ಸಾರ್ವಜನಿಕರು ತ್ವರಿತ ಸೇವಾ ಅಭಿಯಾನದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು. ನಮೂನೆ-2, 3ರಲ್ಲಿ ಆಸ್ತಿ ಅಳತೆಯ ಅದಲು–ಬದಲು, ತಿದ್ದುಪಡಿ, ಅನಧಿಕೃತ ಯುಜಿಡಿ, ನೀರು ಸಂಪರ್ಕ ಅಧಿಕೃತಗೊಳಿಸುವ ಅರ್ಜಿ ಸ್ವೀಕರಿಸಲಾಯಿತು. ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಯಿತು.