<p>ತುಮಕೂರು: ಪತ್ನಿಯನ್ನು ಕೊಲೆ ಮಾಡಿದ ಗಂಡನಿಗೆ ಜೀವಾವಧಿ ಶಿಕ್ಷೆ, ₹25 ಸಾವಿರ ದಂಡ ವಿಧಿಸಿ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.</p>.<p>ಗುಬ್ಬಿ ಪಟ್ಟಣದ ಕಾಯಿಪೇಟೆ ಬಡಾವಣೆಯ ಜಗದೀಶ ಶಿಕ್ಷೆಗೆ ಒಳಗಾದವನು. 2022 ಏಪ್ರಿಲ್ 19ರಂದು ತನ್ನ ಪತ್ನಿ ಶಿಲ್ಪ ಜತೆಗೆ ಜಗಳ ತೆಗೆದು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದನು.</p>.<p>15 ವರ್ಷಗಳ ಹಿಂದೆ ಜಗದೀಶ, ಶಿಲ್ಪ ವಿವಾಹ ನಡೆದಿತ್ತು. ಆದರೆ ಮಕ್ಕಳಿರಲಿಲ್ಲ. ಜಗದೀಶ ಮದ್ಯ ವ್ಯಸನಿಯಾಗಿದ್ದು, ಬೇರೆ ಹೆಂಗಸರ ಸಹವಾಸ ಹೊಂದಿದ್ದ. ಇದನ್ನು ಪ್ರಶ್ನಿಸಿದ ಶಿಲ್ಪ ಜತೆಗೆ ಜಗಳ ಮಾಡುತ್ತಿದ್ದ.</p>.<p>ತನ್ನ ತಮ್ಮನ ಮದುವೆ ನಿಶ್ಚಿತಾರ್ಥಕ್ಕೆ ಹೋಗುವುದಾಗಿ ಶಿಲ್ಪ ಹೇಳಿದಾಗ ಜಗಳ ತೆಗೆದು ಕೊಲೆ ಮಾಡಿದ್ದ. ತನಿಖೆ ನಡೆಸಿದ್ದ ಗುಬ್ಬಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಎಸ್.ಶಿಲ್ಪ ಅವರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಕೆ.ಸಿ.ದೀಪಕ್ ವಾದ ಮಂಡಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-17-154131370</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಪತ್ನಿಯನ್ನು ಕೊಲೆ ಮಾಡಿದ ಗಂಡನಿಗೆ ಜೀವಾವಧಿ ಶಿಕ್ಷೆ, ₹25 ಸಾವಿರ ದಂಡ ವಿಧಿಸಿ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.</p>.<p>ಗುಬ್ಬಿ ಪಟ್ಟಣದ ಕಾಯಿಪೇಟೆ ಬಡಾವಣೆಯ ಜಗದೀಶ ಶಿಕ್ಷೆಗೆ ಒಳಗಾದವನು. 2022 ಏಪ್ರಿಲ್ 19ರಂದು ತನ್ನ ಪತ್ನಿ ಶಿಲ್ಪ ಜತೆಗೆ ಜಗಳ ತೆಗೆದು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದನು.</p>.<p>15 ವರ್ಷಗಳ ಹಿಂದೆ ಜಗದೀಶ, ಶಿಲ್ಪ ವಿವಾಹ ನಡೆದಿತ್ತು. ಆದರೆ ಮಕ್ಕಳಿರಲಿಲ್ಲ. ಜಗದೀಶ ಮದ್ಯ ವ್ಯಸನಿಯಾಗಿದ್ದು, ಬೇರೆ ಹೆಂಗಸರ ಸಹವಾಸ ಹೊಂದಿದ್ದ. ಇದನ್ನು ಪ್ರಶ್ನಿಸಿದ ಶಿಲ್ಪ ಜತೆಗೆ ಜಗಳ ಮಾಡುತ್ತಿದ್ದ.</p>.<p>ತನ್ನ ತಮ್ಮನ ಮದುವೆ ನಿಶ್ಚಿತಾರ್ಥಕ್ಕೆ ಹೋಗುವುದಾಗಿ ಶಿಲ್ಪ ಹೇಳಿದಾಗ ಜಗಳ ತೆಗೆದು ಕೊಲೆ ಮಾಡಿದ್ದ. ತನಿಖೆ ನಡೆಸಿದ್ದ ಗುಬ್ಬಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಎಸ್.ಶಿಲ್ಪ ಅವರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಕೆ.ಸಿ.ದೀಪಕ್ ವಾದ ಮಂಡಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-17-154131370</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>