<p>ತುಮಕೂರು: ಕರ್ನಾಟಕ ನಗರ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ನಿಗಮದಿಂದ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ) ಪಡೆದಿರುವ ₹12 ಕೋಟಿ ಸಾಲ ತೀರುವಳಿ ಮಾಡುವಂತೆ ಶಾಸಕ ಬಿ.ಸುರೇಶ್ಗೌಡ ಹೇಳಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>ಟೂಡಾ ಮಾಡಿರುವ ಸಾಲಕ್ಕೆ ಬಡ್ಡಿ ಸೇರಿ ₹36 ಕೋಟಿ ಆಗಿದೆ. ಕೂಡಲೇ ಬಡ್ಡಿ ಮನ್ನಾ ಮಾಡಿಸಿ ಮೂಲ ಮೊತ್ತ ತೀರಿಸಬೇಕು. ಕಳೆದ ವರ್ಷ ನಡೆದ ಆಯವ್ಯಯ ಸಭೆಯಲ್ಲಿ ಸಾಲ ತೀರಿಸುವ ಬಗ್ಗೆ ಚರ್ಚಿಸಲಾಗಿತ್ತು. ಇದುವರೆಗೆ ವಿಳಂಬ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಅಮಾನಿಕೆರೆ ಪಾರ್ಕ್, ವಾಕಿಂಗ್ ಪಾಥ್ ನಿರ್ವಹಣೆ ಸಮರ್ಪಕವಾಗಿಲ್ಲ. ಬೆಳಗಿನ ಸಮಯದಲ್ಲಿ ವಾಯು ವಿಹಾರಿಗಳಿಗೆ ಉಚಿತವಾಗಿ ಪ್ರವೇಶ ಕಲ್ಪಿಸಬೇಕು ಎಂದು ಸೂಚಿಸಿದರು.</p>.<p>ಶಾಸಕ ಜಿ.ಬಿ.ಜ್ಯೋತಿಗಣೇಶ್, ‘ನಗರದ ಶಿರಾ ಗೇಟ್ನಲ್ಲಿ ರಿಂಗ್ ರಸ್ತೆಗಾಗಿ ಭೂಮಿ ಸ್ವಾಧೀನ ಪಡಿಸಿಕೊಂಡು ರಸ್ತೆ ಅಭಿವೃದ್ಧಿ ಮಾಡಬೇಕು’ ಎಂದರು.</p>.<p>ಕಳೆದ ಮೂರು ವರ್ಷದಿಂದ ₹3 ಕೋಟಿ ಮೊತ್ತಕ್ಕೆ ಟೆಂಡರ್ ಕರೆಯದೆ, ಕೆರೆಗಳ ಅಭಿವೃದ್ಧಿ ಮಾಡದ ಎಂಜಿನಿಯರ್ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡುವಂತೆ ಸಭೆಯಲ್ಲಿ ಚರ್ಚಿಸಲಾಯಿತು. ಟೂಡಾದಿಂದ ನಗರದಲ್ಲಿ ವಾಲಿಬಾಲ್ ಅಂಕಣ, ಈಜುಕೊಳ ನಿರ್ಮಿಸಲು ತೀರ್ಮಾನಿಸಲಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಟೂಡಾ ಆಯುಕ್ತ ಎನ್.ಆರ್.ಉಮೇಶ್ ಚಂದ್ರ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-18-1129866996</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಕರ್ನಾಟಕ ನಗರ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ನಿಗಮದಿಂದ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ) ಪಡೆದಿರುವ ₹12 ಕೋಟಿ ಸಾಲ ತೀರುವಳಿ ಮಾಡುವಂತೆ ಶಾಸಕ ಬಿ.ಸುರೇಶ್ಗೌಡ ಹೇಳಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>ಟೂಡಾ ಮಾಡಿರುವ ಸಾಲಕ್ಕೆ ಬಡ್ಡಿ ಸೇರಿ ₹36 ಕೋಟಿ ಆಗಿದೆ. ಕೂಡಲೇ ಬಡ್ಡಿ ಮನ್ನಾ ಮಾಡಿಸಿ ಮೂಲ ಮೊತ್ತ ತೀರಿಸಬೇಕು. ಕಳೆದ ವರ್ಷ ನಡೆದ ಆಯವ್ಯಯ ಸಭೆಯಲ್ಲಿ ಸಾಲ ತೀರಿಸುವ ಬಗ್ಗೆ ಚರ್ಚಿಸಲಾಗಿತ್ತು. ಇದುವರೆಗೆ ವಿಳಂಬ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಅಮಾನಿಕೆರೆ ಪಾರ್ಕ್, ವಾಕಿಂಗ್ ಪಾಥ್ ನಿರ್ವಹಣೆ ಸಮರ್ಪಕವಾಗಿಲ್ಲ. ಬೆಳಗಿನ ಸಮಯದಲ್ಲಿ ವಾಯು ವಿಹಾರಿಗಳಿಗೆ ಉಚಿತವಾಗಿ ಪ್ರವೇಶ ಕಲ್ಪಿಸಬೇಕು ಎಂದು ಸೂಚಿಸಿದರು.</p>.<p>ಶಾಸಕ ಜಿ.ಬಿ.ಜ್ಯೋತಿಗಣೇಶ್, ‘ನಗರದ ಶಿರಾ ಗೇಟ್ನಲ್ಲಿ ರಿಂಗ್ ರಸ್ತೆಗಾಗಿ ಭೂಮಿ ಸ್ವಾಧೀನ ಪಡಿಸಿಕೊಂಡು ರಸ್ತೆ ಅಭಿವೃದ್ಧಿ ಮಾಡಬೇಕು’ ಎಂದರು.</p>.<p>ಕಳೆದ ಮೂರು ವರ್ಷದಿಂದ ₹3 ಕೋಟಿ ಮೊತ್ತಕ್ಕೆ ಟೆಂಡರ್ ಕರೆಯದೆ, ಕೆರೆಗಳ ಅಭಿವೃದ್ಧಿ ಮಾಡದ ಎಂಜಿನಿಯರ್ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡುವಂತೆ ಸಭೆಯಲ್ಲಿ ಚರ್ಚಿಸಲಾಯಿತು. ಟೂಡಾದಿಂದ ನಗರದಲ್ಲಿ ವಾಲಿಬಾಲ್ ಅಂಕಣ, ಈಜುಕೊಳ ನಿರ್ಮಿಸಲು ತೀರ್ಮಾನಿಸಲಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಟೂಡಾ ಆಯುಕ್ತ ಎನ್.ಆರ್.ಉಮೇಶ್ ಚಂದ್ರ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-18-1129866996</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>