<p><strong>ತಿಪಟೂರು</strong>: ತಾಲ್ಲೂಕು ಆಡಳಿತಸೌಧದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ನಗರಸಭೆ ಆಶ್ರಯದಲ್ಲಿ 516ನೇ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಯಿತು.</p>.<p>ಶಾಸಕ ಕೆ.ಷಡಕ್ಷರಿ ಮಾತನಾಡಿ, ಹಿರಿಯರ ತ್ಯಾಗ ಬಲಿದಾನದ ಮೂಲಕ ನಾಡು ಕಟ್ಟಲಾಗಿದೆ. ಅವರ ಕೊಡುಗೆ, ತತ್ವ ಸಿದ್ಧಾಂತಗಳನ್ನು ಮುಂದಿನ ಪೀಳಿಗೆ ಮುಂದುವರೆಸಿಕೊಂಡು ಹೋಗುವ ಸಲುವಾಗಿ ಜಯಂತಿ ಆಚರಣೆ ಮಾಡಲಾಗುತ್ತದೆ ಎಂದರು.</p>.<p>ಕೆಂಪೆಗೌಡ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲಾಗಿದೆ. ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸರ್ಕಾರ ಚಿಂತನೆ ಮಾಡುತ್ತಿದೆ. ಇದಕ್ಕಾಗಿ ಶಿರಾ ಭಾಗದಲ್ಲಿ ಸೂಕ್ತ ಜಾಗ ಗುರುತಿಸಲಾಗಿದೆ ಎಂದರು.</p>.<p>ನಗರಸಭಾ ಅಧ್ಯಕ್ಷೆ ಯಮುನಾಧರಣೇಶ್ ಮಾತನಾಡಿ, ಸಾಂಸ್ಕೃತಿಕ ನಗರವಾಗಿರುವ ಬೆಂಗಳೂರಿನಲ್ಲಿ ಕನ್ನಡ ಭಾಷೆಯನ್ನು ಉಳಿಸಬೇಕಾಗಿದ್ದು ಮರೆಯಾಗುತ್ತಿರುವ ಕನ್ನಡವನ್ನು ಮೆರೆಯುವಂತೆ ಮಾಡಬೇಕು ಎಂದರು.</p>.<p>ಉಪವಿಭಾಗಾಧಿಕಾರಿ ಸಪ್ತಶ್ರೀ, ಉಪನ್ಯಾಸಕ ರೇಣುಕಯ್ಯ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಪ್ರಬಂಧ ಸ್ಪರ್ಧೆ, ಆಶುಭಾಷಣ, ಚಿತ್ರಕಲೆ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ತಹಶೀಲ್ದಾರ್ ಪವನ್ಕುಮಾರ್, ಇಒ ಎಚ್.ಎಂ.ಸುದರ್ಶನ್, ಮೇಘಶ್ರೀಸುಜಿತ್ ಭೂಷಣ್, ಚಿದಾನಂದ್, ವೈದ್ಯ ವಿವೇಜನ್, ಬಸವರಾಜಪ್ಪ, ರಾಮೇಗೌಡ, ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ತಾಲ್ಲೂಕು ಆಡಳಿತಸೌಧದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ನಗರಸಭೆ ಆಶ್ರಯದಲ್ಲಿ 516ನೇ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಯಿತು.</p>.<p>ಶಾಸಕ ಕೆ.ಷಡಕ್ಷರಿ ಮಾತನಾಡಿ, ಹಿರಿಯರ ತ್ಯಾಗ ಬಲಿದಾನದ ಮೂಲಕ ನಾಡು ಕಟ್ಟಲಾಗಿದೆ. ಅವರ ಕೊಡುಗೆ, ತತ್ವ ಸಿದ್ಧಾಂತಗಳನ್ನು ಮುಂದಿನ ಪೀಳಿಗೆ ಮುಂದುವರೆಸಿಕೊಂಡು ಹೋಗುವ ಸಲುವಾಗಿ ಜಯಂತಿ ಆಚರಣೆ ಮಾಡಲಾಗುತ್ತದೆ ಎಂದರು.</p>.<p>ಕೆಂಪೆಗೌಡ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲಾಗಿದೆ. ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸರ್ಕಾರ ಚಿಂತನೆ ಮಾಡುತ್ತಿದೆ. ಇದಕ್ಕಾಗಿ ಶಿರಾ ಭಾಗದಲ್ಲಿ ಸೂಕ್ತ ಜಾಗ ಗುರುತಿಸಲಾಗಿದೆ ಎಂದರು.</p>.<p>ನಗರಸಭಾ ಅಧ್ಯಕ್ಷೆ ಯಮುನಾಧರಣೇಶ್ ಮಾತನಾಡಿ, ಸಾಂಸ್ಕೃತಿಕ ನಗರವಾಗಿರುವ ಬೆಂಗಳೂರಿನಲ್ಲಿ ಕನ್ನಡ ಭಾಷೆಯನ್ನು ಉಳಿಸಬೇಕಾಗಿದ್ದು ಮರೆಯಾಗುತ್ತಿರುವ ಕನ್ನಡವನ್ನು ಮೆರೆಯುವಂತೆ ಮಾಡಬೇಕು ಎಂದರು.</p>.<p>ಉಪವಿಭಾಗಾಧಿಕಾರಿ ಸಪ್ತಶ್ರೀ, ಉಪನ್ಯಾಸಕ ರೇಣುಕಯ್ಯ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಪ್ರಬಂಧ ಸ್ಪರ್ಧೆ, ಆಶುಭಾಷಣ, ಚಿತ್ರಕಲೆ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ತಹಶೀಲ್ದಾರ್ ಪವನ್ಕುಮಾರ್, ಇಒ ಎಚ್.ಎಂ.ಸುದರ್ಶನ್, ಮೇಘಶ್ರೀಸುಜಿತ್ ಭೂಷಣ್, ಚಿದಾನಂದ್, ವೈದ್ಯ ವಿವೇಜನ್, ಬಸವರಾಜಪ್ಪ, ರಾಮೇಗೌಡ, ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>