ತುಮಕೂರು: ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಶುಕ್ರವಾರ ಕರೆ ನೀಡಿದ್ದ ತುಮಕೂರು ನಗರ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಜಂಟಿಯಾಗಿ ಬಂದ್ಗೆ ಕರೆ ನೀಡಿವೆ. ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ವಾಣಿಜ್ಯ ವಹಿವಾಟು ಬಹುತೇಕ ಬಂದ್ ಆಗಿದ್ದು, ವಾಹನಗಳ ಸಂಚಾರ ವಿರಳವಾಗಿದೆ. ಹೋಟೆಲ್ಗಳು, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಜನ ಸಂಚಾರ ಕಡಿಮೆ ಇದೆ. ಹೊರಗಡೆಯಿಂದ ಬಂದು ಹೋಗುವ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸುತ್ತಿದ್ದರೆ, ನಗರ ಸಾರಿಗೆ ಬಸ್ಗಳು ರಸ್ತೆಗೆ ಇಳಿದಿಲ್ಲ. ಶಾಲಾ, ಕಾಲೇಜುಗಳು ಮುಚ್ಚಿವೆ.
ಪೆಟ್ರೋಲ್ ಬಂಕ್, ಆಸ್ಪತ್ರೆ, ಔಷಧಿ ಅಂಗಡಿಗಳು, ಹಾಲಿನ ಬುತ್ಗಳು ತೆರೆದಿವೆ. ಬೆಳಿಗ್ಗೆ ಅಂಗಡಿಗಳು, ಹೋಟೆಲ್ಗಳನ್ನು ತೆರೆಯದಂತೆ ಮುಚ್ಚಿಸಲಾಯಿತು.