿಸಿದರೂ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಸಂಪರ್ಕಕ್ಕೆ ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>