ಕನ್ನಡ ಶಾಲೆಗಳ ಉಳಿವಿಗಾಗಿ ಕನ್ನಡ ಭಾಷಾ ಮಾಧ್ಯಮ ನೀತಿಯನ್ನು ಪದವಿ, ಸ್ನಾತಕೋತ್ತರ ಪದವಿ ಹಂತಕ್ಕೂ ಮುಂದುವರಿಸಬೇಕು. ಕೃಷ್ಣ ಕೊಳ್ಳದ ನೀರಾವರಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಸಮಗ್ರವಾದ ಯೋಜನೆ ರೂಪಿಸಬೇಕು ಎಂದು ನಿರ್ಣಯದ ಮೂಲಕ ಒತ್ತಾಯಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ನಿರ್ಣಯ ಮಂಡಿಸಿದರು.