<p><strong>ತುಮಕೂರು:</strong> ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ 9 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.</p>.<p>9 ಜನರಲ್ಲಿ 6 ಜನರು ಮುಂಬೈ ಪ್ರಯಾಣ ಮಾಡಿದವರಾಗಿದ್ದಾರೆ. ಮುಂಬೈನಿಂದ ಬರುತ್ತಿದ್ದಂತೆ ಇವರನ್ನು ತುಮಕೂರು ಹಾಗೂ ತುರುವೇಕೆರೆ ತಾಲ್ಲೂಕು ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.</p>.<p>ಉಳಿದಂತೆ ಮೂರು ಜನರ ಪೈಕಿ ಒಬ್ಬರು ತುಮಕೂರು ಗ್ರಾಮಾಂತರ ಹೆಬ್ಬೂರಿನ 66 ವರ್ಷದ ವ್ಯಕ್ತಿ ಡಯಾಬಿಟಿಸ್ ಹಾಗೂ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲುದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಸೋಂಕು ದೃಢಪಟ್ಟಿದೆ.</p>.<p>ಇನ್ನೊಬ್ಬರು ತುಮಕೂರು ಸದಾಶಿವನಗರದ 24 ವರ್ಷದ ಗರ್ಭಿಣಿಗೆ ಸೋಂಕು ತಗಲಿದ್ದು, ಗಂಭೀರ ಪ್ರಕರಣವಾದ್ದರಿಂದ ಇವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ಗುರುವಾರ(ನಿನ್ನೆ) ರಾತ್ರಿ ಹೆರಿಗೆಯಾಗಿದೆ. ತಾಯಿ, ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಇನ್ನೊಬ್ಬರು ಬೆಂಗಳೂರು ಗ್ರಾಮಾಂತರ ಡಾಬಸ್ಪೇಟೆಯ 55 ವರ್ಷದ ಮಹಿಳೆ ಚಿಕಿತ್ಸೆಗೆಂದು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೂ ಸೋಂಕು ತಗಲಿರುವುದು ದೃಢಪಟ್ಟಿದೆ.</p>.<p>ಸೋಂಕು ತಡೆಗಟ್ಟುವ ಸಲುವಾಗಿ ತುಮಕೂರು ನಗರದ ಸದಾಶಿವನಗರ ಹಾಗೂ ತುಮಕೂರು ಗ್ರಾಮಾಂತರ ಹೆಬ್ಬೂರಿನಲ್ಲಿ ನಿರ್ಬಂಧಿತ ವಲಯ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ 9 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.</p>.<p>9 ಜನರಲ್ಲಿ 6 ಜನರು ಮುಂಬೈ ಪ್ರಯಾಣ ಮಾಡಿದವರಾಗಿದ್ದಾರೆ. ಮುಂಬೈನಿಂದ ಬರುತ್ತಿದ್ದಂತೆ ಇವರನ್ನು ತುಮಕೂರು ಹಾಗೂ ತುರುವೇಕೆರೆ ತಾಲ್ಲೂಕು ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.</p>.<p>ಉಳಿದಂತೆ ಮೂರು ಜನರ ಪೈಕಿ ಒಬ್ಬರು ತುಮಕೂರು ಗ್ರಾಮಾಂತರ ಹೆಬ್ಬೂರಿನ 66 ವರ್ಷದ ವ್ಯಕ್ತಿ ಡಯಾಬಿಟಿಸ್ ಹಾಗೂ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲುದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಸೋಂಕು ದೃಢಪಟ್ಟಿದೆ.</p>.<p>ಇನ್ನೊಬ್ಬರು ತುಮಕೂರು ಸದಾಶಿವನಗರದ 24 ವರ್ಷದ ಗರ್ಭಿಣಿಗೆ ಸೋಂಕು ತಗಲಿದ್ದು, ಗಂಭೀರ ಪ್ರಕರಣವಾದ್ದರಿಂದ ಇವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ಗುರುವಾರ(ನಿನ್ನೆ) ರಾತ್ರಿ ಹೆರಿಗೆಯಾಗಿದೆ. ತಾಯಿ, ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಇನ್ನೊಬ್ಬರು ಬೆಂಗಳೂರು ಗ್ರಾಮಾಂತರ ಡಾಬಸ್ಪೇಟೆಯ 55 ವರ್ಷದ ಮಹಿಳೆ ಚಿಕಿತ್ಸೆಗೆಂದು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೂ ಸೋಂಕು ತಗಲಿರುವುದು ದೃಢಪಟ್ಟಿದೆ.</p>.<p>ಸೋಂಕು ತಡೆಗಟ್ಟುವ ಸಲುವಾಗಿ ತುಮಕೂರು ನಗರದ ಸದಾಶಿವನಗರ ಹಾಗೂ ತುಮಕೂರು ಗ್ರಾಮಾಂತರ ಹೆಬ್ಬೂರಿನಲ್ಲಿ ನಿರ್ಬಂಧಿತ ವಲಯ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>