<p><strong>ತುಮಕೂರು</strong>: ಯಕ್ಷದೀವಿಗೆ ಸಂಸ್ಥೆಯ ದಶಮಾನೋತ್ಸವ ಸಮಾರಂಭ ಜೂನ್ 7ರಂದು ಬೆಳಿಗ್ಗೆ 10 ಗಂಟೆಗೆ ನಗರದ ರಾಮಕೃಷ್ಣ– ವಿವೇಕಾನಂದ ಆಶ್ರಮದಲ್ಲಿ ನಡೆಯಲಿದೆ ಎಂದು ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ ಇಲ್ಲಿ ಶನಿವಾರ ಹೇಳಿದರು.</p>.<p>‘ಯಕ್ಷಗಾನ ಕಲಾವಿದ ಕೋಡ್ಲ ಗಣಪತಿ ಭಟ್ ಅವರಿಗೆ ಯಕ್ಷದೀವಿಗೆಯ ವಾರ್ಷಿಕ ಗೌರವ ಪ್ರದಾನ ಮಾಡಲಾಗುತ್ತದೆ. ಕಲಾವಿದ ಎಂ.ಪ್ರಭಾಕರ ಜೋಶಿ, ಕೈಗಾರಿಕೋದ್ಯಮಿ ಎಚ್.ಜಿ.ಚಂದ್ರಶೇಖರ್, ಮುಖಂಡ ಆರ್.ಎಲ್.ರಮೇಶ್ ಬಾಬು ಇತರರು ಭಾಗವಹಿಸಲಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಯಕ್ಷದೀವಿಗೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ‘ಬಭ್ರುವಾಹನ ಕಾಳಗ’, ‘ನರಕಾಸುರ ಮೋಕ್ಷ’ ಹಾಗೂ ‘ಇಂದ್ರಜಿತು ಕಾಳಗ’ ಯಕ್ಷಗಾನ ಪ್ರದರ್ಶಿಸಲಿದ್ದಾರೆ. ಯಕ್ಷಗಾನದ ವಿಸ್ತರಣೆಗೆ ಶ್ರಮಿಸಿದವರನ್ನು ಸನ್ಮಾನಿಸಲಾಗುತ್ತದೆ ಎಂದರು.</p>.<p>ಸಮಾರೋಪ ಸಮಾರಂಭದಲ್ಲಿ ಸ್ವಾಮಿ ವೀರೇಶಾನಂದ ಸರಸ್ವತಿ ಆಶೀರ್ವಚನ ನೀಡಲಿದ್ದಾರೆ. ಅಶ್ವಿನಿ ಆಯುರ್ವೇದ ಆಸ್ಪತ್ರೆ ಮುಖ್ಯಸ್ಥ ಡಾ.ಕೆ.ಜಿ.ರಾಘವೇಂದ್ರ, ವಿದ್ಯಾವಾಹಿನಿ ಸಂಸ್ಥೆಯ ಕಾರ್ಯದರ್ಶಿ ಎನ್.ಬಿ.ಪ್ರದೀಪ್ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.</p>.<p>ಯಕ್ಷದೀವಿಗೆ ಅಧ್ಯಕ್ಷೆ ಆರತಿ ಪಟ್ರಮೆ, ಕೆ.ವಿ.ಸಿಬಂತಿ ಪದ್ಮನಾಭ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-17-1228978709</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಯಕ್ಷದೀವಿಗೆ ಸಂಸ್ಥೆಯ ದಶಮಾನೋತ್ಸವ ಸಮಾರಂಭ ಜೂನ್ 7ರಂದು ಬೆಳಿಗ್ಗೆ 10 ಗಂಟೆಗೆ ನಗರದ ರಾಮಕೃಷ್ಣ– ವಿವೇಕಾನಂದ ಆಶ್ರಮದಲ್ಲಿ ನಡೆಯಲಿದೆ ಎಂದು ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ ಇಲ್ಲಿ ಶನಿವಾರ ಹೇಳಿದರು.</p>.<p>‘ಯಕ್ಷಗಾನ ಕಲಾವಿದ ಕೋಡ್ಲ ಗಣಪತಿ ಭಟ್ ಅವರಿಗೆ ಯಕ್ಷದೀವಿಗೆಯ ವಾರ್ಷಿಕ ಗೌರವ ಪ್ರದಾನ ಮಾಡಲಾಗುತ್ತದೆ. ಕಲಾವಿದ ಎಂ.ಪ್ರಭಾಕರ ಜೋಶಿ, ಕೈಗಾರಿಕೋದ್ಯಮಿ ಎಚ್.ಜಿ.ಚಂದ್ರಶೇಖರ್, ಮುಖಂಡ ಆರ್.ಎಲ್.ರಮೇಶ್ ಬಾಬು ಇತರರು ಭಾಗವಹಿಸಲಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಯಕ್ಷದೀವಿಗೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ‘ಬಭ್ರುವಾಹನ ಕಾಳಗ’, ‘ನರಕಾಸುರ ಮೋಕ್ಷ’ ಹಾಗೂ ‘ಇಂದ್ರಜಿತು ಕಾಳಗ’ ಯಕ್ಷಗಾನ ಪ್ರದರ್ಶಿಸಲಿದ್ದಾರೆ. ಯಕ್ಷಗಾನದ ವಿಸ್ತರಣೆಗೆ ಶ್ರಮಿಸಿದವರನ್ನು ಸನ್ಮಾನಿಸಲಾಗುತ್ತದೆ ಎಂದರು.</p>.<p>ಸಮಾರೋಪ ಸಮಾರಂಭದಲ್ಲಿ ಸ್ವಾಮಿ ವೀರೇಶಾನಂದ ಸರಸ್ವತಿ ಆಶೀರ್ವಚನ ನೀಡಲಿದ್ದಾರೆ. ಅಶ್ವಿನಿ ಆಯುರ್ವೇದ ಆಸ್ಪತ್ರೆ ಮುಖ್ಯಸ್ಥ ಡಾ.ಕೆ.ಜಿ.ರಾಘವೇಂದ್ರ, ವಿದ್ಯಾವಾಹಿನಿ ಸಂಸ್ಥೆಯ ಕಾರ್ಯದರ್ಶಿ ಎನ್.ಬಿ.ಪ್ರದೀಪ್ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.</p>.<p>ಯಕ್ಷದೀವಿಗೆ ಅಧ್ಯಕ್ಷೆ ಆರತಿ ಪಟ್ರಮೆ, ಕೆ.ವಿ.ಸಿಬಂತಿ ಪದ್ಮನಾಭ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-17-1228978709</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>